![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 13, 2022, 12:26 PM IST
ಭೋಪಾಲ್: ಸೋದರ ಸಂಬಂಧಿಯ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬರು ಆಕೆಯ ಉರಿಯುತ್ತಿರುವ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದೆ.
ಸಾಗರ ಜಿಲ್ಲೆಯ ಮಜ್ಗವಾನ್ ಗ್ರಾಮದ ಜ್ಯೋತಿ ಎಂಬವರು ಕಳೆದ ಶುಕ್ರವಾರ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು. ಶನಿವಾರ ಅವರ ಅಂತ್ಯಕ್ರಿಯೆ ನಡೆಸಲಾಗಿತ್ತು. ಜ್ಯೋತಿ ಚಿತೆಗೆ ಬೆಂಕಿ ನೀಡಿದ ಬಳಿಕ ಸಂಬಂಧಿಕರು ಮನೆಗೆ ತೆರಳಿದ್ದರು. ಇದಾಗಿ ಸ್ವಲ್ಪ ಸಮಯದ ಬಳಿಕ ಸೋದರ ಸಂಬಂಧಿ ಕರಣ್ ಸ್ಮಶಾನದ ಬಳಿ ಬಂದಿದ್ದಾರೆ.
ಉರಿಯುತ್ತಿದ್ದ ಚಿತೆಯ ಬಳಿ ಬಂದ ಕರಣ್ ಮೊದಲು ನಮನ ಸಲ್ಲಿಸಿದ್ದಾನೆ. ನಂತರ ಚಿತೆಯ ಮಧ್ಯಕ್ಕೆ ಹಾರಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ರಾಹುಲ್ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಈತನನ್ನು ಕಂಡ ಕೂಡಲೇ ಗ್ರಾಮಸ್ಥರು ಮನೆಯವರಿಗೆ ಮಾಹಿತಿ ನೀಡಿದರಾದರೂ, ಕುಟುಂಬಸ್ಥರು ಸ್ಥಳಕ್ಕೆ ತಲುಪುವಷ್ಟರಲ್ಲಿ 21 ವರ್ಷದ ಯುವಕ ತೀವ್ರವಾಗಿ ಸುಟ್ಟು ಕರಕಲಾಗಿದ್ದಾನೆ.
ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಕರಣ್ ಮೃತಪಟ್ಟಿದ್ದ ಎಂದು ಮಜ್ಗವಾನ್ ಗ್ರಾಮದ ಸರಪಂಚ್ ಭಗತ್ ಸಿಂಗ್ ಘೋಸಿ ಹೇಳಿದ್ದಾರೆ. ರವಿವಾರ ಬೆಳಗ್ಗೆ ಈತನ ಅಂತ್ಯಕ್ರಿಯೆಯನ್ನು ಜ್ಯೋತಿ ಸಮಾಧಿಯ ಬಳಿಯೇ ನಡೆಸಲಾಯಿತು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.