ಕೋಲ್ಕತಾ: ತಲೆಎತ್ತುತ್ತಿದೆ ಭಾಷಾ ಮ್ಯೂಸಿಯಂ; ಮುಂದಿನ ವರ್ಷಾರಂಭದಲ್ಲೇ ಲೋಕಾರ್ಪಣೆ ಸಾಧ್ಯತೆ

ಕನ್ನಡ, ಕೊಂಕಣಿ ಸೇರಿ 22 ಭಾಷೆಗಳಿಗೆಂದೇ "ಶಬ್ದ ಲೋಕ'ದ ನಿರ್ಮಾಣ

Team Udayavani, Aug 22, 2022, 7:55 AM IST

ಕೋಲ್ಕತಾ: ತಲೆಎತ್ತುತ್ತಿದೆ ಭಾಷಾ ಮ್ಯೂಸಿಯಂ; ಮುಂದಿನ ವರ್ಷಾರಂಭದಲ್ಲೇ ಲೋಕಾರ್ಪಣೆ ಸಾಧ್ಯತೆ

ಕೋಲ್ಕತಾ: ದೇಶದಲ್ಲಿ ಇದೇ ಮೊದಲ ಬಾರಿಗೆ ಕನ್ನಡ, ಕೊಂಕಣಿ ಸೇರಿದಂತೆ ಭಾರತೀಯ ಭಾಷೆಗಳು, ಬರೆಹ ಮತ್ತು ಪದಗಳಿಗೆಂದೇ ಮೀಸಲಾದ ಹೊಸ ಮ್ಯೂಸಿಯಂವೊಂದು ತಲೆ ಎತ್ತುತ್ತಿದೆ.

ಪಶ್ಚಿಮ ಬಂಗಾಲದ ಕೋಲ್ಕತಾದ ನ್ಯಾಶ‌ನಲ್‌ ಲೈಬ್ರರಿ ಕ್ಯಾಂಪಸ್‌ನಲ್ಲಿರುವ ಐತಿಹಾಸಿಕ ಹೌಸ್‌ ಆಫ್ ಬೆಲ್ವೆಡೆರ್‌ನಲ್ಲಿ ಈ ವಸ್ತು ಸಂಗ್ರಹಾಲಯವು ನಿರ್ಮಾಣಗೊಳ್ಳುತ್ತಿದ್ದು, ಮುಂದಿನ ವರ್ಷದ ಆರಂಭದಲ್ಲಿ ಅದು ಸಾರ್ವಜನಿಕರಿಗೆ ಮುಕ್ತವಾಗುವ ಸಾಧ್ಯತೆಯಿದೆ.

ಪ್ರಮುಖ ಧ್ಯೇಯಗಳೇನು?
ವಿಶೇಷವಾಗಿ ಪ್ರಮುಖ ವಿದ್ವಾಂಸರು, ಕವಿಗಳು ಹಾಗೂ ಬರೆಹಗಾರರನ್ನು ಗಮನದಲ್ಲಿಟ್ಟುಕೊಂಡು ಭಾಷೆಗಳು, ಬರವಣಿಗೆಗಳು ಮತ್ತು ಸಾಹಿತ್ಯಗಳ ಇತಿಹಾಸವನ್ನು ಸಂರಕ್ಷಿಸುವುದೇ ಶಬ್ದಲೋಕ್‌ ಸ್ಥಾಪನೆಯ ಪ್ರಮುಖ ಧ್ಯೇಯ ಎಂದು ನ್ಯಾಶ‌ನಲ್‌ ಲೈಬ್ರರಿ ಪ್ರಧಾನ ನಿರ್ದೇಶಕ ಅಜಯ್‌ ಪ್ರತಾಪ್‌ ಸಿಂ ಸ್‌ ಹೇಳಿದ್ದಾರೆ. ಇಲ್ಲಿ ಮಕ್ಕಳಿಂದ ಹಿರಿಯ ನಾಗರಿಕರವರೆಗೆ ಎಲ್ಲರಿಗೂ ಅರ್ಥವಾಗುವಂತೆ ನಮ್ಮ ವಿಶಿಷ್ಟ ಪರಂಪರೆಯನ್ನು ತಾಂತ್ರಿಕ ಸಲಕರಣೆಗಳ ಮೂಲಕ ಪ್ರದರ್ಶಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಯಾವೆಲ್ಲ ಭಾಷೆಗಳಿಗೆ ಆದ್ಯತೆ?
ಕನ್ನಡ, ಕೊಂಕಣಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಹಿಂದಿ, ಕಾಶ್ಮೀರಿ, ಮಲಯಾಳ, ಮಣಿಪುರಿ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ಸಿಂಧಿ, ತಮಿಳು, ತೆಲುಗು, ಉರ್ದು, ಬೋಡೋ, ಸಂಥಾಲಿ, ಮೈಥಿಲಿ ಮತ್ತು ಡೋಗ್ರಿ… ಹೀಗೆ 22 ಶಾಸ್ತ್ರೀಯ ಭಾಷೆಗಳ ವಿಕಸನವನ್ನು ಅರಿಯುವ ಹಾಗೂ ಭಾಷೆಗಳಿಗೆ ಸಂಬಂಧಿಸಿದ ಪ್ರಮುಖ ಟ್ರೆಂಡ್‌ಗಳನ್ನು ತಿಳಿಯುವ ಉದ್ದೇಶದಿಂದ “ವರ್ಡ್‌ ಮ್ಯೂಸಿಯಂ’ ಅಥವಾ “ಶಬ್ದಲೋಕ್‌’ ಅನ್ನು ರೂಪಿಸಲಾಗುತ್ತಿದೆ.

ಏನೇನಿರಲಿದೆ?
ಭಾಷೆಗಳ ಇತಿಹಾಸದ ಜತೆಗೆ ಮುದ್ರಣ ಯಂತ್ರದ ಇತಿಹಾಸ, ಸಾರ್ವಜನಿಕ ಗ್ರಂಥಾಲಯಗಳು ಬೆಳೆದುಬಂದ ಹಾದಿ, ಬೆಲ್ವೆಡೆರ್‌ ಎಸ್ಟೇಟ್‌ನ ಚರಿತ್ರೆಯನ್ನೂ ಈ ಮ್ಯೂಸಿಯಂ ಒಳಗೊಂಡಿ ರಲಿದೆ. ಅಲ್ಲದೇ ಇಲ್ಲಿ ಎಲ್‌ಇಡಿ ಪ್ರಾಜೆಕ್ಟರ್‌ಗಳು, ವರ್ಚುವಲ್‌ ರಿಯಾಲಿಟಿ ಸಲಕರಣೆಗಳು, ಗ್ರಾಫಿಕ್‌ ಗೋಡೆಗಳು, ಇಂಟರ್ಯಾಕ್ಟಿವ್‌ ಗೇಮ್ಸ್‌, ಹಸ್ತಪ್ರತಿಗಳು, ಹರಪ್ಪನ್‌ ಮುದ್ರೆಯ ಪ್ರತಿಕೃತಿಗಳು, ನಾಣ್ಯಗಳು ಇಲ್ಲಿರಲಿವೆ. 2010ರಲ್ಲೇ ಈ ಮ್ಯೂಸಿಯಂ ಸ್ಥಾಪನೆ ಪ್ರಸ್ತಾವವನ್ನು ಸರಕಾರದ ಮುಂದಿಟ್ಟಿದ್ದು, ಅದಕ್ಕೆ ಸರಕಾರ ಒಪ್ಪಿಗೆಯನ್ನೂ ನೀಡಿತ್ತು. ಅದರಂತೆ ನಿರ್ಮಾಣ ಕಾರ್ಯ ಆರಂಭ ವಾಗಿದ್ದು, ಕೆಲವೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.