Manipur ಘರ್ಷಣೆಗೆ ಕಾರಣ; ವಿವಾದಾತ್ಮಕ ಆದೇಶ ಮಾರ್ಪಡಿಸಿದ ಹೈಕೋರ್ಟ್
ಭಾರೀ ಜನಾಂಗೀಯ ಹಿಂಸಾಚಾರಕ್ಕೆ ಕಾರಣವಾಗಿತ್ತು...
Team Udayavani, Feb 22, 2024, 8:15 PM IST
ಇಂಫಾಲ: ಮಣಿಪುರ ಹೈಕೋರ್ಟ್ 2023 ಮಾರ್ಚ್ 27 ರಂದು ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಶಿಫಾರಸು ಕಳುಹಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದ ತನ್ನ ವಿವಾದಾತ್ಮಕ ಆದೇಶದ ಪ್ಯಾರಾಗ್ರಾಫ್ ಅನ್ನು ಅಳಿಸಿ ಹಾಕಿದೆ.
ಹೈಕೋರ್ಟ್ ಆದೇಶವು ಮಣಿಪುರದಲ್ಲಿ ಭಾರೀ ಜನಾಂಗೀಯ ಹಿಂಸಾಚಾರಕ್ಕೆ ಕಾರಣವಾಗಿ ನೂರಾರು ಜನರ ಸಾವಿಗೆ ಕಾರಣವಾಗಿತ್ತು. ಬುಡಕಟ್ಟು ಕುಕಿ ಸಮುದಾಯವು ನ್ಯಾಯಾಲಯದ ನಿರ್ದೇಶನವನ್ನು ವಿರೋಧಿಸಿತ್ತು.
ನ್ಯಾಯಮೂರ್ತಿ ಗೊಲ್ಮೆಯ್ ಗೈಫುಲ್ಶಿಲು ಅವರ ಪೀಠವು, ”ಕಾನೂನಿನ ತಪ್ಪು ಕಲ್ಪನೆಯಲ್ಲಿ ತೀರ್ಪು ನೀಡಲಾಯಿತು, ಏಕೆಂದರೆ ಅರ್ಜಿದಾರರು ಈ ರಿಟ್ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅವರ ಸತ್ಯ ಮತ್ತು ಕಾನೂನಿನ ತಪ್ಪು ಕಲ್ಪನೆಯಿಂದಾಗಿ ನ್ಯಾಯಾಲಯಕ್ಕೆ ಸರಿಯಾಗಿ ಸಹಾಯ ಮಾಡಲು ವಿಫಲರಾಗಿದ್ದಾರೆ” ಎಂದು ಹೇಳಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಮಣಿಪುರದ ಬುಡಕಟ್ಟು ಸಂಘಟನೆಗಳಿಗೆ ಮಾರ್ಚ್ 27ರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿತ್ತು. ಇದನ್ನು ಅನುಸರಿಸಿ, ಆಲ್ ಮಣಿಪುರ ಬುಡಕಟ್ಟು ಒಕ್ಕೂಟದಿಂದ ಮನವಿ ಸಲ್ಲಿಸಲಾಗಿತ್ತು. ಈ ವರ್ಷ ಜನವರಿ 20 ರಂದು, ಹೈಕೋರ್ಟ್ ತನ್ನ ಮಾರ್ಚ್ 27 ರ ಆದೇಶವನ್ನು ಮಾರ್ಪಡಿಸಲು ಕೋರಿದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದ ಬಳಿಕ ಪ್ರತಿಕ್ರಿಯೆಯನ್ನು ಕೋರಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.