ಪ್ರಧಾನಿ ಸಂಸತ್ಗೇಕೆ ಬರುತ್ತಿಲ್ಲ? ಪ್ರತಿಪಕ್ಷ ನಾಯಕರ ಪ್ರಶ್ನೆ
ಮೋದಿ 20 ಸೆಕೆಂಡ್ ಕೂಡ ಸಂಸತ್ಗೆ ಬಂದಿಲ್ಲ: ಒ ಬ್ರಿಯಾನ್ ಆರೋಪ
Team Udayavani, Aug 1, 2023, 5:00 AM IST
ನವದೆಹಲಿ: ಪ್ರಧಾನಿ ಮೋದಿಯವರು ಲೋಕಸಭೆ ಮತ್ತು ರಾಜ್ಯಸಭೆಗೆ ಅವಮಾನ ಮಾಡುವುದನ್ನು ಬಿಟ್ಟು, ಸಂಸತ್ಗೆ ಆಗಮಿಸಿ ಯಾವುದೇ ಕಾಲಮಿತಿ ಹಾಕಿಕೊಳ್ಳದೇ ಮಣಿಪುರ ಹಿಂಸಾಚಾರದ ಕುರಿತು ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಸೋಮವಾರ ರಾಜ್ಯಸಭೆಯಲ್ಲಿನ ಕಾಂಗ್ರೆಸ್ ಉಪ ನಾಯಕ ಪ್ರಮೋದ್ ತಿವಾರಿ ಮಾತನಾಡಿ, ಮಣಿಪುರದಲ್ಲಿ ನೂರಾರು ಜನ ಸಾವಿಗೀಡಾಗಿದ್ದಾರೆ. ಇಂಥ ಹಲವು ಘಟನೆಗಳು ಅಲ್ಲಿ ನಡೆದಿವೆ ಎಂದು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಅಲ್ಲಿ ಎಷ್ಟೊಂದು ಅತ್ಯಾಚಾರಗಳು ನಡೆದಿದೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಹೀಗಾಗಿ ಕೂಡಲೇ ಮಣಿಪುರ ಕುರಿತು ಸಮಗ್ರ ಹಾಗೂ ವಿಸ್ತೃತ ಚರ್ಚೆ ನಡೆಸಬೇಕು. ಸಂವಿಧಾನದ 75ನೇ ವಿಧಿಯ ಪ್ರಕಾರ ಪ್ರಧಾನಮಂತ್ರಿಗಳು ಸಂಸತ್ಗೆ ಉತ್ತರದಾಯಿತ್ವ ಹೊಂದಿದ್ದಾರೆ. ಅವರು ಸಂಸತ್ಗೆ ಬಂದು ಉಭಯ ಸದನಗಳಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. ಜತೆಗೆ, ಪ್ರಧಾನಿ ಮೋದಿಯವರು ದೇಶದಲ್ಲೇ ಇದ್ದೂ, ಸಂಸತ್ಗೆ ಯಾಕೆ ಬರುತ್ತಿಲ್ಲ ಎಂದು ಕಾರಣ ಹೇಳಬಹುದೇ ಎಂದೂ ಪ್ರಶ್ನಿಸಿದ್ದಾರೆ.
ಹಲವು ದ್ರೌಪದಿಯರ ಘನತೆಗೆ ಪೆಟ್ಟು ಬಿದ್ದಿದೆ: ನೆನಪಿಡಿ, ಒಬ್ಬ ದ್ರೌಪದಿಗಾಗಿ ಮಹಾಭಾರತ ಯುದ್ಧವೇ ನಡೆಯಿತು. ಆದರೆ, ಮಣಿಪುರದಲ್ಲಿ ಹಲವಾರು ದ್ರೌಪದಿಯರ ಮಾನ, ಘನತೆಯ ಮೇಲೆ ಹಲ್ಲೆ ನಡೆದಿದೆ. ಕಾರ್ಗಿಲ್ ಯೋಧನ ಪತ್ನಿಯ ಮೇಲೂ ಅತ್ಯಾಚಾರ ನಡೆದಿದೆ. ಹೀಗಾಗಿ 267ನೇ ನಿಯಮದ ಅನ್ವಯವೇ ಚರ್ಚೆ ನಡೆಯಬೇಕು. ಉಳಿದೆಲ್ಲ ವಿಚಾರಗಳನ್ನು ಬದಿಗಿಟ್ಟು ಮಣಿಪುರದ ಬಗ್ಗೆ ಚರ್ಚೆಯಾಗಬೇಕು ಎಂದೂ ತಿವಾರಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಟಿಎಂಸಿ ನಾಯಕ ಡೆರೆಕ್ ಒ ಬ್ರಿಯಾನ್, ಮುಂಗಾರು ಅಧಿವೇಶನ ಆರಂಭವಾಗಿ 8 ದಿನಗಳಾದರೂ ಮೋದಿಯವರು ಕನಿಷ್ಠಪಕ್ಷ 20 ಸೆಕೆಂಡುಗಳ ಕಾಲವೂ ಸಂಸತ್ಗೆ ಬಂದಿಲ್ಲ ಎಂದಿದ್ದಾರೆ. ಮಿಸ್ಟರ್ ಪ್ರೈಮ್ ಮಿನಿಸ್ಟರ್, ನೀವೇಕೆ ಇಷ್ಟೊಂದು ದರ್ಪ ತೋರುತ್ತಿದ್ದೀರಿ? ನಿಮ್ಮದು ಕಲ್ಲು ಹೃದಯವೇ? ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರು ರಾಜ್ಯಸಭೆಗೆ ಬಂದು ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿದ್ದರು. ರಾಜೀವ್ ಗಾಂಧಿ ವಿರುದ್ಧ ಬೋಫೋರ್ಸ್ನಂಥ ಅತಿದೊಡ್ಡ ಆರೋಪ ಬಂದಿತ್ತು. ಆಗ ರಾಜ್ಯಸಭೆಗೆ ಬಂದು ಆ ಕುರಿತು ಮಾತನಾಡುವ ಧೈರ್ಯವನ್ನು ಅವರು ತೋರಿದ್ದರು. ನಿಮಗೇಕೆ ಸಾಧ್ಯವಾಗುತ್ತಿಲ್ಲ ಎಂದೂ ಪ್ರಸ್ನಿಸಿದರು.
ಮೋದಿ ಅಸಡ್ಡೆ ಬಗ್ಗೆ ಕಿಡಿ:
“ಗಲಭೆ ಪೀಡಿತ ಮಣಿಪುರದ ಜನರ ನೋವು ಮತ್ತು ಸಂಕಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀರಾ ಅಸಡ್ಡೆ ಹೊಂದಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಪ್ರತಿಪಕ್ಷಗಳ ನಾಯಕರ ಮಣಿಪುರ ಭೇಟಿಯ ಬಳಿಕ ಸೋಮವಾರ ಟ್ವೀಟ್ ಮಾಡಿರುವ ಖರ್ಗೆ, “ಸಂಘರ್ಷ ಪೀಡಿತ ರಾಜ್ಯದ ಸ್ಥಿತಿಗತಿ ಅರಿಯಲೆಂದು ಭೇಟಿ ನೀಡಿದ್ದ ಪ್ರತಿಪಕ್ಷಗಳ ನಿಯೋಗಕ್ಕೆ ಅಲ್ಲಿನ ಜನರ ಹೃದಯಹಿಂಡುವ ಕಥೆಗಳನ್ನು ಆಲಿಸಿ ಬಹಳ ವೇದನೆಯಾಯಿತು. ಮಣಿಪುರವು ಹೊತ್ತಿ ಉರಿಯುತ್ತಿದ್ದರೂ, ಮೋದಿ ಸರ್ಕಾರ ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅಲ್ಲಿ ಎರಡು ಸಮುದಾಯಗಳ ನಡುವೆ ದೊಡ್ಡಮಟ್ಟದ ಬಿರುಕು ಮೂಡಿರುವುದು ತೀವ್ರ ಕಳವಳಕಾರಿ’ ಎಂದು ಬರೆದುಕೊಂಡಿದ್ದಾರೆ.
ಕಲಾಪ ಮುಂದೂಡಿಕೆ:
ಮಣಿಪುರದ ಕುರಿತು ಚರ್ಚೆಗೆ ಆಗ್ರಹಿಸಿ ಸೋಮವಾರವೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಗದ್ದಲವೆಬ್ಬಿಸಿದ ಕಾರಣ, ಎರಡೂ ಸದನಗಳ ಕಲಾಪಗಳು ದಿನದ ಮಟ್ಟಿಗೆ ಮುಂದೂಡಿಕೆಯಾದವು. ಗದ್ದಲದ ನಡುವೆಯೇ ಸಿನಿಮಾ ಪೈರಸಿಗೆ ಕಡಿವಾಣ ಹಾಕುವ ಸಿನಿಮಾಟೋಗ್ರಫಿ ತಿದ್ದುಪಡಿ ವಿಧೇಯಕ, 2023ಕ್ಕೆ ಅಂಗೀಕಾರ ಪಡೆಯಲಾಯಿತು.
ಶೇ.44 ಕುಟುಂಬಗಳಿಗೆ ನೀರಿನ ಸಂಪರ್ಕವಿಲ್ಲ
ದೇಶದ ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡಗಳಿರುವಂಥ ಪ್ರದೇಶಗಳಲ್ಲಿ ಶೇ.44ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವೇ ಇಲ್ಲ. ಹೀಗೆಂದು ಜಲಶಕ್ತಿ ಖಾತೆ ಸಹಾಯಕ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. 2.17 ಕೋಟಿ ಗ್ರಾಮೀಣ ಬುಡಕಟ್ಟು ಕುಟುಂಬಗಳ ಪೈಕಿ 1.2 ಕೋಟಿ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವಿದೆ. ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವನ್ನೇ ನೀಡಲಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.
ದೆಹಲಿ ಸೇವೆಗಳ ವಿಧೇಯಕದಲ್ಲಿ ಬದಲಾವಣೆ
ಆಪ್ ಬೆಂಬಲಿಸಿ ವಿಪ್ ಜಾರಿ ಮಾಡಿದ ಬಿಆರ್ಎಸ್
ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಬದಲಿಗೆ ತರಲಾದ ದೆಹಲಿ ಆಡಳಿತಾತ್ಮಕ ಸೇವೆಗಳ ವಿಧೇಯಕವು ಸದ್ಯದಲ್ಲೇ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರವೇ ಈ ಮಸೂದೆ ಮಂಡಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ, ಕೊನೇ ಕ್ಷಣದಲ್ಲಿ ಮಂಡನೆಯಾಗಲಿಲ್ಲ. ಇದೇ ವೇಳೆ, ಈ ವಿಧೇಯಕಕ್ಕೆ ಕೆಲವೊಂದು ತಿದ್ದುಪಡಿಗಳನ್ನು ತಂದು ಮಂಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಪ್ರಕಾರ, “ರಾಜ್ಯ ನಾಗರಿಕ ಸೇವೆಗಳು ಮತ್ತು ರಾಜ್ಯ ಲೋಕಸೇವಾ ಆಯೋಗಕ್ಕೆ ಸಂಬಂಧಿಸಿದ ಯಾವುದೇ ಕಾನೂನನ್ನು ದೆಹಲಿ ಅಸೆಂಬ್ಲಿಯಲ್ಲಿ ಜಾರಿ ಮಾಡುವಂತಿರಲಿಲ್ಲ. ಆದರೆ, ಈಗ ಈ ನಿರ್ಬಂಧವನ್ನು ತೆಗೆದುಹಾಕಲಾಗಿದೆ. ರಾಷ್ಟ್ರ ರಾಜಧಾನಿ ನಾಗರಿಕ ಸೇವೆಗಳ ಪ್ರಾಧಿಕಾರದ ವಾರ್ಷಿಕ ವರದಿಯನ್ನು ಸಂಸತ್ ಮತ್ತು ದೆಹಲಿ ಅಸೆಂಬ್ಲಿಯಲ್ಲಿ ಮಂಡಿಸುವುದು ಕಡ್ಡಾಯ ಎಂಬ ನಿಯಮವನ್ನೂ ಕೈಬಿಡಲಾಗಿದೆ. ಇದೇ ವೇಳೆ, ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ಸೋಮವಾರ ರಾಜ್ಯಸಭೆಯ ತನ್ನ ಎಲ್ಲ ಸದಸ್ಯರಿಗೂ ವಿಪ್ ಜಾರಿ ಮಾಡಿ, ಸದನದಲ್ಲಿ ಉಪಸ್ಥಿತಿಯಿರುವಂತೆ ಮತ್ತು ದೆಹಲಿ ಸೇವೆಗಳಿಗೆ ಸಂಬಂಧಿಸಿದ ವಿಧೇಯಕದ ವಿರುದ್ಧ ಮತ ಚಲಾಯಿಸುವಂತೆ ಸೂಚಿಸಿತ್ತು. ಆದರೆ, ವಿಧೇಯಕ ಮಂಡನೆಯಾಗಿಲ್ಲ.
ಖರ್ಗೆ ನೇತೃತ್ವದಲ್ಲಿ ರಾಷ್ಟ್ರಪತಿಗಳ ಭೇಟಿ
ಸಂಸತ್ನಲ್ಲಿ ಪ್ರಧಾನಿ ಹೇಳಿಕೆಗೆ ಒತ್ತಾಯಿಸುತ್ತಿರುವ ಪ್ರತಿಪಕ್ಷಗಳು ಈಗ ಈ ವಿಚಾರದಲ್ಲಿ ರಾಷ್ಟ್ರಪತಿಯವರನ್ನೂ ಭೇಟಿಯಾಗಲು ನಿರ್ಧರಿಸಿವೆ. ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೋರಿದ್ದಾರೆ. ಜತೆಗೆ, ತಮ್ಮ ಮುಂದಿನ ನಡೆ ಕುರಿತು ಕಾರ್ಯತಂತ್ರ ರೂಪಿಸಲು ಮಂಗಳವಾರ ಬೆಳಗ್ಗೆ 10 ಗಂಟೆಗೆ ಖರ್ಗೆ ಕಚೇರಿಯಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ.
ಸಂಸತ್ನಲ್ಲಿ ಚರ್ಚೆಯಾಗಬಾರದು ಎಂಬ ಕಾರಣಕ್ಕೇ ಮಣಿಪುರ ವಿಚಾರದಲ್ಲಿ ಪ್ರತಿಪಕ್ಷಗಳು ತಮ್ಮ ಗುರಿಯನ್ನು ಬದಲಿಸುತ್ತಿವೆ. ಪ್ರತಿಪಕ್ಷ ನಾಯಕರು ಧರಿಸಿರುವ ಬಟ್ಟೆಗಳು ಎಷ್ಟು ಕಪ್ಪಗಿವೆಯೋ, ಅವರ ಮನಸ್ಥಿತಿಯೂ ಅಷ್ಟೇ ಕಪ್ಪಗಿದೆ.
– ನಿರ್ಮಲಾ ಸೀತಾರಾಮನ್, ಕೇಂದ್ರ ಹಣಕಾಸು ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
Gurugram: ಗುಂಡಿನ ಚಕಮಕಿ-ನಟೋರಿಯಸ್ ಕ್ರಿಮಿನಲ್ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ
Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!
Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ
World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.