Video: ಬುರ್ಖಾ ಧರಿಸಿ ಆಭರಣದಂಗಡಿ ದೋಚಲು ಯತ್ನ; ಕಳ್ಳರನ್ನು ತಡೆದ ಮಾಲಕ


Team Udayavani, Jun 21, 2024, 5:53 PM IST

Man Dressed In Burqa Robs Hyderabad Jewellery Shop

ಹೈದರಾಬಾದ್: ಬುರ್ಖಾ ಧರಿಸಿ ಆಭರಣದ ಮಳಿಗೆಗೆ ಬಂದ ಇಬ್ಬರು ಡಕಾಯಿತರು ದೋಚಲು ವಿಫಲ ಯತ್ನ ನಡೆಸಿದ ಘಟನೆ ಹೈದರಾಬಾದ್ ಹೊರವಲಯದ ಮೆದಾಚಲ್ ನಲ್ಲಿ ನಡೆದಿದೆ. ಜುವೆಲ್ಲರಿ ಶಾಪ್ ಮಾಲಕ ಮತ್ತು ಆತನ ಮಗ ಸೇರಿ ದರೋಡೆಕೋರರ ಸಂಚನ್ನು ವಿಫಲಗೊಳಿಸಿದ್ದಾರೆ.

ಚೂರಿಯೊಂದಿಗೆ ದೋಚಲು ಬಂದಿದ್ದ ಇಬ್ಬರು ಭಾರಿ ಪ್ರಯತ್ನ ನಡೆಸಿದರೂ ಖಾಲಿ ಕೈಯಲ್ಲಿ ಹೋಗಿದ್ದಾರೆ. ಘಟನೆಯಲ್ಲಿ ಮಳಿಗೆ ಮಾಲಕ ಗಾಯಗೊಂಡಿದ್ದಾರೆ.

ಮಧ್ಯಾಹ್ನ 1:45 ರ ಸುಮಾರಿಗೆ ಇಬ್ಬರು ವ್ಯಕ್ತಿಗಳು ತಮ್ಮ ಗುರುತುಗಳನ್ನು ಮರೆಮಾಚಿಕೊಂಡು ಅಂಗಡಿಗೆ ನುಗ್ಗಿ ದರೋಡೆ ಯತ್ನ ನಡೆಸಿದ್ದಾರೆ. ಬುರ್ಖಾ ಧರಿಸಿದ್ದ ವ್ಯಕ್ತಿ ತಕ್ಷಣ ಅಂಗಡಿ ಮಾಲೀಕ ಶೇಷಾರಾಮ್ ಮೇಲೆ ಹಲ್ಲೆ ನಡೆಸಿ ಭುಜಕ್ಕೆ ಚಾಕುವಿನಿಂದ ಇರಿದಿದ್ದಾನೆ., ಹೆಲ್ಮೆಟ್ ಧರಿಸಿದ್ದ ಆತನ ಸಹಚರ ಆಭರಣ ಮತ್ತು ನಗದು ಸಂಗ್ರಹಿಸಲು ಪ್ರಾರಂಭಿಸಿದನು.

ಗಾಯಗೊಂಡರೂ ಶೇಷಾರಾಮ್ ಕೂಡಲೇ ಎಚ್ಚೆತ್ತುಕೊಂಡರು. ಅಲ್ಲದೆ ಅವರ ಪುತ್ರ ಸುರೇಶ್ ಕೂಡಲೇ ಮಧ್ಯಪ್ರವೇಶಿಸಿದ ಕಾರಣ ದೊಡ್ಡ ದರೋಡೆಯೊಂದು ತಪ್ಪಿದೆ.

ಸಹಾಯಕ್ಕಾಗಿ ಜೋರಾಗಿ ಕೂಗಿದ ಸುರೇಶ್ ಅವರು ದರೋಡೆಕೋರರ ಮೇಲೆ ಕುರ್ಚಿಗಳನ್ನು ಎಸೆದರು. ಇದರಿಂದ ದರೋಡೆಕೋರರು ಕದ್ದ ಮಾಲನ್ನು ಬಿಟ್ಟು ಓಡಿಹೋಗುವಂತೆ ಮಾಡಿದರು. ಪೊಲೀಸರು ಸ್ಥಳಕ್ಕಾಗಮಿಸುವ ಮುನ್ನವೇ ಕಳ್ಳರು ಮೋಟಾರು ಬೈಕ್ ನಲ್ಲಿ ಪರಾರಿಯಾಗಿದ್ದು, ನಾಪತ್ತೆಯಾಗಿದ್ದಾರೆ.

ದರೋಡೆಕೋರರು ಬೈಕ್ ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿರುವಾಗ ಅಂಗಡಿಯ ಹೊರಗೆ ಶೇಷಾರಾಮ್ ಅವರನ್ನು ಹಿಂಬಾಲಿಸುತ್ತಿರುವುದನ್ನು ಘಟನೆಯ ವೀಡಿಯೊಗಳು ತೋರಿಸುತ್ತವೆ. ಸುರೇಶ್ ಕೂಡ ಕುರ್ಚಿಯನ್ನು ಹಿಡಿದುಕೊಂಡು ಅಂಗಡಿಯಿಂದ ದರೋಡೆಕೋರನತ್ತ ಓಡುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ 25 ಮೀಟರ್ ದೂರದಲ್ಲಿ ದರೋಡೆ ನಡೆದಿದೆ. ಅಲ್ಲದೆ, ಸಮೀಪದಲ್ಲಿ ನಡೆಯುತ್ತಿರುವ ಮೇಲ್ಸೇತುವೆಯ ನಿರ್ಮಾಣ ಕಾರ್ಯದಿಂದ ಸುತ್ತಮುತ್ತಲಿನ ಸುಮಾರು 25 ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆದುಹಾಕಲಾಗಿದೆ. ದರೋಡೆಕೋರರು ಕೈಗವಸುಗಳನ್ನು ಧರಿಸಿದ್ದರಿಂದ ಯಾವುದೇ ಬೆರಳಚ್ಚು ಬಿಟ್ಟು ಹೋಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.