ನೋಟು ಅಪಮೌಲ್ಯ ವರ್ಷಾಚರಣೆಗೆ ಸಾಮೂಹಿಕ ರಾಷ್ಟ್ರಗೀತೆ ಗಾಯನ


Team Udayavani, Nov 5, 2017, 6:00 AM IST

demonitisation.jpg

ಜೈಪುರ: ನೋಟು ಅಪಮೌಲ್ಯ ಜಾರಿಗೊಂಡು ನವೆಂಬರ್‌ 8ಕ್ಕೆ ಒಂದು ವರ್ಷ ಪೂರೈಸಲಿರುವ ಹಿನ್ನೆಲೆ ಯಲ್ಲಿ, ಅದರ ವರ್ಷಾಚರಣೆಯನ್ನು ವಿಶಿಷ್ಟವಾಗಿ ನಡೆಸಲು ರಾಜಸ್ಥಾನ ಸರಕಾರ ಸಿದ್ಧತೆ ನಡೆಸಿದೆ. ಅದರಂತೆ,  ಅಂದು ಬರೋಬ್ಬರಿ 50 ಸಾವಿರ ಮಂದಿ ಸಾಮೂಹಿಕವಾಗಿ ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಹಾಡಲಿದ್ದಾರೆ.

ಕಾರ್ಯಕ್ರಮ ಸಂಘಟನೆಯನ್ನು ಯುವ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿನ ಸಂಸ್ಥೆಯಾದ ರಾಜಸ್ಥಾನ ಯುವ ಮಂಡಳಿ ನಿರ್ವಹಿಸಲಿದೆ. ಅಲ್ಲದೆ ಆರ್‌ಎಸ್‌ಎಸ್‌ ಬೆಂಬಲಿತ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಪ್ರತಿಷ್ಠಾನ ಕೂಡ ಇದಕ್ಕೆ ಕೈಜೋಡಿಸಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರೇ ಮುಖ್ಯ ಅತಿಥಿಯಾಗಿರಲಿದ್ದಾರೆ.

ಬಾಲಿವುಡ್‌ನ‌ ಜನಪ್ರಿಯ ಸಂಗೀತಗಾರ ಆನಂದ್‌ಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಿನಿಮಾಗಳಲ್ಲಿನ ದೇಶಭಕ್ತಿಗೀತೆಗಳನ್ನು ಹಾಡಲಿದ್ದಾರೆ. ಸಿಎಂ ರಾಜೇ ನೇತೃತ್ವದಲ್ಲಿ ಯೋಗಾಭ್ಯಾಸವೂ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ 400 ಖಾಸಗಿ ಶಾಲೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಶಾಲಾ ಮಕ್ಕಳನ್ನು ಇಲ್ಲಿಗೆ ಕರೆತರಲಾಗುತ್ತದೆ. ಅಲ್ಲದೆ ಎನ್‌ಜಿಒ ಮತ್ತು ಸಾಮಾಜಿಕ, ಧಾರ್ಮಿಕ ಸಂಘಟನೆಗಳನ್ನೂ ಈ ಕಾರ್ಯ ಕ್ರಮದಲ್ಲಿ  ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ.

ವಿಪಕ್ಷಗಳಿಂದ ಟೀಕಾಪ್ರಹಾರ: ರಾಜಸ್ಥಾನ ಸರಕಾರದ ಈ ನಿರ್ಧಾರವನ್ನು ವಿಪಕ್ಷಗಳು ಟೀಕಿಸಿದ್ದು, ವಾಸ್ತವವನ್ನು ಮುಚ್ಚಿಡಲು ನೋಟು ಅಪಮೌಲ್ಯ ನಿರ್ಧಾರಕ್ಕೆ ರಾಷ್ಟ್ರೀಯತೆಯ ಬಣ್ಣ ಹಚ್ಚಲಾಗುತ್ತಿದೆ ಎಂದಿದೆ. ಅಲ್ಲದೆ ಈಗಾಗಲೇ ನವೆಂಬರ್‌ 8ರಂದು ಕರಾಳ ದಿನ ಆಚರಣೆ ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದೆ. ನೋಟು ಅಪಮೌಲ್ಯದ ವೈಫ‌ಲ್ಯವನ್ನು ಮುಚ್ಚಿಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಬಿಜೆಪಿ ಧರ್ಮಾಧಾರಿತ ರಾಜಕೀಯ ಮಾಡುತ್ತಿದ್ದು, ಪ್ರಶ್ನೆಗಳಿಗೆ ಉತ್ತರಿಸದೇ ಸನ್ನಿವೇಶಕ್ಕೆ ರಾಷ್ಟ್ರೀಯತೆಯ ಬಣ್ಣ ಹಚ್ಚುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಪೈಲಟ್‌ ಆರೋಪಿಸಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ಜೈಪುರ ಪುರಸಭೆಯ ಎಲ್ಲ ಉದ್ಯೋಗಿಗಳೂ ಕಚೇರಿಗೆ ಆಗಮಿಸುವಾಗ ಮತ್ತು ತೆರಳುವಾಗ ರಾಷ್ಟ್ರಗೀತೆ ಹಾಡಬೇಕು ಎಂದು ಜೈಪುರ ಮೇಯರ್‌ ಅಶೋಕ್‌ ಲಹೋಟಿ ಆದೇಶಿಸಿದ್ದರು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.