ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಸಾಧ್ಯತೆ
Team Udayavani, Sep 30, 2022, 8:47 AM IST
ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಅಂತಿಮ ಸಭೆ ನಡೆಸಲಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಅವರೊಂದಿಗೆ ಖರ್ಗೆ ಮೂರನೇ ಅಭ್ಯರ್ಥಿಯಾಗಬಹುದು. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಿಂದ ಎಂಟು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಲೋಕಸಭೆ ಸಂಸದರಾಗಿದ್ದಾರೆ. ಸದ್ಯ ರಾಜ್ಯಸಭಾ ಸಂಸದರಾಗಿದ್ದಾರೆ. ದಲಿತ ನಾಯಕರಾಗಿರುವ ಖರ್ಗೆ ಅವರು ಮಾಜಿ ಕೆಪಿಸಿಸಿ ಅಧ್ಯಕ್ಷರು, ಮಾಜಿ ಗೃಹ ಸಚಿವರು ಮತ್ತು ಕೇಂದ್ರ ಸಚಿವರೂ ಆಗಿದ್ದರು.
ಇದನ್ನೂ ಓದಿ:ಉಡುಪಿ: ದ್ವೀಪ ಯಾನಕ್ಕೆ ಶೀಘ್ರ ಅನುಮತಿ: ಉಡುಪಿ ಡಿಸಿ ಕೂರ್ಮಾರಾವ್
ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಕೂಡ ಇಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಕದನ ತೀವ್ರಗೊಂಡಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರೇಸ್ ನಿಂದ ಹೊರಗುಳಿದ ನಂತರ ಹಲವು ರಾಜಕೀಯ ಘಟನೆಗಳು ನಡೆದಿದೆ. ಈ ತನಕ ತೆರೆಮರೆಯಲ್ಲಿದ್ದ ಖರ್ಗೆ ಇದೀಗ ಅಧ್ಯಕ್ಷ ಸ್ಥಾನದ ರೇಸ್ ಗೆ ಬಂದಿದ್ದಾರೆ.
ಅಧ್ಯಕ್ಷೀಯ ಚುನಾವಣೆಯ ಸುತ್ತ ಮುಕುಲ್ ವಾಸ್ನಿಕ್ ಮತ್ತು ಕುಮಾರಿ ಸೆಲ್ಜಾ ಹೆಸರುಗಳು ಕೂಡ ಸುತ್ತುತ್ತಿವೆ.
ರಾಜಸ್ಥಾನದ ರಾಜಕೀಯದ ಬಗ್ಗೆ ಮುಂದಿನ ಎರಡು ದಿನದಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.