![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Oct 27, 2022, 7:20 AM IST
ನವದೆಹಲಿ : 24 ವರ್ಷಗಳ ನಂತರ ಕಾಂಗ್ರೆಸ್ನ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬುಧವಾರ ಅಧಿಕಾರ ವಹಿಸಿಕೊಂಡರು, ಕಾರ್ಯಕರ್ತರಿಗೆ ಶಕ್ತಿ ತುಂಬಲು ರಾಹುಲ್ ಗಾಂಧಿಯವರ ‘ಡರೋ ಮತ್’ ಘೋಷಣೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷ “ಸುಳ್ಳು, ವಿಶ್ವಾಸಘಾತುಕ ಮತ್ತು ದ್ವೇಷದ ವ್ಯವಸ್ಥೆಯನ್ನು ಕೆಡವುತ್ತದೆ” ಎಂದು ಘೋಷಿಸಿದರು.
ಸುಮಾರು ಎರಡು ದಶಕಗಳ ಕಾಲ ತಾನು ಮುನ್ನಡೆಸಿರುವ ಪಕ್ಷದ ಅಧಿಕಾರವನ್ನು ಹಸ್ತಾಂತರಿಸಿದ ಸೋನಿಯಾ ಗಾಂಧಿ “ಬದಲಾವಣೆ ವಿಶ್ವದ ನಿಯಮ” ಎಂದು ಹೇಳಿದರು. “ಇಂದು, ನಾನು ಈ ಜವಾಬ್ದಾರಿಯಿಂದ ಮುಕ್ತಳಾಗುತ್ತೇನೆ ಮತ್ತು ಈ ಭಾರವು ನನ್ನಿಂದ ಹೊರಗುಳಿಯುತ್ತದೆ. ಅದಕ್ಕಾಗಿಯೇ ನಾನು ನಿರಾಳವಾಗಿದ್ದೇನೆ” ಎಂದರು.
ಮುಂದಿರುವ ಸವಾಲುಗಳನ್ನು ಒಪ್ಪಿಕೊಂಡ ಖರ್ಗೆ, ಹಿಮಾಚಲ ಪ್ರದೇಶ ಮತ್ತು ಗುಜರಾತ್ ಹಾಗೂ ಇತರೆ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಸ್ಥಾಪಿಸಿದ ಪ್ರಜಾಪ್ರಭುತ್ವವನ್ನು ಬಿಜೆಪಿ ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಸರ್ವಸ್ವವನ್ನು ನೀಡಬೇಕಾಗಿದೆ ಎಂದರು.
“ನಾವು ಎರಡು ರಾಜ್ಯಗಳಲ್ಲಿ ದೃಢವಾಗಿ ಕಾರ್ಯನಿರ್ವಹಿಸಬೇಕಾಗಿದೆ ಮತ್ತು ಅವುಗಳಲ್ಲಿ ಒಟ್ಟಾಗಿ ಯಶಸ್ವಿಯಾಗಲು ನಮಗೆ ಪ್ರತಿಯೊಬ್ಬರ ಶಕ್ತಿಯ ಅಗತ್ಯವಿದೆ. ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಒತ್ತಿ ಹೇಳಿದರು.
ಚುನಾವಣೆಯಲ್ಲಿ ಜಯಗಳಿಸಲು ಶಶಿ ತರೂರ್ ಅವರನ್ನು ಸೋಲಿಸಿದ 80 ವರ್ಷದ ಖರ್ಗೆ ಅವರು ಹಳೆಯ ಪಕ್ಷವು ಪ್ರಸ್ತುತತೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕಾಂಗ್ರೆಸ್ ಐತಿಹಾಸಿಕ ಚುನಾವಣಾ ಕೆಳಮಟ್ಟದಲ್ಲಿದ್ದು ಎರಡು ರಾಜ್ಯಗಳಲ್ಲಿಮಾತ್ರ ಅಧಿಕಾರದಲ್ಲಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ಪಕ್ಷವನ್ನು ಅಧಿಕಾರಕ್ಕೆ ಕೊಂಡೊಯ್ಯುಲು ಶ್ರಮ ಹಾಕಬೇಕಾಗಿರುವುದು ಅವರ ತಕ್ಷಣದ ಕೆಲಸವಾಗಿದೆ. ಅಧಿಕಾರದಲ್ಲಿರುವ ಬಿಜೆಪಿ ಮತ್ತು ಉತ್ಸುಕ ಎಎಪಿಯನ್ನು ಎದುರಿಸಬೇಕಾಗಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
You seem to have an Ad Blocker on.
To continue reading, please turn it off or whitelist Udayavani.