![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 28, 2021, 12:48 PM IST
ನವ ದೆಹಲಿ : ಐದು ದಿನ ಗಳ ರಾಷ್ಟ್ರ ರಾಜಧಾನಿಯ ಪ್ರವಾಸದಲ್ಲಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಿನ್ನೆ( ಜುಲೈ 27) ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಭೇಟಿಯಾದ ಬಳಿಕ ಇಂದು (ಬುಧವಾರ, ಜುಲೈ 28) ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ಸದ್ಯದಲ್ಲೇ ರೂಪುಗೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪ್ರತಿ ಪಕ್ಷಗಳ ಒಕ್ಕೂಟ ರಚನೆಯತಾಗುತ್ತದೆ. ಆ ಒಕ್ಕೂಟವೇ ದೇಶವನ್ನು ಮುನ್ನಡೆಸುತ್ತದೆ ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳ ಒಕ್ಕೂಟದ ನೇತೃತ್ವವನ್ನು ನೀವೇ ವಹಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ದೇಶವೇ ನೇತೃತ್ವ ವಹಿಸುತ್ತದೆ, ನಾವೆಲ್ಲಾ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : “ಶುಭಾಶಯಗಳು ಮಾಮ” : ನೂತನ ಸಿಎಂ ಬೊಮ್ಮಾಯಿ ಗೆ ಅಭಿನಯ ಚಕ್ರವರ್ತಿಯ ಹಾರೈಕೆ
ಇನ್ನು, ಪಶ್ಚಿಮ ಬಂಗಾಳದ ಉಪಚುನಾವಣೆಯ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಚುನಾವಣಾ ಆಯೋಗವು ಅದನ್ನು ನಿರ್ಧರಿಸುತ್ತದೆ. ಆಯೋಗ ನೀಡುವ ಪ್ರೋಟೋಕಾಲ್ ಮೂಲಕ ಉಪ ಚುನಾವಣೆ ನಡೆಯುತ್ತದೆ ಎಂದಿದ್ದಾರೆ.
ಏಳು ಸ್ಥಾನಗಳಿಗೆ ಉಪಚುನಾವಣೆ ಪಶ್ಚಿಮ ಬಂಗಾಳದಲ್ಲಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ಜುಲೈ 15 ರಂದು ಟಿಎಂಸಿಯ ಆರು ಸದಸ್ಯರ ನಿಯೋಗ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿತ್ತು.
ದೀದಿ ಟೀ ಪಾರ್ಟಿ
ಇಂದು(ಬುಧವಾರ, ಜುಲೈ 28) ಮಮತಾ ಬ್ಯಾನರ್ಜಿ ಎಲ್ಲಾ ಪ್ರತಿ ಪಕ್ಷಗಳ ನಾಯಕರೊಂದಿಗೆ ಟೀ ಪಾರ್ಟಿ ಏರ್ಪಡಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ತೆಗಳು ಮಾಹಿತಿ ನೀಡಿವೆ.
ಇದನ್ನೂ ಓದಿ : ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿಗೆ ಜಗದೀಶ್ ಶೆಟ್ಟರ್ ಅಭಿನಂದನೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.