![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 14, 2023, 7:32 PM IST
ಕೊಚ್ಚಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ ಕೇರಳದ ನ್ಯಾಯಾಲಯವು ಮಂಗಳವಾರ ಮರಣದಂಡನೆ ವಿಧಿಸಿದೆ.
ಬಿಹಾರದ 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಅಪರಾಧಿ ಅಶ್ವಕ್ ಆಲಂನನ್ನು ಗಲ್ಲಿಗೇರಿಸುವಂತೆ ವಿಶೇಷ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶ ಕೆ ಸೋಮನ್ ಆದೇಶಿಸಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ (ಪಿಪಿ) ಜಿ ಮೋಹನರಾಜ್ ಹೇಳಿದ್ದಾರೆ.
ಬಿಹಾರದ ವಲಸೆ ಕಾರ್ಮಿಕ ಆಲಂಗೆ ನೀಡಿದ ಶಿಕ್ಷೆಯ ವಿವರಗಳನ್ನು ನೀಡಿದ ಪ್ರಾಸಿಕ್ಯೂಟರ್, ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಅಡಿಯಲ್ಲಿ ಅತ್ಯಾಚಾರ ಮತ್ತು ತೀವ್ರತರವಾದ ಲೈಂಗಿಕ ದೌರ್ಜನ್ಯದ ವಿವಿಧ ಅಪರಾಧಗಳಿಗಾಗಿ ಅಪರಾಧಿಗೆ ಐದು ಜೀವಾವಧಿ ಶಿಕ್ಷೆಯನ್ನು ನೀಡಲಾಗಿದೆ. ಆದರೆ ಮರಣದಂಡನೆ ಶಿಕ್ಷೆಯನ್ನು ಕೇರಳ ಹೈಕೋರ್ಟ್ ಖಚಿತಪಡಿಸಿದರೆ ಮಾತ್ರ ಶಿಕ್ಷೆ ಜಾರಿಯಾಗಲಿದೆ ಎಂದು ಮೋಹನರಾಜ್ ಮಾಧ್ಯಮಗಳಿಗೆ ತಿಳಿಸಿದರು.
ಜೀವಾವಧಿ ಶಿಕ್ಷೆ ಎಂದರೆ ಅಪರಾಧಿ ತನ್ನ ಸಹಜ ಜೀವನ ಪರ್ಯಂತ ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯವು ಅಪರಾಧಿಗೆ ₹ 6 ಲಕ್ಷಕ್ಕೂ ಹೆಚ್ಚು ದಂಡವನ್ನು ವಿಧಿಸಿದೆ ಎಂದು ಅವರು ಹೇಳಿದರು.
ಮಕ್ಕಳ ದಿನಾಚರಣೆ ದಿನದಂದೇ ನೀಡಿದ ಶಿಕ್ಷೆಯನ್ನು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ಬಲವಾದ ಎಚ್ಚರಿಕೆಯಾಗಿ ನೋಡಬೇಕು. ಮಗು ಅತ್ಯಂತ ಘೋರ ಅಪರಾಧಕ್ಕೆ ಬಲಿಯಾಗಿದೆ ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯನ್ನು ನೀಡಲು ಇಡೀ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಸಮರ್ಥವಾಗಿ ಕೆಲಸ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಜು. 28 ರಂದು ಅಪ್ರಾಪ್ತ ಬಾಲಕಿಯನ್ನು ಬಾಡಿಗೆ ಮನೆಯಿಂದ ಅಪಹರಿಸಿದ ನಂತರ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.