ಶಾಸಕ ಸಂಜಯ್ ಶಿರ್ಸಾತ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Team Udayavani, Oct 18, 2022, 4:54 PM IST
ಮುಂಬಯಿ: ಔರಂಗಾಬಾದ್ ಶಾಸಕ ಸಂಜಯ್ ಶಿರ್ಸಾತ್ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್ ಮೂಲಕ ಮುಂಬಯಿಗೆ ರವಾನಿಸಲಾಗಿದೆ.
ಸೋಮವಾರ ರಾತ್ರಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಔರಂಗಾಬಾದ್ನ ಸಿಗ್ಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಂತರ ಮಂಗಳವಾರ ಬೆಳಗ್ಗೆ ಚಿಕಿತ್ಸೆಗಾಗಿ ಮುಂಬಯಿಗೆ ರವಾನಿಸಲಾಗಿದ್ದು ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಂಜಯ್ ಶಿರ್ಸಾತ್ ಔರಂಗಾಬಾದ್ ಪಶ್ಚಿಮದಿಂದ ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಅಧಿಕಾರ ಪರಿವರ್ತನೆಯಲ್ಲಿ ಶಿರ್ಸಾತ್ ಕೂಡ ಭಾಗಿಯಾಗಿತ್ತು. ಶಿವಸೇನೆ ಅಭ್ಯರ್ಥಿಯಾಗಿ ಸತತ ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಸಂಜಯ್ ಶಿರ್ಸಾತ್ ಅವರು ಬಿಜೆಪಿಯ ಬಂಡಾಯ ಅಭ್ಯರ್ಥಿ ರಾಜು ಶಿಂಧೆ ಅವರನ್ನು 40,747 ಮತಗಳಿಂದ ಸೋಲಿಸಿದ್ದರು.
ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಬಂಡಾಯದಲ್ಲಿ ಭಾಗವಹಿಸಿದ್ದರು. ಶಿಂಧೆ-ಫಡ್ನವೀಸ್ ನೇತೃತ್ವದ ಸರಕಾರಕ್ಕೆ ಅವರು ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಇದ್ದವು. ಆದರೆ, ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ವಾಯುಭಾರ ಕುಸಿತ: ಬೆಂಗಳೂರು, ಕರಾವಳಿ ಸೇರಿ ದೇಶದ ಹಲವೆಡೆ 5 ದಿನ ಭಾರೀ ಮಳೆ ಸಾಧ್ಯತೆ
ಶಿವಸೇನೆ ವಿಭಜನೆಯ ಅನಂತರ, ಸಂಜಯ್ ಶಿರ್ಸಾತ್ ಅವರು ಶಿವಸೇನೆ ನಾಯಕತ್ವವನ್ನು ವಿಶೇಷವಾಗಿ ಸಂಸದ ಸಂಜಯ್ ರಾವುತ್ ಅನ್ನು ಕಟುವಾಗಿ ಟೀಕಿಸಿದ್ದರು.
ಸಂಜಯ್ ಶಿರ್ಸಾತ್ 1985ರಲ್ಲಿ ಶಿವಸೇನೆಯ ನಗರ ಸಂಘಟಕರಾಗಿ ನೇಮಕಗೊಂಡರು. 1995 ರಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಅಧಿಕಾರಕ್ಕೆ ಬಂದ ನಂತರ, ಅವರು ಮರಾಠವಾಡ ಕೈಗಾರಿಕಾ ಅಭಿವೃದ್ಧಿ ನಿಗಮದ ಸದಸ್ಯರಾಗಿ ಆಯ್ಕೆಯಾದರು.
2000ರಲ್ಲಿ ಶಿರ್ಸಾತ್ ಕಾರ್ಪೊರೇಟರ್ ಆಗಿ ಆಯ್ಕೆಯಾದರು. ಅನಂತರ 2009ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ ಶಿರ್ಸಾತ್ ಸತತ ಮೂರು ಬಾರಿ ಜಯಭೇರಿ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.