![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 6, 2022, 10:10 PM IST
ಕೋಲ್ಕತಾ: ನಗರದ ಪಾರ್ಕ್ ಸ್ಟ್ರೀಟ್ನಲ್ಲಿರುವ ಇಂಡಿಯನ್ ಮ್ಯೂಸಿಯಂ ಕಟ್ಟಡದಲ್ಲಿ ಭದ್ರತಾ ಸಿಬಂದಿಯೊರವನಿಂದ ಗುಂಡಿನ ದಾಳಿ ನಡೆದ ಘಟನೆ ಶನಿವಾರ ವರದಿಯಾಗಿದ್ದು, ಸಿಐಎಸ್ಎಫ್ ಕಾನ್ಸ್ಟೆಬಲ್ ಓರ್ವರು ಸಾವನ್ನಪ್ಪಿದ್ದು, ಮತ್ತೊಬ್ಬ ಡಿಎಸ್ಪಿ ಶ್ರೇಣಿಯ ಅಧಿಕಾರಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಸಿಐಎಸ್ಎಫ್ ಬ್ಯಾರಕ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ವರದಿಗಳ ಪ್ರಕಾರ, ಸಿಐಎಸ್ಎಫ್ ಸಿಬ್ಬಂದಿ ಎಕೆ-47 ರೈಫಲ್ನಿಂದ ಗುಂಡು ಹಾರಿಸಲಾಗಿದೆ.
ಕೋಲ್ಕತಾ ಪೊಲೀಸ್ ಕಮಾಂಡೋಗಳು ಮತ್ತು ಅರೆಸೇನಾ ಪಡೆಯ ಜಂಟಿ ತಂಡವು ಒಂದು ಗಂಟೆಯ ಕಾರ್ಯಾಚರಣೆಯ ನಂತರ ದಾಳಿಕೋರನನ್ನು ತಟಸ್ಥಗೊಳಿಸಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂಪೂರ್ಣ ಕಾರ್ಯಾಚರಣೆಯ ನೇತೃತ್ವವನ್ನು ನಗರ ಪೊಲೀಸ್ ಕಮಿಷನರ್, ವಿನೀತ್ ಗೋಯೆಲ್ ಅವರು ಸ್ಥಳಕ್ಕೆ ಧಾವಿಸಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ವಹಿಸಿದ್ದರು.
ಹತ್ಯೆಯಾದ ಸಿಐಎಸ್ಎಫ್ ಸಿಬಂದಿಯನ್ನು ಸಹಾಯಕ ಸಬ್ ಇನ್ಸ್ಪೆಕ್ಟರ್ ರಂಜಿತ್ ಸರೋಂಗಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಸಿಐಎಸ್ಎಫ್ ಅಧಿಕಾರಿಯನ್ನು ಸರ್ಕಾರಿ ಸ್ವಾಮ್ಯದ ಎಸ್ಎಸ್ಕೆಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಹಾಯಕ ಕಮಾಂಡೆಂಟ್ ಶ್ರೇಣಿಯ ಅಧಿಕಾರಿ ಸುಬೀರ್ ಘೋಷ್ ಎಂದು ಗುರುತಿಸಲಾಗಿದೆ.
ಗುಂಡಿನ ದಾಳಿಯ ನಂತರ ಮ್ಯೂಸಿಯಂನಲ್ಲಿದ್ದ ದಾಳಿಕೋರ ಜವಾನನ ಗುರುತನ್ನು ಪೊಲೀಸರು ಅಥವಾ ಸಿಐಎಸ್ಎಫ್ ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.