![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 29, 2024, 7:15 AM IST
ಹೊಸದಿಲ್ಲಿ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ದೇಶವನ್ನೇ ಒಗ್ಗೂಡಿಸಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಈ ಅವಧಿ ದೇಶದ ಜನರಲ್ಲಿ ಏಕತೆಯ ಭಾವನೆಯನ್ನು ಮೂಡಿಸಿತ್ತು ಎಂದು ಅವರು ಹೇಳಿದ್ದಾರೆ.
ರವಿವಾರ ತಮ್ಮ ತಿಂಗಳ ಮತ್ತು ಪ್ರಸಕ್ತ ವರ್ಷದ ಮೊದಲ “ಮನ್ ಕಿ ಬಾತ್’ನಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಂದಿರ ಉದ್ಘಾಟನೆ ವೇಳೆ ದೇಶದ ಎಲ್ಲರೂ ಏಕತೆಯನ್ನು ಪ್ರದರ್ಶಿಸಿದರು. ಈ ಒಗ್ಗಟ್ಟು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತ ಕೊಂಡೊಯ್ಯಲು ನೆರವಾಗಬೇಕು ಎಂದು ಪ್ರಧಾನಿ ಹೇಳಿದ್ದಾರೆ.
ರಾಮನ ಕುರಿತಾಗಿರುವ ಭಕ್ತಿ ಗೀತೆಗಳನ್ನು ಹಾಡಿದ ವೀಡಿಯೋವನ್ನು ನೂರಾರು ಮಂದಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದರ ಜತೆಗೆ ಮಕರಸಂಕ್ರಾತಿಯಿಂದ ಮೊದ ಲ್ಗೊಂಡು ಜ. 22ರ ವರೆಗೆ ದೇಶಾದ್ಯಂತ ಸ್ವತ್ಛತೆ ಅಭಿಯಾನ ಕಾರ್ಯಕ್ರಮಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಅಭಿಯಾನ ನಿರಂತರವಾಗಿರಬೇಕು ಎಂದಿದ್ದಾರೆ.
ಆಡಳಿತ ದೇಶದ ಸಂವಿಧಾನ ರಚನೆಕಾರರಿಗೆ ಸ್ಫೂರ್ತಿಯಾಗಿತ್ತು ಎಂದು ಹೇಳಿದ ಅವರು, ಈ ಕಾರಣದಿಂದಲೇ ಆ ದಿನ ಮಾತನಾಡಿದ್ದ ವೇಳೆ ದೇವರಿಂದ ದೇಶ ಮತ್ತು ರಾಮನಿಂದ ರಾಷ್ಟ್ರ ಎಂದು ಹೇಳಿದ್ದಾಗಿ ನೆನಪಿಸಿಕೊಂಡಿದ್ದಾರೆ.
ಕನ್ನಡಿಗ ಸೇನಾನಿ
ಕೆ.ಎಂ. ಕಾರ್ಯಪ್ಪ ಸ್ಮರಣೆ
ದೇಶದ ಸೇನಾಪಡೆಯ ಮೊದಲ ಫೀಲ್ಡ್ ಮಾರ್ಷಲ್ ಆಗಿದ್ದ ಜ| ಕೆ.ಎಂ. ಕಾರ್ಯಪ್ಪ ಅವರನ್ನು ಪ್ರಧಾನಿ ಸ್ಮರಿಸಿಕೊಂಡಿದ್ದಾರೆ. 1899ರ ಜ. 28ರಂದು ಜನಿಸಿದ್ದ ಕೊಡಗು ಜಿಲ್ಲೆಯ ವೀರ ಸೇನಾನಿಯ ಬಗ್ಗೆ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ದೇಶದ ಸೇನೆಯನ್ನು ಆಧುನೀಕರಣಗೊಳಿಸುವಲ್ಲಿ ಅವರು ಪ್ರಧಾನ ಪಾತ್ರ ವಹಿಸಿದ್ದರು ಎಂದು ಮೋದಿ ಕೊಂಡಾಡಿದ್ದಾರೆ. ಜತೆಗೆ ಸೇನೆಯ ಬಲವರ್ಧನೆಯೂ ಆಗಿತ್ತು. ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.