Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
ಟ್ರೈನಿ ವೈದ್ಯೆ ಕೇಸು ಮುಚ್ಚಿಹಾಕುವ ಆಯಾಮದ ತನಿಖೆ ನಡೆಯಲಿ: ಪೀಠ
Team Udayavani, Sep 17, 2024, 11:09 PM IST
ಕೋಲ್ಕತಾ: ಪಶ್ಚಿಮ ಬಂಗಾಲ ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಸಲ್ಲಿಸಿರುವ ಸ್ಥಿತಿಗತಿ ವರದಿ ಮನಸ್ಸನ್ನು ಕಲಕುವ ಹಾಗೂ ಆತಂಕಕಾರಿ ಅಂಶಗಳನ್ನು ಒಳಗೊಂಡಿದೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ಸಿಬಿಐ ತನಿಖಾ ವರದಿಯನ್ನು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಪರಿಶೀಲಿಸಿದೆ. ಘಟನ ಸ್ಥಳದಿಂದ ಸಂತ್ರಸ್ತೆಯ ಒಳ ಉಡುಪಗಳನ್ನು ಮೊದಲಿಗೆ ವಶಪಡಿಸಿಕೊಂಡಿಲ್ಲ. ಹಾಗಾಗಿ ಯಾವ ದಿನಾಂಕದಲ್ಲಿ ಅವುಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂಬುದು ದೃಢಪಟ್ಟಿಲ್ಲ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಈ ಬಗ್ಗೆ ನ್ಯಾಯಪೀಠ ಆತಂಕ ವ್ಯಕ್ತಪಡಿಸಿ, ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆಯೇ ಎಂಬ ಆಯಾಮವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಅದಕ್ಕೆ ಅಗತ್ಯ ಸಮಯವನ್ನು ನೀಡಬೇಕಿದೆ ಎಂದು ನ್ಯಾಯಪೀಠ ಹೇಳಿದೆ.
ಇದೇ ವೇಳೆ ಟ್ರೈನಿ ವೈದ್ಯೆಯ ಹೆಸರು, ಮಾಹಿತಿ ತೆಗೆದುಹಾಕುವಂತೆ ವಿಕಿಪಿಡೀಯಾಗೆ ಸುಪ್ರೀಂ ಸೂಚಿಸಿದೆ. ಜತೆಗೆ ವೈದ್ಯೆ ಹತ್ಯೆ ಹೊಣೆ ಹೊತ್ತು ಸಿಎಂ ಮಮತಾ ರಾಜೀನಾಮೆಗೆ ನಿರ್ದೇಶನ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಜಾ ಮಾಡಿದೆ.
ಮಮತಾ ಸರಕಾರಕ್ಕೆ ತರಾಟೆ: ರಾಜ್ಯ ಸರಕಾರವು ವೈದ್ಯರ ಸುರಕ್ಷೆಗೆ ಕೈಗೊಂಡಿರುವ ಕ್ರಮಗಳನ್ನು ನ್ಯಾಯಪೀಠ ಪರಿಶೀಲಿಸಿ ” ರಟ್ಟಿರೇರ್ ಸಾತಿ’ಗೆ ಗುತ್ತಿಗೆ ಭದ್ರತಾ ಸಿಬಂದಿಯನ್ನು ನೇಮಿಸಲು ಯೋಜಿಸಿದ್ದೀರಾ? ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಅದೇ ರೀತಿ ಗುತ್ತಿಗೆ ಸಿಬಂದಿಯಾಗಿದ್ದರು. ಇದು ನಿಮ್ಮ ಗಮನದಲ್ಲಿರಲಿ ಎಂದು ಹೇಳಿದೆ. ಜತೆಗೆ ಯಾವುದೇ ಮಹಿಳೆಗೆ ರಾತ್ರಿ ಕೆಲಸ ಮಾಡಬೇಡಿ ಎಂದು ಹೇಳುವ ಹಕ್ಕು ನಿಮಗಿಲ್ಲ, ಅವರಿಗೆ ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ ಎಂದು ನ್ಯಾಯಪೀಠ ಹೇಳಿದೆ.
ವಿಚಾರಣೆ ನೇರಪ್ರಸಾರ ಸ್ಥಗಿತಕ್ಕೆ ನಕಾರ
ಟ್ರೈನಿ ವೈದ್ಯೆ ಕೇಸಿನಲ್ಲಿ ಪ.ಬಂಗಾಲ ಸರಕಾರವನ್ನು ಪ್ರತಿನಿಧಿಸುವ ಮಹಿಳಾ ವಕೀಲರಿಗೆ ಆ್ಯಸಿಡ್ ದಾಳಿಯಂಥ ಬೆದರಿಕೆಗಳು ಬರುತ್ತಿವೆ. ಹಾಗಾಗಿ ವಿಚಾರಣೆಯ ನೇರ ಪ್ರಸಾರ ಮಾಡಬಾರದು ಎಂದು ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ. ಆದರೆ ಸಿಜೆಐ ತಡೆ ನೀಡಲು ನಿರಾಕರಿಸಿದ್ದು, ನೇರಪ್ರಸಾರ ಸಾರ್ವಜನಿಕ ಹಿತಾಸಕ್ತಿಗಾಗಿ ಮಾಡುತ್ತಿರುವುದು. ವಕೀಲರಿಗೆ ಬೆದರಿಕೆ ಬಂದರೆ ನಾವು ಮಧ್ಯಪ್ರವೇಶಿಸುತ್ತೇವೆ. ಆದರೆ ನೇರಪ್ರಸಾರಕ್ಕೆ ತಡೆ ನೀಡಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.