![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 31, 2018, 9:31 AM IST
ಮುಂಬಯಿ: ಮಹಾರಾಷ್ಟ್ರದ ಪಾಲ್ಘರ್,ಭಂಡಾರ-ಗೋಂಡಿಯಾ,ಉತ್ತರ ಪ್ರದೇಶದ ಕೈರಾನ ಮತ್ತು ನಾಗಾಲ್ಯಾಂಡ್ ಲೋಕಸಭಾ ಕ್ಷೇತ್ರಗಳಿಗೆನಡೆದ ಉಪಚುನಾವಣೆಯ ಮತಗಳ ಎಣಿಕೆ ಕಾರ್ಯ ಗುರುವಾರ ನಡೆಯುತ್ತಿದ್ದು, 2 ಕ್ಷೇತ್ರಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶದ ಕೈರಾನ ದಲ್ಲಿ ಬಿಜೆಪಿ ಮೃಗಾಂಕಾ ಸಿಂಗ್ ಅವರು ಆರ್ಎಲ್ಡಿ ಅಭ್ಯರ್ಥಿ ತಬಾಸ್ಸುಮ್ ಹಸನ್ ಅವರ ವಿರುದ್ದ ಹಿನ್ನಡೆ ಸಾಧಿಸಿದ್ದು ಜಿದ್ದಾಜಿದ್ದಿನ ಸ್ಫರ್ಧೆ ಕಂಡು ಬಂದಿದೆ.
ಪಾಲ್ಘರ್ನಲ್ಲಿ ಬಿಜೆಪಿಯ ರಾಜೇಂದ್ರ ಗಾವಿತ್ ಅವರು ಶಿವಸೇನೆಯ ಶ್ರೀನಿವಾಸ್ ವನಗಾ ಅವರ ವಿರುದ್ಧ ಅಲ್ಪ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಪಾಲ್ಘರ್ನ ಹಾಲಿ ಬಿಜೆಪಿ ಸಂಸದ ಚಿಂತಾಮನ್ ವನಗಾ ಅವರ ಸಾವಿನಿಂದಾಗಿ ಈ
ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಚಿಂತಾಮನ್ ಪುತ್ರ ಶ್ರೀನಿವಾಸ್ ವನಗಾ ಬಿಜೆಪಿ ತೊರೆದು ಶಿವಸೇನೆ ಅಭ್ಯರ್ಥಿಯಾಗಿದ್ದಾರೆ.
ಭಂಡಾರ-ಗೋಂಡಿಯಾ ಕ್ಷೇತ್ರದ ಬಿಜೆಪಿ ಸಂಸದ ನಾನಾ ಪಟೋಲೆ ಅವರು ಪಕ್ಷಕ್ಕೆ ಹಾಗೂ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ.
ನಾನಾ ಪಟೋಲೆ ಅವರು 2017ರ ಡಿಸೆಂಬರ್ನಲ್ಲಿ ಪಕ್ಷವನ್ನು ತೊರೆದು ಕಾಂಗ್ರೆಸನ್ನು
ಸೇರಿರುವುದರಿಂದ ಭಂಡಾರ-ಗೋಂಡಿಯಾ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಕೂಡ ಬಿಜೆಪಿ ಪಾಲಿಗೆ ಮಹತ್ವದ್ದಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.