ಲಡಾಖ್ ನಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿದೆ; ವಿದೇಶಾಂಗ ಸಚಿವ ಜೈಶಂಕರ್
ಭಾರತ ಮತ್ತು ಚೀನಾ ನಡುವೆ ತುಂಬಾ ಆಳವಾಗಿ ರಾಜಕೀಯ ಮಟ್ಟದಲ್ಲಿಯೇ ಮಾತುಕತೆ ನಡೆಯಬೇಕಾಗಿದೆ
Team Udayavani, Sep 8, 2020, 10:31 AM IST
ನವದೆಹಲಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪೂರ್ವ ಲಡಾಖ್ ನಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದು, ಈ ಸಂಘರ್ಷವನ್ನು ತಣ್ಣಗಾಗಿಸಲು ಭಾರತ ಮತ್ತು ಚೀನಾ ನಡುವೆ ತುಂಬಾ ಆಳವಾಗಿ ರಾಜಕೀಯ ಮಟ್ಟದಲ್ಲಿಯೇ ಮಾತುಕತೆ ನಡೆಯಬೇಕಾಗಿದೆ ಎಂದು ತಿಳಿಸಿದ್ದಾರೆ.
ಇಂಡಿಯನ್ ಎಕ್ಸ್ ಪ್ರೆಸ್ ನ್ಯೂಸ್ ಪೇಪರ್ ಜತೆಗೆ ಮಾತುಕತೆ ನಡೆಸಿದ ವೇಳೆ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ವಿವರಿಸಿದೆ. ಉಭಯ ದೇಶಗಳ ನಡುವಿನ ಸಂಬಂಧ ಗಡಿ ವಿವಾದದಿಂದ ಹದಗೆಡಬಾರದು. ಗಾಲ್ವಾನ್ ನಲ್ಲಿ ದುರದೃಷ್ಟಕರ ಘಟನೆಯೊಂದು ನಡೆದು ಹೋಗಿದೆ ಎಂದು ನಾನು ಈ ಮೊದಲೇ ಬರೆದಿದ್ದೆ ಎಂದು(ದ ಇಂಡಿಯನ್ ವೇ ಎಂಬ ನೂತನ ಪುಸ್ತಕ ಉದಾಹರಣೆ) ಜೈಶಂಕರ್ ತಿಳಿಸಿದ್ದಾರೆ.
ಜೂನ್ 15ರಂದು ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಮಾತುಕತೆಗೆ ತೆರಳಿದ್ದ 20 ಮಂದಿ ಭಾರತೀಯ ಸೈನಿಕರನ್ನು ಚೀನಾ ಸೇನೆ ಏಕಾಏಕಿ ಹಲ್ಲೆ, ದಾಳಿ ನಡೆಸಿತ್ತು. ಇದರ ಪರಿಣಾಮ 20 ಯೋಧರು ಹುತಾತ್ಮರಾಗಿದ್ದರು. ಈ ಘಟನೆ ನಂತರ ಪೂರ್ವ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ನಡುವೆ ಘರ್ಷಣೆ ನಡೆಯುತ್ತಲೇ ಇದೆ.
ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನಾಪಡೆಯ ಪ್ರತೀಕಾರಕ್ಕೆ 40ಕ್ಕೂ ಅಧಿಕ ಚೀನಾ ಸೈನಿಕರು ಸಾವನ್ನಪ್ಪಿದ್ದರು. ಆದರೆ ಎಷ್ಟು ಮಂದಿ ಸಾವನ್ನಪ್ಪಿದ್ದರು ಎಂಬ ಬಗ್ಗೆ ಚೀನಾ ಅಧಿಕೃತ ಮಾಹಿತಿ ಬಹಿರಂಗಪಡಿಸಿರಲಿಲ್ಲವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ
Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ
Muslims ಸಂಖ್ಯೆ ಏರಿಕೆ, 2027ಕ್ಕೆ ಬಿಜೆಪಿ ಆಡಳಿತಕ್ಕೆ ತೆರೆ: ಸಮಾಜವಾದಿ ಪಕ್ಷದ ಶಾಸಕ
Tirupati Laddu Controversy;ಆಂಧ್ರ ಸಿಎಂ ನಾಯ್ಡುಗೆ ತರಾಟೆ: ಸಾಕ್ಷ್ಯ ಕೇಳಿದ ಸುಪ್ರೀಂ
Cleaning; ಸ್ವಚ್ಛತಾ ಕಾರ್ಮಿಕರ ಪೈಕಿ ಶೇ.92 ಎಸ್ಸಿ, ಎಸ್ಟಿ, ಒಬಿಸಿ ವರ್ಗದವರು: ಕೇಂದ್ರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ
Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್ಸ್ಪೆಕ್ಟರ್ ವಿರುದ್ಧ ದೂರು ದಾಖಲು!
Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ
Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್!
Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.