Loksabha Election: ಸೋತು ಗೆದ್ದ ಇಂಡಿಯಾ ಒಕ್ಕೂಟ
Team Udayavani, Jun 5, 2024, 5:35 AM IST
ನವದೆಹಲಿ: ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ರಚನೆಯಾದ ಮೈತ್ರಿಕೂಟ ಅಧಿಕಾರಕ್ಕೇರಲು ವಿಫಲವಾಗಿದೆ. ಆದರೂ ತನ್ನ ಉದ್ದೇಶದಲ್ಲಿ ಭಾಗಶಃ ಸಫಲವಾಗಿದೆ ಎನಿಸಿಕೊಂಡಿದೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಕೇವಲ 91 ಸ್ಥಾನ ಲಭ್ಯವಾಗಿತ್ತು. ಈ ಬಾರಿ ಸರ್ಕಾರ ರಚನೆ ಮಾಡದಿದ್ದರೂ 141 ಸ್ಥಾನಗಳ ಏರಿಕೆಯನ್ನು ಕಂಡಿದೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮೈತ್ರಿಕೂಟ ರಚನೆ ಮಾಡಿಕೊಂಡರೂ ಸಹ ಸಣ್ಣಪುಟ್ಟ ಪಕ್ಷಗಳು ಸೇರಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದು, ಮೈತ್ರಿಕೂಟದ ಸೋಲಿಗೆ ಪ್ರಮುಖ ಕಾರಣ ಎನಿಸಿಕೊಂಡಿದೆ. ಅಲ್ಲದೆ, ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಚುನಾವಣೆಯ ಸಮಯದಲ್ಲಿ “ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಸಂಪತ್ತು ಮರುಹಂಚಿಕೆ ಹೇಳಿಕೆ’ ಕೂಡ ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆ ಉಂಟುಮಾಡಿತು.
ಪ್ರಧಾನಿ ಅಭ್ಯರ್ಥಿ ಇಲ್ಲದ್ದು: ಎನ್ಡಿಎ ಮೈತ್ರಿಕೂಟದ ಬಳಿ ಇರುವ ಮೋದಿಯಂತಹ ಅಭ್ಯರ್ಥಿ ಇಂಡಿಯಾ ಮೈತ್ರಿಕೂಟದ ಬಳಿ ಇಲ್ಲದೇ ಇದ್ದುದ್ದು ಸಹ ಸೋಲಿಗೆ ಪ್ರಮುಖ ಕಾರಣವಾಗಿದೆ. ರಾಹುಲ್ ಗಾಂಧಿ, ಮಲ್ಲಿ ಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ರಂತಹ ಎಲ್ಲಾ ನಾಯಕರು ಪ್ರಧಾನಿ ಹುದ್ದೆಯತ್ತ ಕಣ್ಣು ಹಾಕಿದ್ದು, ಜನರಲ್ಲಿ ಮೈತ್ರಿಕೂಟದ ಮೇಲಿನ ವಿಶ್ವಾಸವನ್ನು ಕುಂದಿಸಲು ಕಾರಣವಾಯಿತು.
ಅಧಿಕಾರಕ್ಕೇರಲು ವಿಫಲವಾದರೂ ಇಂಡಿಯಾ ಮೈತ್ರಿಕೂಟದ ಸಾಧನೆಯನ್ನು ಅಲ್ಲಗಳೆಯುವಂತಿಲ್ಲ. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾಡಿಕೊಂಡ ಒಪ್ಪಂದಗಳು, ಚುನಾವಣೆಗೂ ಮುನ್ನ ಜನರನ್ನು ತಲುಪಿದ್ದು, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಅರ್ಥ ಮಾಡಿಸಿದ್ದು ಮೈತ್ರಿಕೂಟದ ಕೈ ಹಿಡಿದಿದೆ.
ಕಾಂಗ್ರೆಸ್ ಪಕ್ಷ ದೇಶದ ಪ್ರಾಚೀನ ಪಕ್ಷ ಎಂಬ ಹಣೆಪಟ್ಟಿಯನ್ನು ಹೊಂದಿದ್ದರೂ ಸಹ ಚುನಾವಣೆಗೂ ಮುನ್ನ ಪ್ರತಿಷ್ಠೆಯನ್ನು ಪಕ್ಕಕ್ಕಿಟ್ಟು, ಇತರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾಡಿಕೊಂಡಿತು. ಉತ್ತರ ಪ್ರದೇಶ ದಲ್ಲಿ ಯೋಗಿ ಆದಿತ್ಯನಾಥರನ್ನು ಬಿಜೆಪಿ ಪಕ್ಕಕ್ಕೆ ಸರಿಸಿದ್ದರ ಪರಿಣಾಮವನ್ನು ಯಶಸ್ವಿಯಾಗಿ ಬಳಸಿಕೊಂಡಿತು. ಮಾಯಾವತಿ ಅವರ ಪಕ್ಷಕ್ಕೆ ಸಿಗುತ್ತಿದ್ದ ಮತಗಳು ಒಟ್ಟಾಗಿ ಇಂಡಿಯಾ ಪಾಲಾಯಿತು.
ಇದಿಷ್ಟೇ ಅಲ್ಲದೇ ಚುನಾವಣೆ ಘೋಷಣೆ ಯಾಗುವ ಮೊದಲೇ ಸಾಮಾಜಿಕ ಜಾಲ ತಾಣಗಳಲ್ಲಿ ನಿರಂತರವಾಗಿ ಪ್ರಚಾರ ಮಾಡುತ್ತಾ ಇಂಡಿಯಾ ಮೈತ್ರಿಕೂಟ ತನ್ನತ್ತ ಜನರನ್ನು ಸೆಳೆದಿದ್ದು, ಈ ಚುನಾವಣೆಯಲ್ಲಿ ಲಾಭ ತಂದುಕೊಟ್ಟಿತು. ಬಿಜೆಪಿ ನೀಡಿದ ಸಂವಿಧಾನ ಬದಲು ಹೇಳಿಕೆಯನ್ನು ಪ್ರಖರವಾಗಿ ಇಂಡಿಯಾ ಒಕ್ಕೂಟ ಬಳಸಿ ಕೊಂಡಿತು. ಹೀಗಾಗಿ ಇಂಡಿಯಾ ಒಕ್ಕೂಟ ಎಲ್ಲರ ನಿರೀಕ್ಷೆಯನ್ನು ಮೀರಿ ಅತಿಹೆಚ್ಚು ಸ್ಥಾನಗಳನ್ನು ತನ್ನದಾಗಿಸಿಕೊಂಡಿತು.
ಸೋಲಿಗೆ ಕಾರಣಗಳೇನು?
ಹೆಚ್ಚು ಪಕ್ಷಗಳನ್ನು ವಿಶ್ವಾಸಕ್ಕೆ ತರುವಲ್ಲಿನ ವಿಫಲತೆ
ಮೋದಿ ರೀತಿಯ ಪ್ರಧಾನಿ ಅಭ್ಯರ್ಥಿ ಇಲ್ಲದೇ ಇದ್ದದ್ದು
ರಾಹುಲ್, ಪ್ರಿಯಾಂಕರ ಮೇಲೆ ಹೆಚ್ಚು ಅವಲಂಬನೆ
ಕರ್ನಾಟಕ ಸೇರಿ ಭರವಸೆ ರಾಜ್ಯದಲ್ಲಿ ಭಾರಿ ಕುಸಿತ
ಕೊನೇ ಕ್ಷಣದಲ್ಲಿ ನಿತೀಶ್ ಕುಮಾರ್ ಮೈತ್ರಿಕೂಟ ತೊರೆದು ಹೋಗಿದ್ದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.