![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 8, 2020, 12:58 PM IST
ಮಲಪ್ಪುರಂ: ಕೇರಳ ವಿಮಾನ ದುರಂತದಲ್ಲಿ ಮೃತಪಟ್ಟ ಇಬ್ಬರು ವ್ಯಕ್ತಿಗಳಿಗೆ ಕೋವಿಡ್ ವೈರಸ್ ಸೋಂಕಿರುವುದು ದೃಢಪಟ್ಟಿದೆ ಎಂದು ಸಚಿವ ಕೆ.ಟಿ ಜಲೀಲ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇದರಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರೆಲ್ಲರೂ ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಕೇರಳ ಸರ್ಕಾರ ಸೂಚಿಸಿದೆ.
ದುಬೈನಿಂದ ಬಂದು ಕೇರಳದ ಕೋಯಿಕ್ಕೋಡ್ ಬಳಿಯ ಕರಿಪುರ ವಿಮಾನ ನಿಲ್ದಾಣದಲ್ಲಿ ಪತನವಾದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 190 ಪ್ರಯಾಣಿಕರಿದ್ದರು. ಇವರಲ್ಲಿ ಈಗಾಗಲೇ 20 ಮಂದಿ ಮೃತಪಟ್ಟಿದ್ದು ಇಬ್ಬರಿಗೆ ಕೋವಿಡ್ ವೈರಸ್ ತಗುಲಿರುವುದು ದೃಢಪಟ್ಟಿದೆ.
ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಮೃತಪಟ್ಟವರನ್ನು ಸೇರಿಸಿದಂತೆ ಗಾಯಗೊಂಡವರನ್ನೂ ಸರ್ಕಾರದ ಮಾರ್ಗಸೂಚಿ ಅನ್ವಯ ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇದೀಗ ಮೃತರಿಬ್ಬರಿಗೆ ಸೋಂಕಿರುವುದು ದೃಢಪಟ್ಟಿದ್ದರಿಂದ ಪ್ರೋಟೋಕಾಲ್ ಪ್ರಕಾರ ಶವಪರೀಕ್ಷೆಯನ್ನು ನಡೆಸಲಾಗುವುದು ಎಂದು ಮಲ್ಲಪುರಂ ಜಿಲ್ಲಾಧಿಕಾರಿ ಕೆ. ಗೋಪಾಲಕೃಷ್ಣನ್ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲಾ ಜನರು ಆರೋಗ್ಯ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪರೀಕ್ಷೆಗೊಳಪಡಬೇಕು ಎಂದು ಆರೋಗ್ಯ ಸಚಿವೆ ಕೆ ಕೆ ಶೈಲಾಜಾ ಕೇಳಿದ್ದಾರೆ.
190 ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ವಿಮಾನವು ಶುಕ್ರವಾರ ರಾತ್ರಿ ಲ್ಯಾಂಡಿಂಗ್ ಆಗುವಾಗ ಕಮರಿಗೆ ಬಿದ್ದು ಎರಡು ಹೋಳಾಗಿತ್ತು. ಮಾತ್ರವಲ್ಲದೆ 20 ಪ್ರಯಾಣಿಕರು ಮೃತಪಟ್ಟಿದ್ದರು. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾದ ಸುಮಾರು 16 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.