![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jan 29, 2025, 10:29 AM IST
ಲಕ್ನೋ : ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿ ಪ್ರಾಣ ಹಾನಿ ಸಂಭವಿಸಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಯಾರೂ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ ” ಎಲ್ಲಾ ಪೂಜ್ಯ ಸಂತರು, ಭಕ್ತರು, ರಾಜ್ಯ ಮತ್ತು ನಾಡಿನ ಜನರು ವದಂತಿಗಳಿಗೆ ಗಮನ ಕೊಡಬೇಡಿ, ತಾಳ್ಮೆಯಿಂದ ವರ್ತಿಸಿ, ನಿಮ್ಮೆಲ್ಲರ ಸೇವೆ ಮಾಡಲು ಆಡಳಿತವು ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ ಎಂದು ನಾನು ಮನವಿ ಮಾಡುತ್ತೇನೆ” ಎಂದರು.
”ಮಹಾಕುಂಭಕ್ಕೆ ಬಂದಿರುವ ಪ್ರಿಯ ಭಕ್ತರೇ,ನೀವಿರುವ ಗಂಗಾ ಮಾತೆಯ ಘಾಟ್ನಲ್ಲಿ ಸ್ನಾನ ಮಾಡಿ, ಸಂಗಮ ಕಡೆಗೆ ಹೋಗಲು ಪ್ರಯತ್ನಿಸಬೇಡಿ.ನೀವೆಲ್ಲರೂ ಆಡಳಿತದ ಸೂಚನೆಗಳನ್ನು ಅನುಸರಿಸಿ ಮತ್ತು ವ್ಯವಸ್ಥೆಗಳನ್ನು ಮಾಡಲು ಸಹಕರಿಸಿ.ಸಂಗಮದ ಎಲ್ಲಾ ಘಾಟ್ಗಳಲ್ಲಿ ಶಾಂತಿಯುತವಾಗಿ ಸ್ನಾನ ನಡೆಯುತ್ತಿದೆ. ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ” ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: Maha Kumbh ; ಭಾರೀ ಸನ್ನದ್ಧತೆಯ ಹೊರತಾಗಿಯೂ ಅಮಾವಾಸ್ಯೆಯಂದು ನಡೆಯಿತು ದುರಂತ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.