Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

ನಾಗರಿಕ ಆಡಳಿತದ ನೆರವಿಗಾಗಿ ಸಶಸ್ತ್ರ ಪಡೆಗಳ ಬಳಕೆಯನ್ನು ಸಮರ್ಥಿಸುತ್ತದೆ

Team Udayavani, Sep 27, 2023, 4:02 PM IST

1-sdsad

ಇಂಫಾಲ್ : ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿರುವ ಮಣಿಪುರ ಸರಕಾರವು ಇಡೀ ರಾಜ್ಯವನ್ನು “ಪ್ರಕ್ಷುಬ್ಧ ಪ್ರದೇಶ” ಎಂದು ಬುಧವಾರ ಘೋಷಣೆ ಮಾಡಿದೆ.

ರಾಜ್ಯ ಸರಕಾರದ ಅಧಿಸೂಚನೆಯ ಪ್ರಕಾರ, 19 ನಿರ್ದಿಷ್ಟ ಪೊಲೀಸ್ ಠಾಣೆ ಪ್ರದೇಶಗಳನ್ನು ಹೊರತುಪಡಿಸಿ ಇಡೀ ರಾಜ್ಯವನ್ನು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (AFSPA) ಅಡಿಯಲ್ಲಿ “ಪ್ರಕ್ಷುಬ್ಧ ಪ್ರದೇಶ” ಎಂದು ಘೋಷಿಸಲಾಗಿದೆ.

“ವಿವಿಧ ಉಗ್ರಗಾಮಿ/ಬಂಡಾಯ ಗುಂಪುಗಳ ಹಿಂಸಾತ್ಮಕ ಚಟುವಟಿಕೆಗಳು ಇಡೀ ಮಣಿಪುರ ರಾಜ್ಯದಲ್ಲಿ ನಾಗರಿಕ ಆಡಳಿತದ ನೆರವಿಗಾಗಿ ಸಶಸ್ತ್ರ ಪಡೆಗಳ ಬಳಕೆಯನ್ನು ಸಮರ್ಥಿಸುತ್ತದೆ” ಎಂದು ಸರಕಾರವು ಅಭಿಪ್ರಾಯಪಟ್ಟಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳ ಅಪಹರಣ ಮತ್ತು ಹತ್ಯೆಯ ವಿರುದ್ಧ ಇಂಫಾಲ್‌ನಲ್ಲಿ ಮಂಗಳವಾರ ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ‍್ಯಾಲಿಗಳು ನಡೆಡಿದ್ದವು. ವಿದ್ಯಾರ್ಥಿಗಳ ಮೃತದೇಹದ ದೃಶ್ಯಗಳು ಆನ್‌ಲೈನ್‌ನಲ್ಲಿ ಹೊರಹೊಮ್ಮಿದ ನಂತರ ಮಂಗಳವಾರ ಭಾರೀ ಪ್ರತಿಭಟನೆಗಳು ಪ್ರಾರಂಭವಾದವು. ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ನೊಂದಿಗೆ ಘರ್ಷಣೆ ನಡೆಸಿದ ಪರಿಣಾಮ ಕನಿಷ್ಠ 45 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳಾದ ಫಿಜಾಮ್ ಹೇಮ್ಜಿತ್ (20) ಮತ್ತು ಹಿಜಾಮ್ ಲಿಂತೋಯಿಂಗಂಬಿ (17) ಜುಲೈನಿಂದ ನಾಪತ್ತೆಯಾಗಿದ್ದರು. ಈಗ ಹೊರಬಿದ್ದಿರುವ ಎರಡು ಫೋಟೋಗಳಲ್ಲಿ ವಿದ್ಯಾರ್ಥಿಗಳು ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ಮತ್ತು ಇನ್ನೊಂದರಲ್ಲಿ ಎರಡು ಮೃತದೇಹಗಳನ್ನು ಹೊಂದಿರುವಂತೆ ತೋರಿಸಲಾಗಿದೆ.

ಹೊಸ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಸರಕಾರ ಮಂಗಳವಾರ ಮರು ಹೇರಿಕೆ ಮಾಡಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.