Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ
ಮೂರು ರಾಜ್ಯಗಳಲ್ಲಿ ಒಟ್ಟು ಇರುವ ಲೋಕಸಭಾ ಕ್ಷೇತ್ರಗಳು 65
Team Udayavani, Dec 3, 2023, 3:31 PM IST
ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪೂರ್ಣ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹವಣಿಕೆಯಲ್ಲಿರುವ ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ.
ಎಲ್ಲ ಸವಾಲುಗಳನ್ನು, ಸಮೀಕ್ಷೆಗಳನ್ನೂ ಮೀರಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ದಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಉತ್ತರ ಭಾರತದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಹಾಕಿಯೇ ಜಿದ್ದಿಗೆ ಬಿದ್ದು ರಣತಂತ್ರ ರೂಪಿಸಿತ್ತು. ಕೇಂದ್ರ ಸಚಿವರು, ಸಂಸದರನ್ನು ಕಣಕ್ಕಿಳಿಸಿತ್ತು.
ಕೇಸರಿ ಪಾಳಯದ ನಿರೀಕ್ಷೆ ಮೀರಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ದಲ್ಲಿ ಮತದಾರ ಪ್ರಭುಗಳು ಬಿಜೆಪಿಯ ಕೈಹಿಡಿದಿದ್ದಾರೆ. ಮೂರು ರಾಜ್ಯಗಳಲ್ಲಿ ಒಟ್ಟು ಇರುವ ಲೋಕಸಭಾ ಕ್ಷೇತ್ರಗಳು 65, ಮಧ್ಯಪ್ರದೇಶ(29), ರಾಜಸ್ಥಾನ( 25) ಮತ್ತು ಛತ್ತೀಸ್ ಗಢ ದಲ್ಲಿ(11) ಸ್ಥಾನಗಳಿವೆ. ಈ ಎಲ್ಲಾ ಸ್ಥಾನಗಳನ್ನು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಬಿಜೆಪಿ ಇಟ್ಟುಕೊಂಡಿದೆ. 2019 ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ 28 ಸ್ಥಾನಗಳನ್ನು , ರಾಜಸ್ಥಾನದಲ್ಲಿ 24 ಮತ್ತು ಛತ್ತೀಸ್ ಗಢ ದಲ್ಲಿ 9 ಗೆದ್ದಿತ್ತು. ಈ ಫಲಿತಾಂಶ ಈ ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸ ತುಂಬಿದೆ.
ಬಿಜೆಪಿ ಗೆದ್ದಿರುವ ಮೂರು ರಾಜ್ಯಗಳಲ್ಲಿ ನೇರ ಹಣಾಹಣಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೇ ಇತ್ತು. ಇಂಡಿಯಾ ಮೈತ್ರಿ ಕೂಟದ ಇತರ ಪಾಲುದಾರ ಪಕ್ಷಗಳು ಇಲ್ಲಿ ಅಷ್ಟೊಂದು ಪ್ರಾಬಲ್ಯ ಹೊಂದಿರಲಿಲ್ಲ. ಕಾಂಗ್ರೆಸ್ ಗೆ ಇದೊಂದು ದೊಡ್ಡ ಹೊಡೆತವಾಗಿದ್ದು, ಮೂರು ತಿಂಗಳ ಹಿಂದೆ ಗೆಲ್ಲುವ ಪೂರ್ಣ ವಿಶ್ವಾಸ ಹೊಂದಿದ್ದ ಮಧ್ಯಪ್ರದೇಶವೂ ತಪ್ಪಿ ಹೋಗಿದೆ. ಸಮೀಕ್ಷೆಗಳು ಗೆಲುವು ಸಿಗಲಿದೆ ಎಂದಿದ್ದ ಛತ್ತೀಸ್ ಗಢವೂ ಕೈತಪ್ಪಿ ಹೋಗಿದೆ. ರಾಜಸ್ಥಾನದಲ್ಲಿ ಆಂತರಿಕ ಸಂಘರ್ಷ ಪೂರ್ಣ ಪ್ರಮಾಣದಲ್ಲಿ ಮುಳುವಾಗಿದೆ.
ಸವಾಲು
ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಸಮರ್ಥ ನಾಯಕತ್ವವನ್ನು ಆಯ್ಕೆ ಮಾಡಿ ಯಾವುದೇ ಭಿನ್ನಾಭಿಪ್ರಾಯಗಳು ಪಕ್ಷದಲ್ಲಿ ಉಲ್ಬಣವಾಗದಂತೆ ನೋಡಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದ್ದು , ಪಾಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಈಡೇರಿಸುವುದು ಸವಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.