NDA ಸರಕಾರ ಶೀಘ್ರ ಪತನ ಎಂದ ಖರ್ಗೆ; ಮೂರ್ಖರ ಸ್ವರ್ಗ ಎಂದ ಅಣ್ಣಾಮಲೈ
ಖರ್ಗೆ ಹೇಳಿಕೆಗೆ ಜೆಡಿಯು ತಿರುಗೇಟು
Team Udayavani, Jun 16, 2024, 12:39 AM IST
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದ ವಿರುದ್ಧ ಟೀಕಾ ಪ್ರಹಾರವನ್ನು ಮುಂದು ವರಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಎನ್ಡಿಎ ಅಲ್ಪಮತದ ಸರಕಾರವಾಗಿದ್ದು, ಇದು ಆಕಸ್ಮಿಕವಾಗಿ ಅಧಿಕಾರಕ್ಕೆ ಬಂದಿದೆ. ಮೋದಿಗೆ ಜನಾ ದೇಶವಿಲ್ಲ ಮತ್ತು ಯಾವ ಕ್ಷಣದಲ್ಲಿ ಸರಕಾರವು ಪತನವಾಗಬಹುದು’ ಎಂದು ಹೇಳಿದರು.
“ಈ ಸರಕಾರವು ಯಾವಾಗಬೇಕಾದರೂ ಬೀಳಬಹುದು. ಆದರೂ ಅದು ಮುಂದುವರಿಯಬೇಕು ಎಂದು ಬಯಸುತ್ತೇವೆ. ದೇಶಕ್ಕೆ ಒಳ್ಳೆಯದಾಗಬೇಕು. ದೇಶವನ್ನು ಬಲಿಷ್ಠಗೊಳಿಸಲು ನಾವು ಒಂದಾಗಿ ಕೆಲಸ ಮಾಡಲು ತಯಾ ರಿ ದ್ದೇವೆ. ಆದರೆ ಯಾವುದಾದರೂ ಚೆನ್ನಾಗಿ ನಡೆಯದಂತೆ ನೋಡಿಕೊಳ್ಳುವ ಗುಣ ನಮ್ಮ ಪ್ರಧಾನಿ ಗಳಿಗಿದೆ. ಹಾಗಿದ್ದೂ, ದೇಶಕ್ಕಾಗಿ ನಾವು ಸಹಕಾರ ನೀಡಲು ಸಿದ್ಧರಿದ್ದೇವೆ’ ಎಂದು ಖರ್ಗೆ ತಿಳಿಸಿದ್ದಾರೆ.
ಖರ್ಗೆ ಹೇಳಿಕೆಗೆ ಎನ್ಡಿಎ ಪಾಲುದಾರ ಪಕ್ಷ ಜೆಡಿಯು ಟೀಕಿಸಿದೆ. “ಪಿ.ವಿ.ನರಹಸಿಂಹ ರಾವ್ ಮತ್ತು ಡಾ| ಮನಮೋಹನ್ ಸಿಂಗ್ ನೇತೃತ್ವ ಸರಕಾರಗಳಲ್ಲಿ ಕಾಂಗ್ರೆಸ್ ಯಾವ ರೀತಿ ವರ್ತಿಸುತ್ತಿತ್ತು ಎಂಬುದನ್ನು ಖರ್ಗೆ ಅವರು ನೆನಪಿಸಿಕೊಳ್ಳಲಿ’ ಎಂದು ಜೆಡಿಯು ಎಂಎಲ್ಸಿ ನೀರಜ್ ಕುಮಾರ್ ಹೇಳಿದ್ದಾರೆ. ಖರ್ಗೆ ಹೇಳಿಕೆಯನ್ನು ಆರ್ಜೆಡಿ ಬೆಂಬಲಿಸಿದೆ. ಇತ್ತೀಚೆಗಷ್ಟೇ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದು ಜೆಡಿಯು ಮತ್ತು ಟಿಡಿಪಿಗಳ ನೆರವಿನಿಂದ ಎನ್ಡಿಎ ಸರಕಾರವನ್ನು ರಚಿಸಿದೆ.
ಮೂರ್ಖರ ಸ್ವರ್ಗದಲ್ಲಿ ಖರ್ಗೆ: ಅಣ್ಣಾಮಲೈ
ಎನ್ಡಿಎ ಸರಕಾರ ಪತನವಾಗಲಿದೆ ಎಂಬ ಹೇಳಿ ಕೆಗೆ ತಿರುಗೇಟು ನೀಡಿರುವ ತಮಿ ಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು, “ಖರ್ಗೆ ಅವರು ಮೂರ್ಖರ ಸ್ವರ್ಗದಲ್ಲಿ ವಾಸಿಸುತ್ತಿದ್ದಾರೆಂದು’ ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಜಾಸತ್ತಾತ್ಮಕ ಮನೋಭಾವನೆಯನ್ನು ನೋಡಿದ ಅನಂತರ ಖರ್ಗೆ ಅವರು ಸರಕಾರ ಬೀಳಬಹುದು ಎಂದು ಭಾವಿಸಿದರೆ, ಅವರು ಮೂರ್ಖರ ಸ್ವರ್ಗದಲ್ಲಿ ವಾಸಿಸುತ್ತಿ¨ªಾರೆ ಎಂದು ನಾನು ಭಾವಿಸುತ್ತೇನೆ ಎಂದು ಅಣ್ಣಾಮಲೈ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.