Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್ ಶಾ
Team Udayavani, Sep 30, 2024, 11:43 AM IST
ಹೊಸದಿಲ್ಲಿ: ʼಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಮುನ್ನ ನಾನು ಸಾಯುವುದಿಲ್ಲʼ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ (ಸೆ.30) ಟೀಕಿಸಿದ್ದು, ʼಇದು ಕಹಿ ದ್ವೇಷದ ಪ್ರದರ್ಶನʼ ಎಂದು ಬಣ್ಣಿಸಿದ್ದಾರೆ.
ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅಸ್ವಸ್ಥಗೊಂಡಿದ್ದ ಖರ್ಗೆ ಅವರು ಬಳಿಕ ಈ ಹೇಳಿಕೆ ನೀಡಿದ್ದರು.
ಖರ್ಗೆಯವರ ಹೇಳಿಕೆಗಳು ಕಾಂಗ್ರೆಸ್ ಮತ್ತು ಅದರ ನಾಯಕರು ಪ್ರಧಾನಿಯ ಬಗ್ಗೆ ಹೊಂದಿರುವ “ದ್ವೇಷ ಮತ್ತು ಭಯ” ವನ್ನು ಪ್ರತಿಬಿಂಬಿಸುತ್ತವೆ ಎಂದು ಶಾ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥರು ಅನಗತ್ಯವಾಗಿ ಪ್ರಧಾನಿ ಮೋದಿಯನ್ನು ತಮ್ಮ ವೈಯಕ್ತಿಕ ಆರೋಗ್ಯ ವಿಷಯಗಳಿಗೆ ಎಳೆದುಕೊಂಡು, ದ್ವೇಷ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಜಮ್ಮು ಕಾಶ್ಮೀರದ ಕತುವಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿ ಕುಸಿದಿದ್ದರು. ಇದಾದ ಬಳಿಕ ಖರ್ಗೆ ಅವರು ʼನಾನು ಇಷ್ಟು ಬೇಗ ಸಾಯುವುದಿಲ್ಲ, ಕನಿಷ್ಠ ಮೋದಿಯವರನ್ನು ಸೋಲಿಸದೆ ಸಾಯುವುದಿಲ್ಲʼ ಎಂದಿದ್ದರು.
ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಗೆ ಇಂದು ಟ್ವೀಟ್ ಮೂಲಕ ಅಮಿತ್ ಶಾ ಟೀಕೆ ಮಾಡಿದ್ದಾರೆ. ಅಲ್ಲದೆ, “ಈ ಕಾಂಗ್ರೆಸ್ಸಿಗರಿಗೆ ಪ್ರಧಾನಿ ಮೋದಿಯವರ ಬಗ್ಗೆ ಎಷ್ಟು ದ್ವೇಷ ಮತ್ತು ಭಯವಿದೆ. ಅವರು ನಿರಂತರವಾಗಿ ಮೋದಿಯವರ ಬಗ್ಗೆ ಯೋಚಿಸುತ್ತಿದ್ದಾರೆ” ಎಂದಿದ್ದಾರೆ.
“ಖರ್ಗೆಯವರ ಆರೋಗ್ಯ ಸುಧಾರಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವರು ಹಲವು ವರ್ಷಗಳ ಕಾಲ ಬಾಳಲಿ ಎಂದು ನಾವೆಲ್ಲಾ ಪ್ರಾರ್ಥನೆ ಮಾಡುತ್ತೇವೆ. ಅವರು ಇನ್ನಷ್ಟು ವರ್ಷಗಳ ಕಾಲ ಬದುಕಬೇಕು, ಅವರು 2047ರ ವಿಕಾಸ ಭಾರತ ನೋಡುವಂತಾಗಲಿ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್ ಖೇರ್ ಫೋಟೊ!
Haryana;ಭಾರತ್ ಜೋಡೋ ಮಾದರಿ ಪ್ರಚಾರ ಇಂದು ಶುರು?
Rajnath Singh; ಸ್ನೇಹ ಇದ್ದಿದ್ದರೆ ಪಾಕ್ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು
Bangladesh ಅಕ್ರಮ ವಲಸಿಗರ ಆಧಾರ್ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ
Arrested: ಜಲಮಂಡಳಿಯ ಸೆಂಟ್ರಿಂಗ್ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ
Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.