LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

ಭಾರತ-ಬಾಂಗ್ಲಾ ಗಡಿ ಮಾತುಕತೆ ಮುಂದೂಡಿಕೆ

Team Udayavani, Oct 26, 2024, 6:45 AM IST

1-adaa

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ನಡುವೆ ರಷ್ಯಾದ ಕಜಾನ್‌ನಲ್ಲಿ ನಡೆಸಲಾಗಿದ್ದ ದ್ವಿಪಕ್ಷೀಯ ಮಾತುಕತೆಯ ಬೆನ್ನಲ್ಲೇ ಗಡಿ ಪ್ರದೇಶದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಿವೆ. ಬಿಕ್ಕಟ್ಟಿನಿಂದ ಕೂಡಿದ್ದ ಚೀನ ಗಡಿಯಿಂದ ಸೇನಾಪಡೆ ಯನ್ನು ಹಿಂಪಡೆಯಲು ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ. ಅ. 28, ಅ. 29ರ ಒಳಗಾಗಿ ಇದು ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿಗಷ್ಟೇ 4 ವರ್ಷಗಳ ಸೇನಾ ಬಿಕ್ಕಟ್ಟಿಗೆ ಅಂತ್ಯ ಹಾಡುವ ಉದ್ದೇಶದಿಂದ ಪೂರ್ವ ಲಡಾಖ್‌ನ ವಾಸ್ತವ ಗಡಿ ರೇಖೆ(ಎಲ್‌ಎಸಿ)ಯ ಬಳಿ ಕೇವಲ ಗಸ್ತು ಮಾತ್ರ ನಡೆಸಲು ಉಭಯ ದೇಶಗಳು ಒಪ್ಪಂದ ಮಾಡಿಕೊಂಡಿದ್ದವು. ಅದರ ಮುಂದುವರಿದ ಭಾಗವಾಗಿ ಇದೀಗ ಸೇನೆಯನ್ನು ಹಿಂಪಡೆಯಲು ಆರಂಭಿಸಿವೆ.

2020ಕ್ಕೂ ಮೊದಲಿದ್ದ ಪ್ರದೇಶಕ್ಕೆ ಸೇನೆ: ಇದೀಗ ಉಭಯ ದೇಶಗಳ ನಡುವೆ ನಡೆದಿರುವ ಒಪ್ಪಂದದ ಪ್ರಕಾರ, ದೆಪ್ಸಾಂಗ್‌ ಮತ್ತು ಡೆಮಾcಕ್‌ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಸೇನಾಪಡೆಗಳು ಗಲ್ವಾನ್‌ ಬಿಕ್ಕಟ್ಟು ಆರಂಭವಾಗುವುದಕ್ಕೂ ಮೊದಲು ಇದ್ದ ಪ್ರದೇಶಗಳಿಗೆ ತೆರಳಲಿವೆ. ಚೀನದ ಸೇನೆ 18 ಕಿ.ಮೀ. ಹಿಂದಕ್ಕೆ ಸರಿಯಲಿದೆ. ಉಭಯ ದೇಶಗಳು ಒಮ್ಮೆ ತಮ್ಮ ಸೇನೆಯನ್ನು ಹಿಂದಕ್ಕೆ ಪಡೆದುಕೊಂಡ ಬಳಿಕ ಈ ಪ್ರದೇಶದಲ್ಲಿ ಮತ್ತೂಮ್ಮೆ ಗಸ್ತು ಆರಂಭವಾಗಲಿದೆ.

ಗಸ್ತು ಬಗ್ಗೆ ಮೊದಲೇ ಮಾಹಿತಿ ಕೊಡಬೇಕು: ಗಡಿ ಪ್ರದೇಶದಲ್ಲಿ ಉಂಟಾಗುವ ಸಮಸ್ಯೆಯ ಪ್ರಮಾಣವನ್ನು ತಗ್ಗಿಸಲು ಉಭಯ ದೇಶಗಳು ಮೊದಲೇ ತಮ್ಮ ಗಸ್ತಿನ ಬಗ್ಗೆ ಮಾಹಿತಿ ನೀಡಬೇಕು. ಅಲ್ಲದೇ ಪ್ರತೀ ಗಸ್ತು ತಂಡದಲ್ಲಿ 14-15 ಮಂದಿ ಮಾತ್ರ ಇರಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ. 2020ರಲ್ಲಿ ಭಾರತ ಸೇನೆ ಡೆಮಾcಕ್‌ ಮತ್ತು ದೆಪ್ಸಾಂಗ್‌ಗಳನ್ನು ನಿರ್ಮಾಣ ಮಾಡಿದ್ದ ಟೆಂಟ್‌ ಹಾಗೂ ಇತರ ಸೌಕರ್ಯಗಳನ್ನು ತೆರವು ಮಾಡುವ ಕೆಲಸವನ್ನು ಈಗಾಗಲೇ ಆರಂಭಿಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಭಾರತ-ಬಾಂಗ್ಲಾ ಗಡಿ ಮಾತುಕತೆ ಮುಂದೂಡಿಕೆ
ಮುಂದಿನ ತಿಂಗಳು ಹೊಸದಿಲ್ಲಿಯಲ್ಲಿ ನಡೆಯಬೇಕಾಗಿದ್ದ ಭಾರತ-ಬಾಂಗ್ಲಾದೇಶ ಗಡಿ ಮಾತುಕತೆ ಮುಂದೂಡಲಾಗಿದೆ. ಶೇಖ್‌ ಹಸೀನಾ ಸರಕಾರದ ಪದಚ್ಯುತಿಯ ಬಳಿಕ ಮೊದಲ ಬಾರಿ, ಬಿಎಸ್‌ಎಫ್ ಮತ್ತು ಬಾರ್ಡರ್‌ ಗಾರ್ಡ್‌ ಬಾಂಗ್ಲಾದೇಶ್‌ ಮಹಾನಿರ್ದೇಶಕರ ನಡುವೆ ನ.18ರಿಂದ 22ರ ವರೆಗೆ ನಡೆಯಬೇಕಾಗಿತ್ತು. ನಿಯೋಜಿತ ದಿನಾಂಕಕ್ಕಿಂತಲೂ ಮೊದಲೇ ಸಭೆ ನಡೆಸಲು ಬಾಂಗ್ಲಾದೇಶ ಉದ್ದೇಶಿಸಿದ್ದು, ಈ ಬದಲಾವಣೆಗಾಗಿ ಬಾಂಗ್ಲಾ ಅಧಿಕಾರಿಗಳು ಭಾರತೀಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

ಉಭಯ ರಾಷ್ಟ್ರಗಳು 1975ರಿಂದ 1992ರ ವರೆಗೆ ವಾರ್ಷಿಕವಾಗಿ ಮತ್ತು 1993ರಿಂದ ದ್ವೆ„ವಾರ್ಷಿಕ ಮಾತುಕತೆಗಳನ್ನು ಹೊಸದಿಲ್ಲಿ ಅಥವಾ ಢಾಕಾದಲ್ಲಿ ನಡೆಸುತ್ತಾ ಬಂದಿವೆ.

 

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

rape

Madhya Pradesh; ಪತಿ ಎದುರೇ ನವ ವಿವಾಹಿತೆ ಮೇಲೆ ಗ್ಯಾಂಗ್ ರೇಪ್‌: 7 ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.