![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 22, 2021, 8:10 AM IST
ಮುಂಬೈ: ಜನರು ಮಾಸ್ಕ್ ಧರಿಸದಿದ್ದರೇ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಉದ್ದವ್ ಠಾಕ್ರೆ ಈ ಘೋಷಣೆ ಹೊರಡಿಸಿದ್ದು, ಸೋಂಕಿತರ ಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಇಂದು ಸಂಜೆಯಿಂದಲೇ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಏಕಾಏಕಿ ಲಾಕ್ ಡೌನ್ ಜಾರಿಗೆ ತರುವ ಯಾವುದೇ ಉದ್ದೇಶಗಳಿಲ್ಲ. ಆದರೇ ಜನರು ಸರ್ಕಾರದ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು. ಅಭಿವೃದ್ದಿ ಕಾರ್ಯಗಳಿಗೆ ತೊಡಕಾಗದಂತೆ ಅಗತ್ಯ ಪ್ರದೇಶಗಳಲ್ಲಿ ಮಾತ್ರ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ದಿನಭವಿಷ್ಯ: ಇಂದು ಈ ರಾಶಿಯವರು ವಾಹನ, ಗ್ಯಾಸ್, ವಿದ್ಯುತ್ ಗಳಿಂದ ಜಾಗರೂಕರಾಗಿರಿ…
ಅಮರಾವತಿ ಮತ್ತು ಆಚಲ್ ಪುರ ನಗರಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಹೇರಲಾಗಿದೆ., ಅಕೋಲಾ, ಬುಲ್ದಾನ, ವಾಶೀಂ ಮತ್ತು ಯವತ್ಮಾಲ್ ಸೇರಿದಂತೆ ಕೆಲವು ಜಿಲ್ಲೆಗಳನ್ನು ಭಾಗಶಃ ಬಂದ್ ಮಾಡಲಾಗಿದೆ. ಅಮರಾವತಿಯಲ್ಲಿ ಇಂದು 1000 ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 40 ಸಾವಿರಕ್ಕಿಂತ ಸಕ್ರಿಯ ಪ್ರಕರಣಗಳಿವೆ,
ಕಳೆದ 24 ಗಂಟೆಗಳಲ್ಲಿ 6,971 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 2020ರ ಮಾರ್ಚ್ ನಲ್ಲಿ ಕೋವಿಡ್ ವೈರಸ್ ಆರಂಭವಾದಾಗ ಔಷಧ ಇರಲಿಲ್ಲ, ಈಗ ಲಸಿಕೆ ಲಭ್ಯವಿದೆ. ಮಹಾರಾಷ್ಟ್ರದಲ್ಲಿ ಈವರೆಗೆ 9 ಲಕ್ಷ ಮಂದಿ ಲಸಿಕೆ ಫಲಾನುಭವಿಗಳಿದ್ದಾರೆ ಎಂದು ಸಿಎಂ ಉದ್ಧವ್ ಠಾಕ್ರೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೀಸಲಾತಿಗೆ ಸಂಗ್ರಾಮ : ಸರಕಾರಕ್ಕೆ ಗಡುವು ನೀಡಿದ ಪಂಚಮಸಾಲಿ ಸಮುದಾಯ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.