6 ತಿಂಗಳ ಜೀವಿತಾವಧಿಯಿದ್ದರೂ, 7 ವರ್ಷ ಪೂರೈಸಿದ ಮಾಮ್‌!

ಮಂಗಳನ ಕಕ್ಷೆಯಲ್ಲೇ ಸುತ್ತುತ್ತಿದೆ ಬಾಹ್ಯಾಕಾಶ ನೌಕೆ; ಇಸ್ರೋಗೆ ಹಲವು ಉಪಯುಕ್ತ ದತ್ತಾಂಶ ರವಾನೆ

Team Udayavani, Sep 26, 2021, 10:30 PM IST

6 ತಿಂಗಳ ಜೀವಿತಾವಧಿಯಿದ್ದರೂ, 7 ವರ್ಷ ಪೂರೈಸಿದ ಮಾಮ್‌!

ನವದೆಹಲಿ: ಮಂಗಳನ ಕಕ್ಷೆಯಲ್ಲಿ ತಿರುಗುತ್ತಿರುವ ಭಾರತದ ಮಾಮ್‌ ಬಾಹ್ಯಾಕಾಶ ನೌಕೆಯು ತನ್ನ ಜೀವಿತಾವಧಿಯನ್ನೂ ಮೀರಿ ಕೆಲಸ ಮಾಡುತ್ತಿದೆ!

ಈ ನೌಕೆಯ ಬಾಳಿಕೆಯ ಅವಧಿ ಇದ್ದಿದ್ದು 6 ತಿಂಗಳು. ಆದರೆ, ಮಂಗಳನ ಕಕ್ಷೆಯಲ್ಲಿ ಮಾಮ್‌ ನೌಕೆ ಸುತ್ತಲು ಆರಂಭಿಸಿ ಈಗ ಸರಿಯಾಗಿ 7 ವರ್ಷಗಳು ಸಂದಿವೆ. ಇದೊಂದು ಅತ್ಯಂತ ತೃಪ್ತಿದಾಯಕ ಅನುಭವ ಎಂದು ಮಂಗಳಯಾನದ ನೇತೃತ್ವ ವಹಿಸಿದ್ದ ಇಸ್ರೋ ಮಾಜಿ ಅಧ್ಯಕ್ಷ ಕೆ. ರಾಧಾಕೃಷ್ಣನ್‌ ಹೇಳಿದ್ದಾರೆ.

2013ರ ನ.5ರಂದು ಮಾಮ್‌ ಅನ್ನು ಇಸ್ರೋ ಉಡಾವಣೆ ಮಾಡಿತ್ತು. 2014ರ ಸೆ.24ರಂದು ಈ ಬಾಹ್ಯಾಕಾಶ ನೌಕೆಯು ಮಂಗಳನ ಕಕ್ಷೆ ತಲುಪಿತ್ತು. ನಂತರದಲ್ಲಿ ನಿರಂತರವಾಗಿ ತನ್ನ ಕಾರ್ಯ ನೆರವೇರಿಸುತ್ತಿರುವ ಮಾಮ್‌ ನೌಕೆಯು, ಇನ್ನೂ ಒಂದು ವರ್ಷ ಕಾಲ ಬಾಳಿಕೆ ಬರುವ ಸಾಧ್ಯತೆಯಿದೆ ಎನ್ನುತ್ತಾರೆ ಪ್ರೋಗ್ರಾಂ ಡೈರೆಕ್ಟರ್‌ ಎಂ. ಅಣ್ಣಾದುರೈ.

ಇದನ್ನೂ ಓದಿ:ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ಸಾಮಾನ್ಯವಾಗಿ ಅರ್ತ್‌ ರಿಮೋಟ್‌ ಸೆನ್ಸಿಂಗ್‌ ಉಪಗ್ರಹಗಳ ಕಾರ್ಯನಿರ್ವಹಣೆ ಅವಧಿ 7ರಿಂದ 9 ವರ್ಷಗಳಾಗಿರುತ್ತವೆ. ಆದರೆ, ಮಂಗಳ ಗ್ರಹದ ಸುತ್ತ ಕೂಡ ಬಾಹ್ಯಾಕಾಶ ನೌಕೆಯೊಂದು ಇಷ್ಟೊಂದು ದೀರ್ಘಾವಧಿ ಕಾರ್ಯನಿರ್ವಹಿಸುತ್ತಿರುವುದು ಅಚ್ಚರಿಯೇ ಸರಿ.

ಈ ನೌಕೆಯು ನಮಗೆ ಬಹಳಷ್ಟು ದತ್ತಾಂಶಗಳನ್ನೂ ಒದಗಿಸಿದೆ. ಬೇರೆ ಬೇರೆ ಋತುಗಳು ಮಂಗಳ ಗ್ರಹದ ವಾತಾವರಣದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎನ್ನುವುದನ್ನು ಅಧ್ಯಯನ ಮಾಡಲೂ ಇದು ನೆರವಾಗಿದೆ ಎಂದೂ ಅಣ್ಣಾದುರೈ ಹೇಳಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.