![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 12, 2021, 12:14 PM IST
ಹರಿದ್ವಾರ : ದೇಶದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಅಲೆ ಹಠಾತ್ ಏರಿಕೆಯಿಂದ ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಯಾದ ಸಂದರ್ಭದಲ್ಲೇ ಉತ್ತರಾಖಂಡದ ಹರಿದ್ವಾರದಲ್ಲಿ ಮಹಾಕುಂಭ ಮೇಳ ಆರಂಭವಾಗಿದ್ದು, ಲಕ್ಷೋಪಲಕ್ಷ ಮಂದಿ ಗಂಗಾ ಪವಿತ್ರ ಸ್ನಾನಕ್ಕಾಗಿ ಹರಿದ್ವಾರಕ್ಕೆ ಧಾವಿಸಿದ್ದಾರೆ.
ಮಹಾಕುಂಭ ಮೇಳಕ್ಕೆ ಆಗಮಿಸಿದ ಜನರ ನಡುವೆ ಸಾಮಾಜಿಕ ಅಂತರ ಸೇರಿ ಕೋವಿಡ್ ನಿಯಮಾವಳಿಗಳು ಮಾಯವಾಗಿವೆ. ಮಹಾಕುಂಭ ಪವಿತ್ರ ಸ್ನಾನಕ್ಕಾಗಿ ಬಂದವರನ್ನು ನಿರ್ವಹಿಸುವುದು ಕೂಡ ಕಷ್ಟವಾಗಿದೆ.
ಓದಿ : ಜನರೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್
ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಎಂದು ನಿರಂತರವಾಗಿ ಭಕ್ತಾದಿಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಅವರು ಕೇಳುತ್ತಿಲ್ಲ. ದೇಶದ ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದ ಭಕ್ತಾದಿಗಳ ನಡುವೆ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಕಷ್ಟವಾಗುತ್ತಿದೆ. ಜನರ ಗುಂಪಿನಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವವರಿಗೆ ದಂಡ ವಿಧಿಸಲು ಕೂಡ ಸಾಧ್ಯವಾಗುತ್ತಿಲ್ಲ. ಹರ್ ಕಿ ಪೌರಿ ಘಾಟ್ ನಲ್ಲಿ ಸಾಮಾಜಿಕ ಅಂತರ ಇಲ್ಲದಂತಾಗಿದೆ ಎಂದು ಹರಿದ್ವಾರದಲ್ಲಿ ಕಾರ್ಯ ನಿರತವಾಗಿರುವ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿರುವುದನ್ನು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
Uttarakhand: Sadhus participate in the second ‘shahi snan’ of Maha Kumbh at Har Ki Pauri ghat in Haridwar pic.twitter.com/VMjd4h5Gcp
— ANI (@ANI) April 12, 2021
ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನ ನಿತ್ಯ ಏರಿಕೆಯಾಗುತ್ತಿದೆ. ಘಾಟ್ ನಲ್ಲಿ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಪ್ರಯತ್ನ ಪಟ್ಟರೆ ಕಾಲ್ತುಳಿತ ಸಂಭವಿಸುವ ಸಾಧ್ಯತೆ ಇದೆ ಎಂದು ಕೂಡ ಗುಂಜ್ಯಾಲ್ ತಿಳಿಸಿದ್ದಾರೆ.
ಇನ್ನು, ಪವಿತ್ರ ಗಂಗಾ ಸ್ನಾನಕ್ಕಾಗಿ ಮಹಾ ಕುಂಭ ಸಂದರ್ಭದಲ್ಲಿ ಬೆಳಗ್ಗೆ ಏಳು ಗಂಟೆಯವರೆಗೆ ಮಾತ್ರ ಸಾಮಾನ್ಯ ಜನರಿಗೆ ಅವಕಾಶವಿದ್ದು, ತದನಂತರ ಸಾಧುಗಳಿಗೆ ಅವಕಾಶವಿದೆ.
#WATCH | Sadhus of Niranjani Akhara participate in second ‘shahi snan’ of #MahaKumbh at Har ki Pauri ghat in Uttarakhand’s Haridwar pic.twitter.com/eluxwFv8gG
— ANI (@ANI) April 12, 2021
ಓದಿ : ಪರಲೋಕದ ಮುಕ್ತಿದಾತರ ಇಹಲೋಕದ ಬವಣೆ : ರುದ್ರಭೂಮಿ ನೌಕರರಿಗೆ 10 ತಿಂಗಳಿಂದ ವೇತನವಿಲ್ಲ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.