
Loksabha; ದೇಶಕ್ಕೆ ಬೆಂಕಿ ಹಚ್ಚಿ ಎನ್ನುವವರನ್ನು ಸೋಲಿಸಿ: ಮತದಾರರಿಗೆ ಮೋದಿ
Team Udayavani, Apr 2, 2024, 11:22 PM IST

ರುದ್ರಾಪುರ: “ವಿಪಕ್ಷಗಳ ಒಬ್ಬೊಬ್ಬರನ್ನೇ ಹುಡುಕಿ, ಹುಡುಕಿ ಸ್ವತ್ಛಗೊಳಿಸಿ. ಈ ಬಾರಿ ರಣಾಂಗಣದಲ್ಲಿ ಒಬ್ಬರೂ ಉಳಿಯದಂತೆ ನೋಡಿಕೊಳ್ಳಿ.’ ಇದು ಉತ್ತರಾಖಂಡದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ.
ಇಲ್ಲಿನ ರುದ್ರಾಪುರದಲ್ಲಿ ಮಂಗಳವಾರ ಲೋಕಸಭೆ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ಮೋದಿ, “”ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಬೆಂಕಿ ಬೀಳುತ್ತದೆ ಎಂದು ವಿಪಕ್ಷಗಳ ರಾಜಮನೆತನದ “ರಾಜಕುಮಾರ’ ಘೋಷಿಸಿದ್ದಾರೆ. ಅವರು 60 ವರ್ಷ ದೇಶವನ್ನು ಆಳಿದರು. ಆದರೆ ಕೇವಲ 10 ವರ್ಷ ಅಧಿಕಾರದಿಂದ ದೂರುವುಳಿದ ತತ್ಕ್ಷಣ ಅವರು ದೇಶಕ್ಕೆ ಬೆಂಕಿ ಹಚ್ಚುವ ಮಾತನಾಡುತ್ತಾರೆ. ಅಂಥವರಿಗೆ ಶಿಕ್ಷೆ ನೀಡಬೇಕೆಂದು ನೀವು ಬಯಸಿದ್ದೇ ಆದಲ್ಲಿ, ಒಬ್ಬೊಬ್ಬರನ್ನೂ ಹುಡುಕಿ ಹುಡುಕಿ, ಅವರು ಮೈದಾನದಲ್ಲೇ ಇರದಂತೆ ಮಾಡಿ” ಎಂದು ಗುಡುಗಿದ್ದಾರೆ.
ಬಿಜೆಪಿಯೇನಾದರೂ ಈ ಚುನಾವಣೆಯಲ್ಲಿ ಗೆದ್ದರೆ, ಅವರು ಸಂವಿಧಾನವನ್ನೇ ಬದಲಾಯಿಸುತ್ತಾರೆ. ಆಗ ಇಡೀ ದೇಶಕ್ಕೆ ಬೆಂಕಿ ಬೀಳುತ್ತದೆ, ನಮ್ಮ ದೇಶ ಉಳಿಯುವುದಿಲ್ಲ ಎಂದು ಇತ್ತೀಚೆಗೆ ಇಂಡಿಯಾ ಒಕ್ಕೂಟದ ರ್ಯಾಲಿಯಲ್ಲಿ ರಾಹುಲ್ಗಾಂಧಿ ಹೇಳಿದ್ದರು.
ಭ್ರಷ್ಟರು ಒಟ್ಟಾಗಿರುವ ಚುನಾವಣೆ ಇದು: ಮೋದಿ
ಜೈಪುರ: “ಭ್ರಷ್ಟಾಚಾರ ವಿರುದ್ಧದ ಕ್ರಮವನ್ನು ತಡೆಯುವುದಕ್ಕಾಗಿ ಭ್ರಷ್ಟರು ಒಟ್ಟಾಗಿ ಚುನಾ ವಣ ಪ್ರಚಾರ ಮಾಡುತ್ತಿರುವ ಮೊದಲ ಲೋಕಸಭಾ ಚುನಾವಣಾ ಇದಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳ ವಾರ ಹೇಳಿದ್ದಾರೆ. ರಾಜಸ್ಥಾನದ ಕೋಟಪುತಲಿ ಯಲ್ಲಿ ಆಯೋಜಿಸಲಾಗಿದ್ದ ಚುನವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಈ ಚುನಾವಣೆಯು ಭ್ರಷಾcಚಾರ ವನ್ನು ಬೇರುಮಟ್ಟದಿಂದ ಕಿತ್ತೂಗೆಯುವ ಚುನಾವಣೆಯಾಗಲಿದೆ. ಸ್ವಾವಲಂಬಿ ಭಾರತ, ರೈತರ ಏಳಿಗೆ, ಪ್ರತೀ ಮನೆಗೂ ನೀರು ಪೂರೈಸುವುದಕ್ಕಾಗಿ ನಡೆಯುತ್ತಿರುವ ಚುನಾವಣೆ ಇದೆ. ಆದರೆ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ದೇಶಕ್ಕಾಗಿ ಚುನಾವಣೆ ನಡೆಸದೇ ತಮ್ಮ ಸ್ವಾರ್ಥಕ್ಕೆ ಸ್ಪರ್ಧಿಸುತ್ತಿವೆ” ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.