AK 47 ಬಳಸಿ ಸಲ್ಮಾನ್ ಖಾನ್ ಹತ್ಯೆಗೆ ಸಂಚು… ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ನಾಲ್ವರ ಬಂಧನ
Team Udayavani, Jun 1, 2024, 12:26 PM IST
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮೇಲೆ ನಡೆಯಬಹುದಾಗಿದ್ದ ದಾಳಿಯನ್ನು ಮುಂಬೈ ಪೊಲೀಸರು ಮತ್ತೊಮ್ಮೆ ವಿಫಲಗೊಳಿಸಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ನಾಲ್ವರು ಶಾರ್ಪ್ ಶೂಟರ್ ಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳನ್ನು ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಎಂದು ಗುರುತಿಸಲಾಗಿದೆ.
ಈ ನಾಲ್ವರು ಆರೋಪಿಗಳು ಪನ್ವೇಲ್ ನಲ್ಲಿ ಸಲ್ಮಾನ್ ಖಾನ್ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು. ಸಲ್ಮಾನ್ ಖಾನ್ ಕಾರಿನ ಮೇಲೆ ದಾಳಿ ಮಾಡುವುದು ಈ ನಾಲ್ವರು ಆರೋಪಿಗಳ ಯೋಜನೆಯಾಗಿತ್ತು. ಇದಕ್ಕಾಗಿ, ಲಾರೆನ್ಸ್ ಬಿಷ್ಣೈ ಗ್ಯಾಂಗ್ನ ಈ ನಾಲ್ವರು ಶೂಟರ್ಗಳು ಪನ್ವೇಲ್ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್ಹೌಸ್ ಬಳಿ ಸಂಚು ರೂಪಿಸುತಿದ್ದರು ಎನ್ನಲಾಗಿದ್ದು ಇದರಿಂದ ಅನುಮಾನಗೊಂಡ ಪೊಲೀಸರು ನಾಲ್ವರನ್ನು ವಿಚಾರಿಸಲು ತೆರಳುವ ವೇಳೆ ಪರಾರಿಯಾಗಲು ಯತ್ನಿಸಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುವ ವೇಳೆ ಈ ವಿಚಾರ ಹೊರಬಿದ್ದಿದೆ.
ಪಾಕ್ ನಿಂದ ಶಸ್ತ್ರಾಸ್ತ್ರ :
ಮುಂಬೈ ಪೊಲೀಸರ ಪ್ರಕಾರ, ಈ ಗ್ಯಾಂಗ್ ಪಾಕಿಸ್ತಾನದ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರಗಳನ್ನು ಪಡೆಯುವ ಯೋಜನೆಯನ್ನು ಹೊಂದಿತ್ತು, ಅದು ವಿಫಲವಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಈ ನಾಲ್ವರು ಶೂಟರ್ಗಳು ಸಲ್ಮಾನ್ ಖಾನ್ ಮೇಲೆ ಎಕೆ-47 ಮತ್ತು ಎಂ16 ನಂತಹ ಆಯುಧಗಳಿಂದ ದಾಳಿ ನಡೆಸಲು ಯೋಜಿಸಿದ್ದರು ಎನ್ನಲಾಗಿದೆ.
ಏಪ್ರಿಲ್ 14 ರಂದು ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು:
ಈ ವರ್ಷದ ಏಪ್ರಿಲ್ 14 ರಂದು ಲಾರೆನ್ಸ್ ಗ್ಯಾಂಗ್ಗೆ ಸಂಬಂಧಿಸಿದ ಇಬ್ಬರು ಶೂಟರ್ಗಳು ಸಲ್ಮಾನ್ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಮುಂಜಾನೆ, ಇಬ್ಬರು ಅಪರಿಚಿತರು ಬಾಂದ್ರಾದ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ನ ಹೊರಗೆ ಗಾಳಿಯಲ್ಲಿ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿಯ ಹೊಣೆಯನ್ನು ಲಾರೆನ್ಸ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೊತ್ತುಕೊಂಡಿದ್ದ. ಇದಾದ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಹಲವು ಮಂದಿಯನ್ನು ಬಂಧಿಸಲಾಗಿತ್ತು ಇದಾದ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ಮೆನ್ನೆಲೆಗೆ ಬಂದಿದೆ.
ಇದನ್ನೂ ಓದಿ: Video: ಮತ್ತೆ ವಿವಾದದಲ್ಲಿ ಬಾಲಯ್ಯ: ನಟಿ ಅಂಜಲಿ ಹಿಂಭಾಗ ಮುಟ್ಟಿದ ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.