![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-415x241.jpg)
Lok Sabha; ರಾಹುಲ್ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್!
Team Udayavani, Jul 3, 2024, 5:45 AM IST
![Lok Sabha; Many parts of Rahul Gandhi’s speech deducted from file](https://www.udayavani.com/wp-content/uploads/2024/07/rahul-2-620x342.jpg)
ಹೊಸದಿಲ್ಲಿ: ವಿಪಕ್ಷ ನಾಯಕನಾಗಿ ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಸೋಮವಾರ ಮಾಡಿದ ಚೊಚ್ಚಲ ಭಾಷಣದ ಹಲವು ಭಾಗಗಳಿಗೆ ಕತ್ತರಿ ಪ್ರಯೋಗ ಮಾಡ ಲಾಗಿದೆ. ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ರಾಹುಲ್ ಮಾಡಿದ ಭಾಷಣದಲ್ಲಿ 18 ವಿಚಾರಗಳನ್ನು ಕಡತ ದಿಂದ ತೆಗೆದುಹಾಕಲಾಗಿದೆ. ಈ ಪೈಕಿ ಬಹುತೇಕ ಹೇಳಿಕೆಗಳು ಪ್ರಧಾನಿ ಮೋದಿ ಮತ್ತು ಅದಾನಿ ಅವರಿಗೆ ಸಂಬಂಧಿಸಿದ್ದು ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, “ನಾನು ಏನನ್ನು ಹೇಳಬೇಕಿತ್ತೋ ಅದನ್ನು ಹೇಳಿದ್ದೇನೆ ಮತ್ತು ಸತ್ಯವನ್ನೇ ಹೇಳಿದ್ದೇನೆ. ಅವರಿಗೆ ಇಷ್ಟ ಬಂದಷ್ಟನ್ನು ಅವರು ಕಡತದಿಂದ ತೆಗೆದುಹಾಕಲಿ. ಏನೇ ಆದರೂ ಕೊನೆಗೆ ಜಯ ಸಿಗುವುದು ಸತ್ಯಕ್ಕೆ’ ಎಂದಿದ್ದಾರೆ. ಅಲ್ಲದೆ “ಮೋದಿಯವರ ಜಗತ್ತಿನಲ್ಲಿ ಸತ್ಯವನ್ನು ತೆಗೆದುಹಾಕಬಹುದು. ಆದರೆ ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ’ ಎಂದಿದ್ದಾರೆ.
ಸ್ಪೀಕರ್ಗೆ ರಾಗಾ ಪತ್ರ: ಜತೆಗೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು, ತಮ್ಮ ಭಾಷಣದ ಭಾಗಗಳನ್ನು ತೆಗೆದುಹಾಕಿರುವ ನಡೆಯು ಸಂಸದೀಯ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು. ಅವುಗಳನ್ನು ಮತ್ತೆ ಕಡತಕ್ಕೆ ಸೇರಿಸುವಂತೆ ಮನವಿ ಮಾಡಿದ್ದಾರೆ. ಜತೆಗೆ ಆರೋಪಗಳೇ ತುಂಬಿದ್ದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಭಾಷಣವನ್ನೇಕೆ ತೆಗೆದುಹಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.
ಖರ್ಗೆ ಭಾಷಣಕ್ಕೂ ಕತ್ತರಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ್ದ ಭಾಷಣದಲ್ಲೂ 6 ವಿಚಾರಗಳನ್ನು ಕಡತದಿಂದ ತೆಗೆದುಹಾಕಲಾಗಿದೆ.
ಯಾವ ವಿಚಾರಗಳಿಗೆ ಕತ್ತರಿ?
ನೀಟ್ ಪರೀಕ್ಷೆ ಶ್ರೀಮಂತರಿಗೆಂದೇ ಮಾಡಿದ್ದು, ಪ್ರತಿಭಾವಂತರಿಗೆ ಇಲ್ಲಿ ಜಾಗವಿಲ್ಲ.
ಅಗ್ನಿವೀರ್ ಯೋಜನೆ ಭಾರತೀಯ ಸೇನೆಯದ್ದಲ್ಲ, ಬದಲಿಗೆ ಪ್ರಧಾನಿ ಕಾರ್ಯಾಲಯದ್ದು
ಬಿಜೆಪಿಯು ಅಲ್ಪಸಂಖ್ಯಾಕರನ್ನು ನ್ಯಾಯಯುತವಾಗಿ ನಡೆಸಿಕೊಳ್ಳುತ್ತಿಲ್ಲ
ಅದಾನಿ, ಅಂಬಾನಿ ಕುರಿತ ಪ್ರಸ್ತಾವ
ಟಾಪ್ ನ್ಯೂಸ್
![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![3-kushtagi](https://www.udayavani.com/wp-content/uploads/2024/07/3-kushtagi-150x90.jpg)
Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ
![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-150x87.jpg)
Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು](https://www.udayavani.com/wp-content/uploads/2024/07/bidanur-150x85.jpg)
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
![2-kushtagi](https://www.udayavani.com/wp-content/uploads/2024/07/2-kushtagi-150x90.jpg)
ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.