Lok Sabha; ಪ್ರತಿಷ್ಠೆ ಬದಿಗೊತ್ತಿ ವಿಪಕ್ಷ ಒಕ್ಕೂಟಕ್ಕೆ ಗೆಲುವು ಕೊಡಿಸಿದ ಖರ್ಗೆ
Team Udayavani, Jun 5, 2024, 6:42 AM IST
ಹೊಸದಿಲ್ಲಿ: ಬಿಜೆಪಿಯನ್ನು ಅಧಿಕಾ ರದಿಂದ ಕೆಳಗಿಳಿಸುವ ಉದ್ದೇಶದಿಂದ ರಚನೆಯಾದ ಇಂಡಿಯಾ ಮೈತ್ರಿ ಕೂಟದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಆದರೂ ಧೃತಿಗೆಡದೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ಮಿತ್ರ ಪಕ್ಷಗಳನ್ನು ಒಗ್ಗಟ್ಟಾಗಿ ತೆಗೆದುಕೊಂಡು ಈ ಬಾರಿ ಯ ಚುನಾವಣೆಯಲ್ಲಿ 232 ಸ್ಥಾನ ಗಳನ್ನು ಗೆಲ್ಲಿಸಿದ್ದಾರೆ.
ಮೈತ್ರಿಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಈ ಒಕ್ಕೂಟ 1 ತಿಂಗಳ ಕಾಲವೂ ಒಟ್ಟಿಗಿರುವುದಿಲ್ಲ ಎಂದು ಬಿಜೆಪಿ ನಾಯಕರು ಮೂದಲಿಸಿದ್ದರು. ಮೈತ್ರಿಕೂಟದಲ್ಲಿದ್ದ ಕೆಲವು ನಾಯಕರೇ ಚುನಾವಣೆಗೂ ಮುನ್ನ ಕೂಟವನ್ನು ತೊರೆದರು. ಇದ್ಯಾವುದನ್ನೂ ಲೆಕ್ಕಿಸದೇ ಒಗ್ಗಟ್ಟು ಕಾಪಾಡಿಕೊಳ್ಳುವಲ್ಲಿ ಖರ್ಗೆ ಯಶಸ್ವಿಯಾದರು.
ಕಾಂಗ್ರೆಸ್ ಅತೀದೊಡ್ಡ ಪಕ್ಷ ಎಂಬ ಪ್ರತಿಷ್ಠೆಯನ್ನು ಬದಿಗಿಟ್ಟು ಎಲ್ಲ ಮಿತ್ರಪಕ್ಷಗಳ ಮಾತನ್ನು ಕೇಳಿ ಖರ್ಗೆ ಸೀಟು ಹಂಚಿಕೆ ನಡೆಸಿದರು.
ಮಿತ್ರ ಪಕ್ಷಗಳು ಗೆಲ್ಲಬಲ್ಲವು ಎನಿಸಿದ ಸ್ಥಾನ ಗಳನ್ನು ಮುಲಾಜಿಲ್ಲದೇ ಅವ ರಿಗೆ ಬಿಟ್ಟು ಕೊಟ್ಟರು. ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಘೋಷಿಸದೇ, ಚುನಾ ವಣೆಯ ಬಳಿಕ ಇದನ್ನು ಮಿತ್ರಪಕ್ಷಗಳು ಒಟ್ಟಾಗಿ ಘೋಷಿಸುತ್ತವೆ ಎಂದು ಹೇಳುವ ಮೂಲಕ ಒಗ್ಗಟ್ಟನ್ನು ಕಾಪಾ ಡಿಕೊಂಡರು.
ದೀರ್ಘಕಾಲ ದೇಶ ಆಳಿದ್ದ ಪಕ್ಷವೊಂದು ಇದೇ ಮೊದಲ ಬಾರಿಗೆ ಅತಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ ಎಂದು ಪ್ರಧಾನಿ ಮೋದಿಯಾದಿಯಾಗಿ ಬಿಜೆಪಿಯ ಅನೇಕರು ವ್ಯಂಗ್ಯವಾಡಿದರು. ಆದರೆ ಅದ್ಯಾವುದರ ಬಗ್ಗೆಯೂ ಖರ್ಗೆ ತಲೆಕೆಡಿಸಿಕೊಳ್ಳದೇ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು “ಗೆಲ್ಲುವುದೊಂದೇ ಗುರಿ’ ಎಂಬ ಶಪಥದೊಂದಿಗೆ ಮುನ್ನಡೆದರು. ಆ ನಡೆಯೇ ಇಂದಿನ ಈ ಫಲಿತಾಂಶಕ್ಕೆ ಕಾರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.