ಗುಜರಾತಿ, ಮಾರ್ವಾಡಿ ಇಲ್ಲದಿದ್ರೆ ಮಹಾ ಪಾಪರ್!
Team Udayavani, Jul 31, 2022, 6:25 AM IST
ಮುಂಬಯಿ: “ಗುಜರಾತಿಗಳು ಮತ್ತು ರಾಜಸ್ಥಾನಿಯರನ್ನು ಮಹಾರಾಷ್ಟ್ರದಿಂದ ತೆಗೆದುಹಾಕಿದರೆ, ರಾಜ್ಯದಲ್ಲಿ ಬಿಡಿಗಾಸೂ ಉಳಿಯುವುದಿಲ್ಲ’ ಎಂದು ಹೇಳುವ ಮೂಲಕ ಮಹಾರಾಷ್ಟ್ರ ರಾಜ್ಯಪಾಲ ಭಗತ್ಸಿಂಗ್ ಕೋಶಿಯಾರಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಇವರ ಹೇಳಿಕೆಗೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಶಿವಸೇನೆ, ಕಾಂಗ್ರೆಸ್ನ ಹಲವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೋಶಿಯಾರಿ, “ಮಹಾ ರಾಷ್ಟ್ರದಿಂದ ಗುಜರಾತಿಗಳು ಮತ್ತು ರಾಜಸ್ಥಾನಿಯರನ್ನು ಹೊರಗಟ್ಟಿದರೆ ಇಡೀ ರಾಜ್ಯದಲ್ಲಿ ವಿಶೇಷವಾಗಿ ಮುಂಬಯಿ ಮತ್ತು ಥಾಣೆಯಲ್ಲಿ ಒಂದು ಪೈಸೆಯೂ ಉಳಿ ಯುವುದಿಲ್ಲ. ಮುಂಬಯಿ ದೇಶದ ವಾಣಿಜ್ಯ ರಾಜಧಾನಿ ಎಂಬ ಹಣೆಪಟ್ಟಿಯನ್ನೂ ಕಳೆದು ಕೊಳ್ಳಲಿದೆ. ಮುಂಬಯಿಗೆ ಇಂಥದ್ದೊಂದು ಹೆಸರು ಬಂದಿರುವುದು ರಾಜಸ್ಥಾನಿ ಮತ್ತು ಮಾರ್ವಾಡಿಗಳಿಂದ’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಏಕನಾಥ ಶಿಂಧೆ, “ಇದು ರಾಜ್ಯಪಾಲರ ವೈಯಕ್ತಿಕ ಹೇಳಿಕೆಯಾಗಿದ್ದು, ಅದನ್ನು ನಾನು ಬೆಂಬಲಿಸುವುದಿಲ್ಲ’ ಎಂದಿದ್ದರು.
“ಮನೆಗೆ ಕಳಿಸಬೇಕೋ, ಜೈಲಿಗೆ ಕಳಿಸಬೇಕೋ’: ಇನ್ನು, ಕೋಶಿಯಾರಿ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಉದ್ಧವ್ ಠಾಕ್ರೆ, “ರಾಜ್ಯಪಾಲರು ಹಿಂದೂಗಳನ್ನು ವಿಭಜಿಸಲು ನೋಡುತ್ತಿದ್ದಾರೆ. ಅವರ ಹೇಳಿಕೆಯು ಮರಾಠಿ ಮಾತನಾಡುವ ಮಣ್ಣಿನ ಮಕ್ಕಳು ಮತ್ತು ಮರಾಠಿ ಘನತೆಗೆ ಮಾಡಿದ ಅವಮಾನ. ಕೋಶಿಯಾರಿ ಅವರನ್ನು ವಾಪಸ್ ಮನೆಗೆ ಕಳುಹಿಸಬೇಕೇ, ಜೈಲಿಗೆ ಕಳುಹಿಸಬೇಕೇ ಎಂಬುದನ್ನು ಸರಕಾರ ನಿರ್ಧರಿಸಬೇಕು’ ಎಂದಿದ್ದಾರೆ.
ರಾಜ್ಯಪಾಲರ ರಾಜೀನಾಮೆ ಕೇಳಿ: ರಾಜ್ಯಪಾಲರ ಭಾಷಣದ ಉದ್ದೇಶ ಸ್ಪಷ್ಟವಾಗಿದೆ. ಮರಾಠಿಗರು ಅಥವಾ ಮಹಾರಾಷ್ಟ್ರಿಗರು ಭಿಕ್ಷುಕರು ಎಂದು ಅವರು ತಿಳಿದಂತಿದೆ ಎಂದು ಶಿವಸೇನೆಯ ನಾಯಕ ಸಂಜಯ್ ರವೂತ್ ಗುಡುಗಿದ್ದಾರೆ.
“ಮೊರಾರ್ಜಿ ದೇಸಾಯಿ ಅವರೂ ಕೂಡ 105 ಮರಾಠಾ ಹುತಾತ್ಮರನ್ನು ಇಷ್ಟೊಂದು ಅಗೌರವವಾಗಿ ಕಂಡಿರಲಿಲ್ಲ. ಮುಖ್ಯಮಂತ್ರಿ ಶಿಂಧೆಯವರೇ, ಕೇಳಿಸಿಕೊಳ್ಳುತ್ತಿದ್ದೀರಾ? ನಿಮಗೆ ಸ್ವಾಭಿಮಾನ ಎಂಬುದೇನಾದರೂ ಇದ್ದರೆ, ಈ ಕೂಡಲೇ ರಾಜೀನಾಮೆ ಕೇಳಿ’ ಎಂದು ಅವರು ತಿಳಿಸಿದ್ದಾರೆ.
ರಾಜ್ಯಪಾಲರು ಕ್ಷಮೆ ಕೇಳಲಿ: ಕಾಂಗ್ರೆಸ್: ರಾಜ್ಯಪಾಲ ಕೋಶಿಯಾರಿ ಅವರು ಮಹಾರಾಷ್ಟ್ರಿಗರಿಗೆ ನೋವುಂಟಾಗುವಂಥ ಮಾತುಗಳನ್ನಾಡಿದ್ದಾರೆ. ಹಾಗಾಗಿ, ಅವರು ಮರಾಠಿಗರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ರಾಜಭವನ ಸ್ಪಷ್ಟನೆ
ವಿವಾದದ ಬಗ್ಗೆ ರಾಜಭವನ ಸ್ಪಷ್ಟನೆ ಕೊಟ್ಟಿದೆ. ರಾಜ್ಯಪಾಲರು ತಮ್ಮ ಭಾಷಣದಲ್ಲಿ ಮಹಾರಾಷ್ಟ್ರದ ಏಳ್ಗೆಗೆ ರಾಜಸ್ಥಾನೀಯರು, ಗುಜರಾತಿಗಳ ಕೊಡುಗೆಯೇನು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ. ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ಅವರಿಗೆ ಇರಲಿಲ್ಲ ಎಂದು ರಾಜಭವನದಿಂದ ಹೊರ ಬಿದ್ದಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.