ಕಲ್ಯಾಣಮಸ್ತು: ಅರ್ಚಕರನ್ನು ಮದುವೆಯಾದರೆ 3 ಲಕ್ಷ ರೂ. !


Team Udayavani, Oct 19, 2017, 9:53 AM IST

marriage.jpg

ಹೈದರಾಬಾದ್‌:  ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಯುವಕರನ್ನು ಮದುವೆಯಾಗುವ ಮಹಿಳೆಯರಿಗೆ 3 ಲಕ್ಷ ರೂ. ಗಳನ್ನು ನೀಡಲು ತೆಲಂಗಾಣ ಸರಕಾರ ನಿರ್ಧರಿಸಿದೆ. “ಕಲ್ಯಾಣಮಸ್ತು’ ಎಂಬ ಹೆಸರಿನ ಈ ಯೋಜನೆ ಮುಂದಿನ ತಿಂಗಳಿಂದಲೇ ಜಾರಿಗೆ ಬರಲಿದೆ.

ದೇವಸ್ಥಾನಗಳ ಅರ್ಚಕರು ಹಾಗೂ ಪುರೋಹಿತರಿಗೆ ತಮ್ಮ ಮಗಳನ್ನು ಮದುವೆ ಮಾಡಿಕೊಡಲು ಕನ್ಯಾಪಿತೃಗಳು ಹಿಂದೇಟು ಹಾಕುತ್ತಾರೆ. ಆದಾಯ ಕಡಿಮೆ ಇರುವುದೂ ಒಂದು ಕಾರಣ ಎಂಬುದನ್ನು ಮನಗಂಡಿರುವ ಸರಕಾರ, ಅರ್ಚಕರನ್ನು ವರಿಸಲು ಮುಂದಾಗುವವರಿಗೆ ಇಂಥ ಆಫ‌ರ್‌ ನೀಡಿದೆ. ಇದರೊಂದಿಗೆ, ಮದುವೆ ಸಮಾರಂಭ ನೆರವೇರಿಸಲು ಯುವತಿಯ ಮನೆಯವರಿಗೂ ಒಂದು ಲಕ್ಷ ರೂ.ಗಳನ್ನು ಸರಕಾರವೇ ಕೊಡಲಿದೆ!

ಏಕೀ ಯೋಜನೆ ?
ವರಾನ್ವೇಷಣೆ ವೇಳೆ ಗಂಡಿನ ಆದಾಯ ವನ್ನೇ ಪ್ರಧಾನವಾಗಿ ನೋಡುತ್ತಿರುವು ದರಿಂದ ದೇವಸ್ಥಾನದ ಅರ್ಚಕರಿಗೆ ಹಾಗೂ ಪುರೋಹಿತರಿಗೆ ಕನ್ಯೆ ಸಿಗುವುದೇ ಕಷ್ಟ ವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರ್ಚಕರ ವಿವಾಹಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ದಂಪತಿಯ ಜಂಟಿ ಖಾತೆಯಲ್ಲಿ 3 ಲಕ್ಷ ರೂ.ಗಳ ನಿರಖು ಠೇವಣಿ ಇರಿಸುವ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ, ಮದುವೆ ಖರ್ಚಿಗೆಂದು ಹೆಣ್ಣಿನ ಮನೆಯವರಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಲ ಬದಲಾಗಿದೆ. ಹುಡುಗಿಯರು ಮಹತ್ವಾಕಾಂಕ್ಷಿಗಳಾಗಿದ್ದು, ತಮ್ಮ ಸಂಗಾತಿ ಆಯ್ಕೆ ವಿಚಾರದಲ್ಲಿ ಬಹಳ ಚ್ಯೂಸಿಯಾಗಿ ದ್ದಾರೆ. ಉದ್ಯೋಗದ ಅನಿಶ್ಚಿತತೆಯಿಂದಾಗಿ ಸಾಫ್ಟ್ವೇರ್‌ ಎಂಜಿನಿಯರ್‌ಗಳಿಗೂ ಹುಡುಗಿ ಸಿಗುವುದು ಕಷ್ಟವಾಗಿರುವಾಗ, ಹೆಚ್ಚು ಆದಾಯ ಹಾಗೂ ಗೌರವದ ವೃತ್ತಿ ಯಾಗಿಲ್ಲದ ಅರ್ಚಕರಿಗೆ ಸೂಕ್ತ ಸಂಗಾತಿ ದುರ್ಲಭ ಎಂಬ ಸ್ಥಿತಿ ಇದೆ ಎಂದು ಮುಖ್ಯ ಮಂತ್ರಿಗಳ ಸಲಹೆಗಾರರೂ ಆಗಿರುವ ತೆಲಂಗಾಣ ಬ್ರಾಹ್ಮಣ ಸಂಕ್ಷೇಮ ಪರಿಷದ್‌ ಅಧ್ಯಕ್ಷ ಕೆ.ವಿ. ರಮಣಾಚಾರಿ ತಿಳಿಸಿದ್ದಾರೆ.
ತಮ್ಮ ಮಗಳನ್ನು ದೇವಸ್ಥಾನದ ಅರ್ಚಕ ರಿಗೆ ಮದುವೆ ಮಾಡಿಕೊಡಲು ಯಾರೂ ಮುಂದಾಗುತ್ತಿಲ್ಲ. ಇದರ ಪರಿಣಾಮ ಹಲವು ವರ್ಷಗಳ ಕಾಲ ಅಸಂಖ್ಯ ಅರ್ಚಕರು ಬ್ರಹ್ಮಚಾರಿಗಳಾಗಿಯೇ ಬದುಕು ವಂತಾಗಿದೆ. ಈ ಯೋಜನೆ ಅರ್ಚಕರಿಗೆ ಒಂದಿಷ್ಟು ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಜತೆಗೆ, ಅವರನ್ನು ವರಿಸಲು ಕನ್ಯೆಯರು ಮುಂದೆ ಬರಲಿ ಎನ್ನುವ ಉದ್ದೇಶ ಹೊಂದಿದೆ ಎಂದರು.

ಜಾರಿ ಹೇಗೆ?
ಕಲ್ಯಾಣಮಸ್ತು ಯೋಜನೆ ನವೆಂಬರ್‌ ತಿಂಗಳಲ್ಲಿ ಜಾರಿಗೆ ಬರಲಿದೆ. ರಾಷ್ಟ್ರೀಕೃತ ಬ್ಯಾಂಕ್‌ ಒಂದರಲ್ಲಿ ವಧು-ವರರ ಹೆಸರಿ ನಲ್ಲಿ ಜಂಟಿ ಖಾತೆ ತೆರೆದು ಮೂರು ವರ್ಷಗಳ ಅವಧಿಗೆ 3 ಲಕ್ಷ ರೂ. ನಿರಖು ಠೇವಣಿ ಇರಿಸಲಾಗುವುದು. ಅರ್ಚಕರನ್ನು ಮದುವೆಯಾಗುವ ಹುಡುಗಿಗೆ ಉತ್ತೇಜನ ನೀಡುವ ಜತೆಗೆ, ಅವರ ಸಂಸಾರಕ್ಕೆ, ಮಕ್ಕಳ ಪೋಷಣೆಗೆ ಕಷ್ಟ ಬಾರದಿರಲಿ ಎಂಬ ಸದಾ
ಶಯವನ್ನು ಈ ಹೊಸ ಯೋಜನೆ ಒಳ ಗೊಂಡಿದೆ ಎಂದು ರಮಣಾಚಾರಿ ವಿವರಿಸಿದರು.

ಅರ್ಜಿ ಸಲ್ಲಿಸಿ
ದೇವಸ್ಥಾನದ ಅರ್ಚಕರಿಗೆ ತಮ್ಮ ಪುತ್ರಿಯನ್ನು ವಿವಾಹ ಮಾಡಿಕೊಡಲು ಇಚ್ಛಿಸುವ ಪೋಷಕರು ವಧು ಹಾಗೂ ವರನ ವಿವರಗಳೊಂದಿಗೆ ಈ ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಎಷ್ಟು ಜೋಡಿಗಳಾದರೂ ಸೌಲಭ್ಯ ಪಡೆಯಬಹುದು. ಎಲ್ಲ ಅರ್ಹ ಅರ್ಜಿದಾರರಿಗೆ ಮದುವೆ ಸಹಾಯಧನ ಹಾಗೂ ವಿವಾಹ ವೆಚ್ಚದ ಹಣವನ್ನು ಕೊಡಲಾಗುತ್ತದೆ ಎಂದರು.

ಅರ್ಚಕರಿಗೂ ವೇತನಶ್ರೇಣಿ
ರಾಜ್ಯದಲ್ಲಿರುವ 4,805 ದೇವಸ್ಥಾನಗಳ ಅರ್ಚಕರು ರಾಜ್ಯ ಸರಕಾರ ನಿಗದಿಗೊಳಿಸಿದ ವೇತನ ಶ್ರೇಣಿಯಂತೆ ಸಂಬಳ ಪಡೆಯ ಲಿದ್ದಾರೆ ಎಂದು ತೆಲಂಗಾಣ ಸರಕಾರ ಈ ಹಿಂದೆಯೇ ಘೋಷಿಸಿತ್ತು. ದೇವಸ್ಥಾನಗಳ ಎಲ್ಲ ಅರ್ಚಕರು ಹಾಗೂ ಸಿಬಂದಿ ಪ್ರತಿ ತಿಂಗಳ ಮೊದಲ ದಿನವೇ ಬೇರೆಲ್ಲ ಸರಕಾರಿ ನೌಕರರಂತೆಯೇ ವೇತನ ಪಡೆಯಲಿದ್ದಾರೆ. ಸರಕಾರಿ ನೌಕರರ ಜತೆಗೇ ಅವರ ವೇತನ ವನ್ನೂ ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಕಳೆದ ತಿಂಗಳು ಪ್ರಕಟಿಸಿದ್ದರು.

ವೇತನ ಶ್ರೇಣಿಯಿಂದಾಗಿ ಅರ್ಚಕರೂ ಸಮಾಜದಲ್ಲಿ ಗೌರವಾನ್ವಿತ ಸ್ಥಾನಮಾನ ಗಳಿಸ
ಲಿದ್ದಾರೆ. ಕಲ್ಯಾಣಮಸ್ತು ಯೋಜನೆ ಅವರನ್ನು ಆರ್ಥಿಕವಾಗಿ ಇನ್ನಷ್ಟು ಸಬಲಗೊಳಿಸುವ ಜತೆಗೆ, ಸೂಕ್ತ ಸಂಗಾತಿ ಸಿಗು ವಂತೆ ಮಾಡುತ್ತದೆ ಎಂದು ರಮಣಾಚಾರಿ ಹೇಳಿದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.