Maharashtra; ರೈಲಿನಲ್ಲಿ ದನದ ಮಾಂಸ ಸಾಗಾಟ ಶಂಕೆಯಿಂದ ವೃದ್ಧನ ಮೇಲೆ ಹಲ್ಲೆ
Team Udayavani, Sep 1, 2024, 9:28 AM IST
ಮುಂಬೈ: ದನದ ಮಾಂಸ ಕೊಂಡೊಯ್ಯುತ್ತಿದ್ದಾರೆ ಎಂದು ಶಂಕಿಸಿ ವೃದ್ಧನೊಬ್ಬನಿಗೆ ಸಹ ಪ್ರಯಾಣಿಕರು ಚಲಿಸುತ್ತಿರುವ ರೈಲಿನಲ್ಲಿ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.
ಅಶ್ರಫ್ ಮುನ್ಯಾರ್ ಅವರು ಸಾಗಿಸುತ್ತಿದ್ದ ಎರಡು ದೊಡ್ಡ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ಮಾಂಸದಂತಹ ವಸ್ತುವಿನ ಬಗ್ಗೆ ಸುಮಾರು ಹನ್ನೆರಡು ಜನರು ವಿಚಾರಣೆ ನಡೆಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.
“ನೀವು ಏನು ಸಾಗಿಸುತ್ತಿದ್ದೀರಿ? ನೀವು ಎಲ್ಲಿಗೆ ಹೋಗುತ್ತಿದ್ದೀರಿ? ನೀವು ಎಲ್ಲಿಂದ ಬಂದಿದ್ದೀರಿ? ನೀವು ಆಡುಗಳನ್ನು ತಂದಿದ್ದೀರಾ? ಅದನ್ನು ಎಷ್ಟು ಜನರು ತಿನ್ನುತ್ತಾರೆ?” ಎಂದೆಲ್ಲಾ ಪ್ರಶ್ನಿಸಿದ್ದಾರೆ.
ಹಿರಿಯ ವ್ಯಕ್ತಿಯು ತನ್ನ ಮಗಳ ಕುಟುಂಬಕ್ಕಾಗಿ ಮಾಂಸವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ
ಜಲಗಾಂವ್ ಜಿಲ್ಲೆಯ ನಿವಾಸಿಯಾದ ಮುನ್ಯಾರ್ ಅವರು ಮಾಲೆಗಾಂವ್ ನಲ್ಲಿರುವ ತಮ್ಮ ಮಗಳ ಮನೆಗೆ ಧುಲೆ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ವರದಿ ಹೇಳಿದೆ.
ವೃದ್ಧನ ಉತ್ತರದಿಂದ ಸಂತುಷ್ಟರಾಗದ ಜನರು ಆತನನ್ನು ಮತ್ತಷ್ಣು ಕೆಣಕಿ ಪ್ರಶ್ನಿಸಿದ್ದಾರೆ. ಯಾವ ಮಾಂಸ ಎಂದು ಕೇಳಿದ್ದಾರೆ. ಒಂದು ಹಂತದಲ್ಲಿ ವೃದ್ದ ಇದು ಕೋಣದ ಮಾಂಸ ಎಂದು ಹೇಳಿದ್ದಾರೆ.
“ನಾವು ಅದನ್ನು ಪರೀಕ್ಷಿಸಿದ ನಂತರ ನಾವು ಯಾವುದರ ಮಾಂಸ ಎಂದು ಗೊತ್ತಾತ್ತದೆ” ಎಂದು ಒಬ್ಬ ವ್ಯಕ್ತಿ ಪ್ರತಿಕ್ರಿಯಿಸಿದರು. “ಇದು ಶ್ರಾವಣ ಮಾಸ. ಇದು ನಮ್ಮ ಹಬ್ಬದ ಸಮಯ, ಈ ಸಮಯದಲ್ಲಿ ನೀವು ಹೀಗೆ ಮಾಡುತ್ತಿದ್ದೀರಿ” ಎಂದು ಇನ್ನೊಬ್ಬರು ಹೇಳಿದರು.
ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯಿದೆ 1976ರ ಪ್ರಕಾರ ಗೋವುಗಳು, ಹೋರಿಗಳು ಮತ್ತು ಎತ್ತುಗಳ ಹತ್ಯೆಯನ್ನು ನಿಷೇಧಿಸುತ್ತದೆ. ಎಮ್ಮೆ- ಕೋಣಗಳು ನಿಷೇಧದ ವ್ಯಾಪ್ತಿಗೆ ಬರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.