ಚುನಾವಣೆಯಲ್ಲಿ ಬಿಜೆಪಿಯ ಪಂಕಜಾ ಮುಂಡೆ ಸೋತರೆ ಸಾಯುವೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತ್ಯು
Team Udayavani, Jun 10, 2024, 1:27 PM IST
ಮಹಾರಾಷ್ಟ್ರ: ಭಾರತೀಯ ಜನತಾ ಪಕ್ಷದ ನಾಯಕಿ ಪಂಕಜಾ ಮುಂಡೆ ಅವರು ಬೀಡ್ ಲೋಕಸಭಾ ಕ್ಷೇತ್ರದಿಂದ ಸೋತರೆ ತಾನು ಬದುಕುವುದಿಲ್ಲ ಎಂದು ಹೇಳಿಕೊಂಡಿದ್ದ ಟ್ರಕ್ ಚಾಲಕ ಶುಕ್ರವಾರ ರಾತ್ರಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಮಾಹಿತಿ ಹಂಚಿಕೊಂಡ ಕಿಂಗಾವ್ ಪೊಲೀಸ್ ಠಾಣೆಯ ಅಧಿಕಾರಿ ಬೋರ್ಗಾಂವ್ ಪಟ್ಟಿ ಬಳಿಯ ಅಹ್ಮದ್ಪುರ-ಅಂಧೋರಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಬಸ್ ಡಿಕ್ಕಿ ಹೊಡೆದು ವ್ಯಕ್ತ್ತಿಯೊಬ್ಬರು ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ, ಈ ಸಂಬಂಧ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದ್ದು ಮೃತ ವ್ಯಕ್ತಿಯನ್ನು ಲಾತೂರ್ನ ಅಹ್ಮದ್ಪುರದ ಯೆಸ್ಟರ್ನ ಟ್ರಕ್ ಡ್ರೈವರ್ ಆಗಿದ್ದ ಸಚಿನ್ ಕೊಂಡಿಬಾ ಮುಂಡೆ ಎಂಬುದು ತಿಳಿದು ಬಂದಿದೆ.
ಅಲ್ಲದೆ ವ್ಯಕ್ತಿಯ ಕುರಿತು ಮಾಹಿತಿ ಕಲೆಹಾಕಿದ ಪೊಲೀಸರಿಗೆ ಪ್ರಮುಖ ಮಾಹಿತಿಯೊಂದು ಲಭ್ಯವಾಗಿದ್ದು, ಇತ್ತೀಚಿಗೆ ನಡೆದ ಲೋಕ ಸಭಾ ಚುನಾವಣೆಯಲ್ಲಿ ಬೀಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಂಕಜಾ ಮುಂಡೆ ಸ್ಪರ್ಧಿಸಿದ್ದರು ಈ ಸಮಯದಲ್ಲಿ ಸಚಿನ್ ಕೊಂಡಿಬಾ ಮುಂಡೆ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಬಿಜೆಪಿ ಅಭ್ಯರ್ಥಿ ಪಂಕಜಾ ಮುಂಡೆ ಚುನಾವಣೆಯಲ್ಲಿ ಸೋತರೆ ನಾನು ಜೀವ ಕಳೆದುಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಅಲ್ಲದೆ ಪಂಕಜಾ ಮುಂಡೆ ಬೀಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನ ಬಜರಂಗ್ ಸೋನಾವಾನೆ ವಿರುದ್ಧ 6,553 ಮತಗಳಿಂದ ಸೋಲು ಕಂಡಿದ್ದಾರೆ. ಚುನಾವಣಾ ಫಲಿತಾಂಶದ ನಂತರ ಸಚಿನ್ ಬೇಸರಗೊಂಡು ಮೌನವಾಗಿದ್ದರು ಇದರ ಬೆನ್ನಲೇ ಸಚಿನ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಪೊಲೀಸರು ಈ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಂಡು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ವಿಚಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.
ತನಿಖೆಯ ಭಾಗವಾಗಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಕಿನಗಾಂವ್ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಭೌಸಾಹೇಬ್ ಖಂಡಾರೆ ತಿಳಿಸಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ-ತಾಯಿ ಹಾಗೂ ಸಹೋದರನೊಂದಿಗೆ ವಾಸವಿದ್ದರು.
ಇದನ್ನೂ ಓದಿ: ಅಪಾರ್ಟ್ಮೆಂಟ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ಯುವ ನಟಿ: ಕಾರಣ ನಿಗೂಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.