![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಆಜಾದ್ ಹೇಳಿಕೆಗೆ ಲಷ್ಕರ್ ಬೆಂಬಲ; ಅಂಕಿ, ಅಂಶದ ಮೂಲಕ BJP ತಿರುಗೇಟು
Team Udayavani, Jun 22, 2018, 2:01 PM IST
![line-control.jpg](https://www.udayavani.com/wp-content/uploads/2018/06/22/line-control.jpg)
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿನ ರಾಜ್ಯಪಾಲರ ಆಡಳಿತಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ನೀಡಿರುವ ಹೇಳಿಕೆಯನ್ನು ಉಗ್ರ ಸಂಘಟನೆ ಲಷ್ಕರ್ ಎ ತೊಯ್ಬಾ ಸ್ವಾಗತಿಸಿದ್ದರೆ, ಮತ್ತೊಂದೆಡೆ ಬಿಜೆಪಿ ಅಂಕಿ-ಅಂಶ ಸಹಿತ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಮನ ಕಾರ್ಯಾಚರಣೆಯಲ್ಲಿ ಉಗ್ರರಗಿಂತ ಹೆಚ್ಚು ಜನಸಾಮಾನ್ಯರೇ ಬಲಿಯಾಗಿದ್ದಾರೆ ಎಂದು ಗುಲಾಂ ನಬಿ ಹೇಳಿದ್ದರು. ಈ ಬಗ್ಗೆ ಉಗ್ರಗಾಮಿ ಸಂಘಟನೆ ಲಷ್ಕರ್ ಎ ತೊಯ್ಬಾ ಇ ಮೇಲ್ ಮೂಲಕ ಪತ್ರಿಕಾ ಪ್ರಕಟಣೆ ನೀಡಿದೆ.
ಲಷ್ಕರ್ ಎ ತೊಯ್ಬಾದ ವರಿಷ್ಠ ಮಹಮ್ಮದ್ ಷಾ ಪ್ರಕಾರ, ಕಾಂಗ್ರೆಸ್ ಮುಖಂಡ ಆಜಾದ್ ಅವರ ಹೇಳಿಕೆ ಸರಿಯಾಗಿದೆ. ನಮ್ಮದು ಕೂಡಾ ಗುಲಾಂ ನಬಿ ಆಜಾದ್ ಅವರ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾನೆ. ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವ ಮೂಲಕ ಭಾರತವನ್ನು ಜಗಮೋಹನ್ ಕಾಲಘಟ್ಟಕ್ಕೆ ಒಯ್ಯಲಾಗುತ್ತಿದೆ. ಅಷ್ಟೇ ಅಲ್ಲ ಈ ಕ್ರಮ ಸಾಮೂಹಿಕ ಹತ್ಯಾಕಾಂಡಕ್ಕೆ ದಾರಿಯಾಗಬಲ್ಲದು ಎಂದು ಎಚ್ಚರಿಕೆ ನೀಡಿರುವುದಾಗಿ ಲಷ್ಕರ್ ನ ವಕ್ತಾರ ಅಬ್ದುಲ್ ಘಜ್ನವಿ ಪ್ರಕಟಣೆಯಲ್ಲಿ ತಿಳಿಸಿದ್ದಾನೆ.
ಅಲ್ಲದೇ ರಂಜಾನ್ ಸಂದರ್ಭದಲ್ಲಿ ಕದವಿರಾಮ ಘೋಷಿಸಿರುವುದು ಒಂದು ನಾಟಕ ಎಂದು ಹೇಳಿರುವ ಲಷ್ಕರ್, ಆರ್ ಎಸ್ ಎಸ್ ಅಜೆಂಡಾವನ್ನು ಜಾರಿಗೊಳಿಸಲು ಪಿಡಿಪಿ ಮುಖ್ಯಸ್ಥೆ, ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಉತ್ತಮ ರೀತಿಯಲ್ಲಿ ಯತ್ನಿಸಿದ್ದಾರೆ ಎಂದು ಆರೋಪಿಸಿದೆ. ಜಮ್ಮು ಕಾಶ್ಮೀರದ ಕಣಿವೆಯಲ್ಲಿ ಆರ್ ಎಸ್ ಎಸ್ ಅಜೆಂಡಾಕ್ಕೆ ಅನುಕೂಲ ಮಾಡಿಕೊಡಲು ಮುಫ್ತಿ ಜಾಣ್ಮೆಯಿಂದ ನಡೆದುಕೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಸುಮಾರು 8 ಲಕ್ಷ ಯೋಧರು ಅಮಾನವೀಯ ಕೃತ್ಯ ಎಸಗಲು ನಿರತರಾಗಿದ್ದಾರೆ. ಈ ಪಡೆಗಳಿಂದಾಗಿ ಜನರು ಗುಲಾಮರಾಗುವಂತಾಗಿದೆ ಎಂದು ದೂರಿದೆ.
ಆಜಾದ್ ಹೇಳಿದ್ದೇನು?
ಇತ್ತೀಚೆಗೆ ನ್ಯೂಸ್ 18 ಇಂಗ್ಲಿಷ್ ಚಾನೆಲ್ ಗೆ ನೀಡಿದ್ದ ಸಂದರ್ಶನದಲ್ಲಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಮಾತನಾಡುತ್ತ, ಅವರು ಹತ್ಯಾಕಾಂಡದ ಬಗ್ಗೆ ಹೇಳಿದ್ದಾರೆ. ನಾಲ್ಕು ಮಂದಿ ಉಗ್ರರ ವಿರುದ್ಧ ಕಾರ್ಯಾಚರಣೆಗಾಗಿ ಯೋಧರು 20 ಮಂದಿ ನಾಗರಿಕರನ್ನು ಕೊಲ್ಲುತ್ತಾರೆ. ಅವರ ಕಾರ್ಯಾಚರಣೆ ಉಗ್ರರಿಗಿಂತ ಹೆಚ್ಚಾಗಿ ನಾಗರಿಕರ ವಿರುದ್ಧವೇ ಆಗಿದೆ. ಅದೇ ರೀತಿ ಪುಲ್ವಾಮಾ ಪ್ರದೇಶದಲ್ಲಿ 13 ಜನರನ್ನು ಕೊಂದಿದ್ದಾರೆ. ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ. ಈ ಕಾರ್ಯಾಚರಣೆಯಿಂದ ಯಾವುದೇ ಉಪಯೋಗವಿಲ್ಲ. ಇದೊಂದು ವ್ಯವಸ್ಥಿತ ಹತ್ಯಾಕಾಂಡ. ಯಾವುದೇ ಕಾರಣಕ್ಕೂ ಮಾತುಕತೆ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳುವುದರ ಬಗ್ಗೆ ಬಿಜೆಪಿ ತುಟಿ ಬಿಚ್ಚುತ್ತಿಲ್ಲ. ಬದ್ಧ ವೈರಿಗಳಾಗಿದ್ದ ಅಮೆರಿಕಾ ಹಾಗೂ ಉತ್ತರ ಕೊರಿಯಾ ಕೂಡಾ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡಿದೆ ಎಂದು ಹೇಳಿದ್ದರು.
ಆಜಾದ್ ಹೇಳಿಕೆಯನ್ನು ಉಗ್ರಗಾಮಿ ಸಂಘಟನೆ ಲಷ್ಕರ್ ಬಹುಪರಾಕ್ ಹೇಳಿತ್ತು. ಆದರೆ ಬಿಜೆಪಿ ಇದಕ್ಕೆ ತಕ್ಕ ತಿರುಗೇಟು ನೀಡಿದೆ.
ಅಂಕಿ ಅಂಶ ಬಿಚ್ಚಿಟ್ಟ ಬಿಜೆಪಿ:
2012ರಲ್ಲಿ ಜಮ್ಮು-ಕಾಶ್ಮೀರದಲ್ಲಿ 72 ಉಗ್ರರು ಬಲಿಯಾಗಿದ್ದು, 2013ರಲ್ಲಿ 67 ಉಗ್ರರು ಸಾವನ್ನಪ್ಪಿದ್ದರು. ನಾವು 2014ರ ಜೂನ್ ತಿಂಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಅಧಿಕಾರದ ಗದ್ದುಗೆ ಏರಿದ್ದೇವು. 2014ರಲ್ಲಿ ನಡೆದ ಕಾರ್ಯಾಚರಣೆಯಲ್ಲಿ 110 ಉಗ್ರರು ಬಲಿಯಾಗಿದ್ದರು. 2015ರಲ್ಲಿ 108 ಉಗ್ರರು, 2016ರಲ್ಲಿ 150 ಉಗ್ರರು, 2017ರಲ್ಲಿ 217 ಉಗ್ರರು ಹಾಗೂ 2018ರ ಮೇ ವರೆಗೆ 75 ಉಗ್ರರನ್ನು ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಅಂಕಿ, ಅಂಶಗಳ ಮಾಹಿತಿ ನೀಡಿ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. ಹೀಗಾಗಿ ಗುಲಾಂ ನಬಿ ಆಜಾದ್ ಅವರು ಹೇಳಿಕೆಯನ್ನು ಲಷ್ಕರ್ ಎ ತೊಯ್ಬಾ ಸ್ವಾಗತಿಸುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![7](https://www.udayavani.com/wp-content/uploads/2024/12/7-30-150x90.jpg)
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
![ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ](https://www.udayavani.com/wp-content/uploads/2024/12/ud-1-1-150x97.jpg)
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.