![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 29, 2022, 3:59 PM IST
ನೋಯ್ಡಾ : ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೊಲೀಸ್ ಆಯುಕ್ತರಾಗಿ ಲಕ್ಷ್ಮೀ ಸಿಂಗ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಮೊದಲ ಮಹಿಳಾ ಪೊಲೀಸ್ ಆಯುಕ್ತರು ನೇಮಕಗೊಂಡಂತಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಆಡಳಿತಾತ್ಮಕ ಪುನರ್ರಚನೆಯ ಭಾಗವಾಗಿ ಹಲವಾರು ಜಿಲ್ಲೆಗಳಲ್ಲಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಅದರಂತೆ ವಾರಣಾಸಿ, ಆಗ್ರಾ, ಗೌತಮ್ ಬುದ್ಧ ನಗರ, ಗಾಜಿಯಾಬಾದ್, ಅಯೋಧ್ಯೆ, ಮಥುರಾ, ಲಕ್ನೋ, ಬಹ್ರೈಚ್ ಮತ್ತು ಪ್ರಯಾಗ್ರಾಜ್ ಸೇರಿದಂತೆ ವಿವಿಧ ಜಿಲ್ಲೆಗಳ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಈ ಸರಣಿಯಲ್ಲಿ, ದೆಹಲಿಯ ಪಕ್ಕದ ಪ್ರಮುಖ ಜಿಲ್ಲೆಗಳಲ್ಲಿ ಒಂದಾದ ಗೌತಮ್ ಬುದ್ಧ ನಗರದ ಪೊಲೀಸ್ ಕಮಿಷನರ್ ಅಲೋಕ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಪ್ರಧಾನ ಕಚೇರಿಯಲ್ಲಿ (ಲಕ್ನೋ) ಜವಾಬ್ದಾರಿಯನ್ನು ನೀಡಲಾಗಿದೆ, ಈ ವೇಳೆ ಅಲೋಕ್ ಸಿಂಗ್ ಅವರಿಂದ ತೆರವಾದ ಗೌತಮ ಬುದ್ಧ ನಗರದ ಆಯುಕ್ತರ ಜಾಗಕ್ಕೆ ಐಪಿಎಸ್ ಲಕ್ಷ್ಮೀ ಸಿಂಗ್ ಅವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ.
ಲಕ್ಷ್ಮೀ ಸಿಂಗ್ ಅವರನ್ನು ಅತ್ಯಂತ ಕ್ರಿಯಾತ್ಮಕ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಐಪಿಎಸ್ ಲಕ್ಷ್ಮಿ ಸಿಂಗ್ ಅವರ ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಪ್ರಾಮಾಣಿಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ.
ಲಕ್ಷ್ಮೀ ಸಿಂಗ್ ಅವರಿಗೆ ಮುಖ್ಯಮಂತ್ರಿಗಳ ಶ್ರೇಷ್ಠ ಸೇವಾ ಪೊಲೀಸ್ ಪದಕವನ್ನು ನೀಡಿ ಗೌರವಿಸಲಾಗಿದೆ.
ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿಯ ಸಮಯದಲ್ಲಿ ಲಕ್ಷ್ಮೀ ಸಿಂಗ್ ಅವರನ್ನು ಅತ್ಯುತ್ತಮ ಪ್ರೊಬೇಷನರ್ ಎಂದು ಘೋಷಿಸಲಾಯಿತು. 2000ನೇ ಬ್ಯಾಚ್ನ ಐಪಿಎಸ್ ಲಕ್ಷ್ಮಿ ಸಿಂಗ್ ಅವರು ಪ್ರಧಾನಿಯವರಿಂದ ಬೆಳ್ಳಿಯ ಲಾಠಿ ಸ್ವೀಕರಿಸಿದರು. ಇದಲ್ಲದೇ ಕೇಂದ್ರ ಗೃಹ ಸಚಿವಾಲಯದಿಂದ 9 ಎಂಎಂ ಪಿಸ್ತೂಲ್ ಅನ್ನು ಬಹುಮಾನವಾಗಿ ಪಡೆದಿದ್ದರು ಎನ್ನಲಾಗಿದೆ.
ಫೈರ್ಬ್ರಾಂಡ್ ಐಪಿಎಸ್ ಅಧಿಕಾರಿ ಲಕ್ಷ್ಮೀ ಸಿಂಗ್ ಅವರು ಇದುವರೆಗೆ ತಮ್ಮ ಅಧಿಕಾರಾವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಈ ಹಿಂದೆ ವಾರಣಾಸಿ ಮತ್ತು ಚಿತ್ರಕೂಟ, ಗೊಂಡಾ, ಫರೂಕಾಬಾದ್, ಬಾಗ್ಪತ್ ಮತ್ತು ಬುಲಂದ್ಶಹರ್ನಲ್ಲಿ ಎಸ್ಪಿ ಮತ್ತು ಎಸ್ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ, ಮಾಫಿಯಾ ಮತ್ತು ಸಂಘಟಿತ ಅಪರಾಧಗಳ ವಿರುದ್ಧ ಹುರುಪಿನ ಅಭಿಯಾನವನ್ನು ನಡೆಸುವ ಮೂಲಕ ಅವರು ಅನೇಕ ಬಾರಿ ಬೆಳಕಿಗೆ ಬಂದರು. ಇದಲ್ಲದೆ, ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಮತ್ತು ಪೊಲೀಸ್ ಸಿಬ್ಬಂದಿಯ ಸಮಸ್ಯೆಗಳ ಪರಿಹಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದನ್ನೂ ಓದಿ: ವರ್ಕ್ ಫ್ರಮ್ ಹೋಮ್ ಎಫೆಕ್ಟ್… : ಅತ್ತ ಮದುವೆ ನಡೆಯುತ್ತಿದ್ದರೆ ಇತ್ತ ಲ್ಯಾಪ್ ಟಾಪ್ ನಲ್ಲೇ ಬ್ಯುಸಿಯಾದ ವರ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.