![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 23, 2021, 8:50 AM IST
ಹೊಸದಿಲ್ಲಿ: ಉತ್ತರಾಖಂಡದ ಲಂಖಗಾ ಪಾಸ್ನಲ್ಲಿ 17,000 ಅಡಿ ಎತ್ತರದಲ್ಲಿ ಭಾರತೀಯ ವಾಯುಪಡೆಯು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಅ.18ರಂದು ಭಾರೀ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಪ್ರವಾಸಿಗರು, ಚಾರಣಿಗರು ಮತ್ತು ಗೈಡ್ ಗಳು ಸೇರಿದಂತೆ 17 ಮಂದಿ ಕಣ್ಮರೆಯಾಗಿದ್ದರು. ಲಂಖಗಾ ಪಾಸ್ ಗೆ ಹೋಗುವ ಪ್ರದೇಶದಿಂದ ಇಲ್ಲಿಯವರೆಗೆ 11 ಶವಗಳನ್ನು ಹೊರತೆಗೆಯಲಾಗಿದೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯನ್ನು ಉತ್ತರಾಖಂಡದ ಹರ್ಸಿಲ್ನೊಂದಿಗೆ ಸಂಪರ್ಕಿಸುವ ಅತ್ಯಂತ ಕಡಿದಾದ ಪಾಸ್ ಗಳಲ್ಲಿ ಲಂಖಗಾ ಪಾಸ್ ಒಂದಾಗಿದೆ.
ಇದನ್ನೂ ಓದಿ:ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ
ಅಕ್ಟೋಬರ್ 20ರಂದು ಅಧಿಕಾರಿಗಳು ಮಾಡಿದ ಎಸ್ ಒಎಸ್ ಕರೆಗೆ ಐಎಎಫ್ ಪ್ರತಿಕ್ರಿಯಿಸಿ ಹರ್ಸಿಲ್ ತಲುಪಲು ಎರಡು ಸುಧಾರಿತ ಲಘು ಹೆಲಿಕಾಪ್ಟರ್ ಗಳನ್ನು ನಿಯೋಜಿಸಿತು. ಅಕ್ಟೋಬರ್ 20ರಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ ಮೂವರು ಸಿಬ್ಬಂದಿ ಎಎಲ್ ಎಚ್ ಕ್ರಾಫ್ಟ್ ನಲ್ಲಿ ಮಧ್ಯಾಹ್ನ ಗರಿಷ್ಠ 19500 ಅಡಿ ಎತ್ತರದಲ್ಲಿ ಶೋಧ ಮತ್ತು ರಕ್ಷಣೆ ಪ್ರಾರಂಭಿಸಿದ್ದರುಎಂದು ಎನ್ ಡಿಟಿವಿ ವರದಿ ಮಾಡಿದೆ.
ಇನ್ನೂ ಎರಡು ಶವಗಳನ್ನು ಪತ್ತೆ ಮಾಡಲಾಗಿದೆ ಮತ್ತು ಡೋಗ್ರಾ ಸ್ಕೌಟ್ಸ್, 4 ಅಸ್ಸಾಂ ಮತ್ತು ಎರಡು ಐಟಿಬಿಪಿ ತಂಡಗಳ ಜಂಟಿ ಗಸ್ತು ಮೂಲಕ ನಿತಲ್ ತಾಚ್ ಶಿಬಿರಕ್ಕೆ ಮರಳಿ ತರಲಾಗುತ್ತಿದೆ. ಉಳಿದ ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಶೋಧವನ್ನು ಎಎಲ್ಎಚ್ ಸಿಬ್ಬಂದಿ ಶನಿವಾರ ನಡೆಸಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.