200 ಶಸ್ತ್ರಸಜ್ಜಿತರಿಂದ ಅಪಹರಣಕ್ಕೊಳಗಾದ ಪೊಲೀಸ್ ಅಧಿಕಾರಿಯನ್ನು ಕೆಲವೇ ಗಂಟೆಗಳಲ್ಲಿ ರಕ್ಷಣೆ
Team Udayavani, Feb 28, 2024, 11:11 AM IST
ಇಂಫಾಲ್ : ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮೈತೇಯ್ ಸಂಘಟನೆಯಾದ ಅರಂಬೈ ತೆಂಗೋಲ್ನ ಸುಮಾರು ಇನ್ನೂರಕ್ಕೂ ಹೆಚ್ಚು ಮಂದಿ ಶಸ್ತ್ರಸಜ್ಜಿತರಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಅಪಹರಿಸಿ ಉದ್ವಿಘ್ನ ಸ್ಥಿತಿ ನಿರ್ಮಾಣ ಮಾಡಿದ್ದರು.
ಅಪಹರಣದ ವಿಚಾರ ಗೊತ್ತಾಗುತ್ತಲೇ ಎಚ್ಚೆತ್ತ ಪೊಲೀಸರು ಮತ್ತು ಭದ್ರತಾ ಪಡೆಗಳ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸ್ ಅಧೀಕ್ಷಕ ಅಮಿತ್ ಸಿಂಗ್ ಅವರನ್ನು ಸುರಕ್ಷಿತವಾಗಿ ಅಪಹರಣಕಾರರಿಂದ ರಕ್ಷಣೆ ಮಾಡಿದ್ದಾರೆ ಎಂದು ಮಣಿಪುರ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಮಣಿಪುರದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಕೆಲ ಗುಂಪುಗಳ ನಡುವೆ ಘರ್ಷಣೆಗಳು ನಡೆದು ಹಿಂಸಾತ್ಮಕ ರೂಪ ಪಡೆದುಕೊಳ್ಳುತ್ತಿವೆ ಇದರ ಮುಂದುವರೆದ ಭಾಗವಾಗಿ ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಯನ್ನು ಮನೆಯಿಂದಲೇ ಅಪಹರಣ ಮಾಡಿದೆ ಪೊಲೀಸರು ಹಾಗೂ ಭದ್ರತಾ ಪಡೆಗಳ ತ್ವರಿತ ಕಾರ್ಯಾಚರಣೆಯಿಂದ ಅಪಹರಣಕ್ಕೊಳಗಾದ ಅಧಿಕಾರಿಯನ್ನು ರಕ್ಶಣೆ ಮಾಡಲಾಯಿತು.
ಇಂಫಾಲ್ ಪಶ್ಚಿಮದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮೊಯಿರಾಂಗ್ಥೆಮ್ ಅಮಿತ್ ಸಿಂಗ್ ಅವರನ್ನು ಇಂಫಾಲ್ ಪಶ್ಚಿಮ ಜಿಲ್ಲೆಯ ಅವರ ನಿವಾಸದಿಂದ ಮೈತೆಯ್ ಸಂಘಟನೆಯಾದ ಅರಂಬೈ ತೆಂಗೋಲ್ನ ಶಂಕಿತ ಸದಸ್ಯರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ಮಣಿಪುರ ಪೊಲೀಸ್ ಕಾರ್ಯಾಚರಣೆ ವಿಭಾಗದಲ್ಲಿ ನಿಯೋಜಿತರಾಗಿರುವ ಅಧಿಕಾರಿ ಅಮಿತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ನಡೆದ ದಾಳಿಯಲ್ಲಿ, ಅರಂಬೈ ತೆಂಗೋಲ್ಗೆ ಸೇರಿದ ಶಸ್ತ್ರಸಜ್ಜಿತ ಕಾರ್ಯಕರ್ತರು ಮನೆಯನ್ನು ಧ್ವಂಸಗೊಳಿಸಿದ್ದಾರೆ ಜೊತೆಗೆ ಗುಂಡಿನ ದಾಳಿಯಿಂದ ಕನಿಷ್ಠ ನಾಲ್ಕು ವಾಹನಗಳು ಹಾನಿಗೀಡಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Himachal ಬಂಡಾಯ-ಸರ್ಕಾರಕ್ಕೆ ಪತನ ಭೀತಿ- ಹೂಡಾ, ಡಿಕೆಶಿಗೆ ಬಿಕ್ಕಟ್ಟು ಶಮನ ಹೊಣೆಗಾರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.