![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 27, 2023, 5:54 PM IST
ಮುಂಬಯಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್ಡಿಎ) ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಭಾನುವಾರ ಅಮೀಬಾಕ್ಕೆ ಹೋಲಿಸಿ ಒಕ್ಕೂಟ ಯಾವುದೇ ನಿರ್ದಿಷ್ಟ ಆಕಾರ ಮತ್ತು ಗಾತ್ರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ , ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಘಮಾಂಡಿಯಾ, ಇಂಡಿಯನ್ ಮುಜಾಹಿದ್ದೀನ್ ಎಂದು ಪ್ರಧಾನಿ ನರೇಂದ್ರ ಮೋದಿಯವವರು ಅಹಂಕಾರದಿಂದ ಕರೆದಿದ್ದಾರೆ. ಎನ್ಡಿಎಯನ್ನು “ಘಮ-ಎನ್ಡಿಎ” (“ಘಮಂಡಿಯೆ” ಎಂದರೆ ಸೊಕ್ಕಿನ) ಎಂದು ಕರೆಯಬೇಕು ಎಂದು ಕಿಡಿ ಕಾರಿದರು.
ಎಂದು ಮಹಾರಾಷ್ಟ್ರದಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ಬಿಆರ್ಎಸ್ ಪ್ರಯತ್ನಿಸುತ್ತಿರುವುದನ್ನು ಉಲ್ಲೇಖಿಸಿ, ಬಿಆರ್ ಎಸ್ ಮೊದಲು ತನ್ನ ಸ್ವಂತ ಹಿತ್ತಲಿನತ್ತ ಗಮನಹರಿಸಬೇಕು, ಅದು ಉತ್ತಮ ಸ್ಥಿತಿಯಲ್ಲಿಲ್ಲ, ತೆಲಂಗಾಣ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತಿದ್ದಾರೆಯೇ ಅಥವಾ ಬಿಜೆಪಿ ಬೆಂಬಲಿಸುತ್ತಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು, ಮತಗಳನ್ನು ವಿಭಜಿಸಬೇಡಿ ಎಂದರು.
You seem to have an Ad Blocker on.
To continue reading, please turn it off or whitelist Udayavani.