![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-415x234.jpg)
ಸ್ವಾತಂತ್ರ್ಯದ ದಿನ ಪಾಕ್ನಲ್ಲಿ ಕಳೆಯಲು ಬಯಸಿದ್ದ ಮಹಾತ್ಮಾ ಗಾಂಧಿ
Team Udayavani, Jan 20, 2020, 8:58 AM IST
![Mahathma-Gandhi-150-Birthday](https://www.udayavani.com/wp-content/uploads/2020/01/Mahathma-Gandhi-150-Birthday-620x347.jpg)
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ,: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಮೊದಲ ದಿನವನ್ನು (1947 ಆ. 15) ಮಹಾತ್ಮಾ ಗಾಂಧಿ ಈಗಿನ ಪಾಕಿಸ್ಥಾನದಲ್ಲಿ ಕಳೆಯಲು ನಿರ್ಧರಿಸಿದ್ದರು. ಕೇಂದ್ರದ ಮಾಜಿ ಸಚಿವ, ಲೇಖಕ ಎಂ.ಜೆ. ಅಕ್ಬರ್ ಬರೆದಿರುವ ‘ಗಾಂಧೀಸ್ ಹಿಂದೂಯಿಸಮ್: ದ ಸ್ಟ್ರಗಲ್ ಎಗೆನೆಸ್ಟ್ ಜಿನ್ನಾಸ್ ಇಸ್ಲಾಂ’ (Gandhi’s Hinduism: The Struggle Against Jinnah’s Islam) ಪುಸ್ತಕದಲ್ಲಿ ಈ ಕುತೂಹಲಕಾರಿ ಅಂಶವನ್ನು ಪ್ರಸ್ತುತಪಡಿಸಲಾಗಿದೆ.
ಅಕºರ್ ಬರೆದಿರುವ ಪ್ರಕಾರ ‘ಗಾಂಧಿಯವರು ಪೂರ್ವ ಪಾಕಿ ಸ್ಥಾನದ ನೋಖಾಲಿಯಲ್ಲಿ ಇರಲು ಬಯಸಿದ್ದರು. 1946ರಲ್ಲಿ ಆ ಪ್ರದೇಶದಲ್ಲಿ ಉಂಟಾಗಿದ್ದ ದಂಗೆಯಲ್ಲಿ ಹಿಂದೂಗಳು ತೀವ್ರ ರೀತಿಯಲ್ಲಿ ನೋವು ಅನುಭವಿಸಿದ್ದರು. ಅಲ್ಲಿ ಇರುವ ಮೂಲಕ ಅಂಥ ಘಟನೆಗಳು ಮರುಕಳಿಸದಂತೆ ಮಾಡುವುದು ಗಾಂಧೀಜಿಯ ಇಚ್ಛೆಯಾಗಿತ್ತು.’
‘ದೇಶವನ್ನು ಎರಡು ಭಾಗವಾಗಿ ವಿಭಜಿಸುವ ಬಗ್ಗೆ ಗಾಂಧಿಯವರು ನಂಬಿಕೆ ಇಟ್ಟುಕೊಂಡಿರಲಿಲ್ಲ. ಆದರೂ, ನಿರಂಕುಶ ಕತ್ತಿಯೊಂದರ ಮೂಲಕ ಅನೈಸರ್ಗಿಕ ಗಡಿಯನ್ನು ಸೃಷ್ಟಿಸಿದ್ದನ್ನು, ಗಾಂಧೀಜಿಯು ‘ಆ ಕ್ಷಣದ ಹುಚ್ಚುತನ’ ಎಂಬು ಬಣ್ಣಿಸಿದ್ದರು ಎಂಬುದಾಗಿ ಅಕ್ಬರ್ ತಮ್ಮ ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾರೆ.
1940 ಮತ್ತು 1947ರ ನಡುವಿನ ಏಳು ವರ್ಷಗಳ ಕಾಲದ ಅತ್ಯಂತ ಸ್ಫೋಟಕ ನಿರ್ಧಾರಗಳು, ಹಲವು ಎಡವಟ್ಟುಗಳು, ಹಿನ್ನಡೆಗಳ ಅಂಶಗಳು, ಸೈದ್ಧಾಂತಿಕ ಮತ್ತು ಈ ಪ್ರದೇಶದ ಭವಿಷ್ಯವನ್ನು ನಿರ್ಧರಿಸಿದ್ದ ನಾಯಕರ ವ್ಯಕ್ತಿತ್ವಗಳನ್ನು ಈ ಪುಸ್ತಕದಲ್ಲಿ ಅಕ್ಬರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-150x84.jpg)
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
![Gold-saffron](https://www.udayavani.com/wp-content/uploads/2024/12/Gold-saffron-150x90.jpg)
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
![United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ](https://www.udayavani.com/wp-content/uploads/2024/12/sri-sri-ravi-shankar-150x87.jpg)
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
![KSA-Nia-Arrest](https://www.udayavani.com/wp-content/uploads/2024/12/KSA-Nia-Arrest-150x90.jpg)
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.