ಫಲಿತಾಂಶದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ!
ಕೇಂದ್ರದಲ್ಲಿ ಹೆಚ್ಚಿನ ಸಚಿವ ಸ್ಥಾನಕ್ಕೆ ಟಿಡಿಪಿ ಬೇಡಿಕೆ?16 ಸ್ಥಾನ ಪಡೆದ ಟಿಡಿಪಿ ಈಗ ಕಿಂಗ್ಮೇಕರ್
Team Udayavani, Jun 6, 2024, 12:19 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಸರಳ ಬಹುಮತ ಪಡೆಯುವಲ್ಲಿ ವಿಫಲವಾದ ಕಾರಣ, ಈಗ ಮಿತ್ರಪಕ್ಷಗಳೊಂದಿಗೆ ಸೇರಿ ಸರಕಾರ ರಚಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಅದರ ಜೊತೆಗೆ, ಎನ್ಡಿಎ ಮಿತ್ರಪಕ್ಷಗಳು ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ಶುರು ಮಾಡಿವೆ.
ಎನ್ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾಗಿರುವ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಮಂತ್ರಿಗಳ ಪಾಲಿನಲ್ಲಿ ಹೆಚ್ಚಿನ ಪಾಲನ್ನು ಕೇಳುವ ನಿರೀಕ್ಷೆ ಇದೆ. ಈ ನಡುವೆ, ಎನ್ಡಿಎ ಭಾಗವಾಗಿರುವ ನಟ ಪವನ್ ಕಲ್ಯಾಣ ಅವರ ಜನಸೇನಾ ಪಕ್ಷಕ್ಕೂ ಸಚಿವ ಸ್ಥಾನ ನೀಡುವ ಇರಾದೆಯನ್ನು ಬಿಜೆಪಿ ಹೊಂದಿದೆ ಎನ್ನಲಾಗಿದೆ.
ಎನ್ಡಿಎ ಕೂಟದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿದ್ದರೂ ಪೂರ್ಣ ಬಹುಮತ ದೊರೆತಿಲ್ಲ. ಹಾಗಾಗಿ, 12 ಸೀಟು ಹೊಂದಿರುವ ಜೆಡಿಯು ಮತ್ತು 16 ಸೀಟು ಹೊಂದಿರುವ ಟಿಡಿಪಿಗೆ ಇದೀಗ ಹೆಚ್ಚಿನ ಮಹತ್ವ ಬಂದಿದೆ. ಕೆಲವು ಮೂಲಗಳ ಪ್ರಕಾರ, ಟಿಡಿಪಿ ಸ್ಪೀಕರ್ ಹುದ್ದೆಯ ಮೇಲೂ ಕಣ್ಣಿಟ್ಟಿದೆ ಎನ್ನಲಾಗಿದೆ. ಯಾವ ಪಕ್ಷದ ನಾಯಕರಿಗೆ ಯಾವ ಸ್ಥಾನ ದೊರೆಯಲಿದೆ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ.
ಸಾಮಾನ್ಯ ಕಾರ್ಯಕ್ರಮಕ್ಕೆ ಜೆಡಿಯು ಒತ್ತಾಯ ಸಾಧ್ಯತೆ
ಕಿಂಗ್ ಮೇಕರ್ ಆಗಿ ಹೊರಹೊಮ್ಮಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಬಿಜೆಪಿಗೆ ಸಾಮಾನ್ಯ ಕಾರ್ಯಕ್ರಮಕ್ಕೆ(ಸಿಎಂಪಿ) ಒತ್ತಾಯಿಸುವ ನಿರೀಕ್ಷೆ ಇದೆ. ಒಂದೊಮ್ಮೆ ಸಾಮಾನ್ಯ ಕಾರ್ಯಕ್ರಮಕ್ಕೆ ಒಪ್ಪಿಕೊಂಡರೆ ಏಕರೂಪ ನಾಗರಿಕ ಸಂಹಿತೆ(ಯುಸಿಸಿ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ)ಗಳಂಥ ಬಿಜೆಪಿಯ ಅಜೆಂಡಾಗಳಿಗೆ ಅಡ್ಡಿಯಾಗಲಿದೆ. ಇನ್ನು ಖಾತೆಗಳ ವಿಷಯಕ್ಕೆ ಬಂದರೆ ಬಿಜೆಪಿ ಮಿತ್ರಪಕ್ಷಗಳಾಗಿರುವ ಜೆಡಿಯು ಮತ್ತು ಚಿರಾಗ್ ಪಾಸ್ವಾನ್ ಎಲ್ಜೆಪಿ ರೈಲ್ವೆ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಇಲಾಖೆಗಳಿಗೆ ಬೇಡಿಕೆ ಇಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliment: ಸೆಂಗೋಲ್ ತೆರವುಗೊಳಿಸಿ ಎಂದ ಎಸ್ಪಿ ಸಂಸದ; ಬಿಜೆಪಿ ಆಕ್ಷೇಪ
Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!
NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…
Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…
Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್ ಜಂಟಿ ಅಧಿವೇಶನ
MUST WATCH
ಹೊಸ ಸೇರ್ಪಡೆ
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.