Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ


Team Udayavani, May 20, 2024, 6:15 AM IST

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ 5ನೇ ಹಂತದಲ್ಲಿ ಸೋಮವಾರ ದೇಶದ 8 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹಾಗೆಯೇ ಒಡಿಶಾದ 35 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯಲಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ ಬರೇಲಿ), ಬಿಜೆಪಿ ನಾಯಕಿ ಸ್ಮೃತಿ ಇರಾನಿ, ಕಾಂಗ್ರೆಸ್‌ನ ಕಿಶೋರಿಲಾಲ್‌ ಶರ್ಮ (ಅಮೇಠಿ), ಕೇಂದ್ರ ಸಚಿವ ಪೀಯೂಷ್‌ ಗೋಯಲ್‌ (ಮುಂಬಯಿ ಉತ್ತರ), ಕೇಂದ್ರ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ (ಲಕ್ನೋ), ಚಿರಾಗ್‌ ಪಾಸ್ವಾನ್‌ (ಹಾಜಿಪುರ) ಕಣದಲ್ಲಿರುವ ಪ್ರಮುಖರು.

ಬಿಹಾರ, ಜಮ್ಮು-ಕಾಶ್ಮೀರ, ಲಡಾಖ್‌, ಝಾರ್ಖಂಡ್‌, ಮಹಾರಾಷ್ಟ್ರ, ಒಡಿಶಾ, ಉತ್ತರಪ್ರದೇಶ, ಪ. ಬಂಗಾಲಗಳಲ್ಲಿ ಮತದಾನ ನಡೆಯಲಿದೆ. ಈ ಹಿಂದಿನ ಪ್ರತೀ ಹಂತದಲ್ಲೂ ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗಿರುವುದು ಕಂಡುಬಂದಿದೆ. ಚುನಾವಣ ಆಯೋಗ ಈ ಬಾರಿ ವಿಶೇಷವಾಗಿ ಮನವಿ ಮಾಡಿದ್ದು, ಮನೆಯಿಂದ ಹೊರಬಂದು ಮತ ಚಲಾಯಿಸುವಂತೆ ನಗರ ಮತದಾರರಲ್ಲಿ ಕೇಳಿಕೊಂಡಿದೆ.

2019ರಲ್ಲಿ ಬಿಜೆಪಿ 32, ಕಾಂಗ್ರೆಸ್‌ಗೆ ಕೇವಲ 1 ಸ್ಥಾನ
ಸೋಮವಾರ ಮತದಾನ ನಡೆಯಲಿರುವ 49 ಕ್ಷೇತ್ರಗಳಲ್ಲಿ 2019ರ ಚುನಾವಣೆಯಲ್ಲಿ ಬಿಜೆಪಿ ಯೊಂದೇ 32 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮಾತ್ರ ಕಾಂಗ್ರೆಸ್‌ ಗೆದ್ದಿತ್ತು. ಉಳಿದ 9 ಸ್ಥಾನಗಳಲ್ಲಿ ಹಿಂದಿನ ಅವಿಭಜಿತ ಶಿವಸೇನೆ 7, ಬಿಜೆಡಿ 2 ಸ್ಥಾನ ಗೆದ್ದಿತ್ತು.

ಅಂಕಿಸಂಖ್ಯೆಗಳು
1.5ನೇ ಹಂತದ ಚುನಾವಣೆಯಲ್ಲಿ 49 ಲೋಕ
ಸಭಾ ಕ್ಷೇತ್ರಗಳು. 39 ಸಾಮಾನ್ಯ, 3 ಪರಿಶಿಷ್ಟ ಪಂಗಡ, 7 ಪರಿಶಿಷ್ಟ ಜಾತಿ ಮೀಸಲು ಸ್ಥಾನಗಳು.
2.ಬಿಹಾರ 5, ಜಮ್ಮು-ಕಾಶ್ಮೀರ 1, ಝಾರ್ಖಂಡ್‌ 3, ಲಡಾಖ್‌ 1, ಮಹಾರಾಷ್ಟ್ರ 13, ಒಡಿಶಾ 5, ಉತ್ತರ ಪ್ರದೇಶ 14, ಪ. ಬಂಗಾಲ 7 ಕ್ಷೇತ್ರ.
3.ಒಟ್ಟು 695 ಅಭ್ಯರ್ಥಿಗಳು ಕಣದಲ್ಲಿ. ಮಹಾ ರಾಷ್ಟ್ರ ಒಂದರಲ್ಲೇ 264 ಅಭ್ಯರ್ಥಿಗಳು.
4.ಒಟ್ಟು ಮತದಾರರು 8.95 ಕೋಟಿ. ಈ ಪೈಕಿ 4.69 ಕೋಟಿ ಪುರುಷರು, 4.26 ಕೋಟಿ ಮಹಿಳೆಯರು, 5,409 ತೃತೀಯ ಲಿಂಗಿಗಳು. 94,732 ಮತಗಟ್ಟೆಗಳು, 9.47 ಲಕ್ಷ ಚುನಾವಣ ಅಧಿಕಾರಿಗಳು.
5.85 ವರ್ಷ ದಾಟಿದ ಮತದಾರರು 7.81 ಲಕ್ಷ, ಶತಾಯುಷಿಗಳು 24,792.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.