ಲಾಲು ಮೇವು ಹಗರಣದ ಎಲ್ಲ ಕೇಸ್ಗಳ ವಿಚಾರಣೆ ಎದುರಿಸಬೇಕು: ಸುಪ್ರೀಂ
Team Udayavani, May 8, 2017, 11:33 AM IST
ಹೊಸದಿಲ್ಲಿ : ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮೇವು ಹಗರಣದ ಕ್ರಿಮಿನಲ್ ಸಂಚಿನ ಆರೋಪದ ಎಲ್ಲ ನಾಲ್ಕು ಕೇಸುಗಳಲ್ಲಿ ವಿಚಾರಣೆಯನ್ನು ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಸೋಮವಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ತನ್ನ ವಿರುದ್ಧದ ಮೇವು ಹಗರಣದ ಆರೋಪಗಳನ್ನು ಕೈಬಿಡುವಂತೆ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ ಸಿಬಿಐ ಮಾಡಿಕೊಂಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಪುರಸರRರಿಸಿ, “ಮೇವು ಹಗರಣದ ಎಲ್ಲ ಕೇಸುಗಳಲ್ಲಿ ಲಾಲು ವಿಚಾರಣೆ ಎದುರಿಸಬೇಕು’ ಎಂದು ಸ್ಪಷ್ಟಪಡಿಸಿತು. ಅಂತೆಯೇ ಸುಪ್ರೀಂ ಕೋರ್ಟಿನ ಈ ಆದೇಶ ಭಾರೀ ಲಾಲುಗೆ ಭಾರೀ ದೊಡ್ಡ ಹಿನ್ನಡೆ ಎನಿಸಿತು.
ಲಾಲು ವಿರುದ್ಧದ ಆರೋಪಗಳು ಪರಸ್ಪರ ವಿಭಿನ್ನ ಅಪರಾಧಗಳಿಗೆ ಸಂಬಂಧಿಸಿರುವುದರಿಂದ ಅವೆಲ್ಲವುಗಳನ್ನು ಒಂದಾಗಿ ಸೇರಿಸಲಾಗದು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಹಾಗಾಗಿ ಲಾಲು ಯಾದವ್ ಅವರಿನ್ನು ವೇವು ಹಗರಣ ಸಂಬಂಧಿಸಿದ ಎಲ್ಲ ಕೇಸುಗಳಲ್ಲಿ ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ.
ಈ ಹಿಂದೆ ಜಾರ್ಖಂಡ್ ಹೈಕೋರ್ಟ್, ಆರ್ಜೆಡಿ ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿಯಾಗಿರುವ ಲಾಲು ಅವರ ವಿರುದ್ದದ ಮೇವು ಹಗರಣದ ಆರೋಪಗಳನ್ನು ಕೈಬಿಟ್ಟಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ, ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು.
ಇದೇ ವೇಳೆ ಲಾಲು ಅವರು, ರಾಜಕಾರಣಿಯಾಗಿ ಪರಿವರ್ತಿತನಾಗಿರುವ ಡಾನ್ ಮೊಹಮ್ಮದ್ ಶಹಾಬುದ್ದೀನ್ ಜತೆಗೆ ನಡೆಸಿದ ಸಂಭಾಷಣೆಯ ಆಡಿಯೋ ಟೇಪ್ ಒಂದನ್ನು ಪ್ರಸಾರ ಮಾಡಿತ್ತು. ಈ ಆಡಿಯೋ ಟೇಪ್ನಲ್ಲಿ ಲಾಲು ಅವರು ಶಹಾಬುದ್ದೀನ್ ನಿಂದ ಕೆಲವೊಂದು ಸೂಚನೆಗಳನ್ನು ಪಡೆಯುತ್ತಿದ್ದುದು ಬಹಿರಂಗವಾಗಿತ್ತು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನೇತೃತ್ವದ ವಿರೋಧ ಪಕ್ಷ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.