
ಹೆಚ್ಚಿಸಿದ ತೈಲ ಬೆಲೆಯ ಪಾಲು ರಾಜ್ಯಗಳಿಗೂ ಬರಲಿ
ಕೇಂದ್ರ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
Team Udayavani, Nov 9, 2021, 10:00 PM IST

ಕೋಲ್ಕತ: ಇಂಧನ ಬೆಲೆ ಏರಿಕೆ ಮಾಡಿದ್ದರಿಂದ ಕೇಂದ್ರಕ್ಕೆ 4 ಲಕ್ಷ ಕೋಟಿ ರೂಪಾಯಿ ಸಿಕ್ಕಿದ್ದು, ಆ ಹಣವನ್ನು ಎಲ್ಲ ರಾಜ್ಯಗಳಿಗೆ ಸರಿಸಮಾನವಾಗಿ ಹಂಚಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. “ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡುವುದರ ಮೂಲಕ ಕೇಂದ್ರ 4 ಲಕ್ಷ ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಿದೆ. ಆದರೀಗ ರಾಜ್ಯ ಸರ್ಕಾರಗಳಿಗೆ ವ್ಯಾಟ್ ಕಡಿಮೆ ಮಾಡಲು ಹೇಳುತ್ತಿದೆ. ಕೇಂದ್ರ ಆ ಹಣವನ್ನು ಎಲ್ಲ ರಾಜ್ಯಗಳಿಗೆ ಹಂಚಬೇಕು’ ಎಂದು ಮಮತಾ ಬ್ಯಾನರ್ಜಿ ನುಡಿದಿದ್ದಾರೆ.
ಇದನ್ನೂ ಓದಿ:ತುಳಿತಕ್ಕೊಳಗಾದ ಎಲ್ಲರೂ,ನಾನು ಸಹ ದಲಿತ : ಸಿದ್ದರಾಮಯ್ಯ
ಪರಿಹಾರ ಘೋಷಣೆ: ಇದೇ ವೇಳೆ ಬಿಭೂಮ್ ಜಿಲ್ಲೆಯ ಡಿಯೋಚಾ-ಪಚಾಮಿ ಕಲ್ಲಿದ್ದಲು ಗಣಿ ಯೋಜನೆಯಿಂದಾಗಿ ಆಸ್ತಿ ಕಳೆದುಕೊಳ್ಳುವವರಿಗೆ ಹಂಚುವುದಕ್ಕಾಗಿ 10 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವುದಾಗಿಯೂ ಮಮತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.