![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 6, 2022, 10:51 AM IST
ಉತ್ತರ ಪ್ರದೇಶ: ಮಸೀದಿಯೊಳಗೆ ಹನುಮಾನ್ ಚಾಲೀಸ ಪಠಿಸುತ್ತೇವೆ ಎಂದು ಹಿಂದೂ ಮಹಾಸಭಾ ಕರೆಕೊಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಥುರಾದಲ್ಲಿ ಮಂಗಳವಾರ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ.
ಸುಮಾರು 1,500 ಪೊಲೀಸರು, ಸಶಸ್ತ್ರ ಪೊಲೀಸ್ ಪಡೆ ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಜನ್ಮಸ್ಥಾನದ ದೇವಸ್ಥಾನ,ಶಾಹಿ ಮಸೀದಿ ಈದ್ಗಾ ಬಳಿ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ಹೇಳಿದ್ದಾರೆ.
ಸೋಮವಾರ, ಅಖಿಲ ಭಾರತ ಹಿಂದೂ ಮಹಾಸಭಾದ ದಿನೇಶ್ ಕೌಶಿಕ್, ಮಸೀದಿಯೊಳಗೆ ಹನುಮಾನ್ ಚಾಲೀಸಾವನ್ನು ಪಠಿಸುತ್ತೇವೆ ಎಂದು ಕರೆ ನೀಡಿದ್ದರು. ಈ ಕಾರಣದಿಂದ ಯಾವುದೇ ಅನಾಹುತ ಸಂಭವಿಸಬಾರದು, ಕೋಮುಗಲಭೆಗೆ ಕಾರಣವಾಗಬಾರದೆನ್ನುವ ನಿಟ್ಟಿನಲ್ಲಿ ಮಥುರಾದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.
ಸೆಕ್ಷನ್ 144 ನ್ನು ಜಾರಿಗೊಳಿಸಲಾಗಿದ್ದು, ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಕಳೆದ ವರ್ಷವೂ ಹಿಂದೂ ಮಹಸಭಾ ಇಂಥದ್ದೇ ಕರೆಯನ್ನು ನೀಡಿತ್ತು. ಆ ಯೋಜನೆಯನ್ನು ಕೂಡ ಜಿಲ್ಲಾಡಳಿತ ವಿಫಲವಾಗಿಸಿತ್ತು.
Uttar Pradesh | Police barricading placed at various places in Mathura this morning & vehicle checking being done by them in wake of a call given by Akhil Bharat Hindu Mahasabha to recite Hanuman Chalisa at Shri Krishna Janmabhoomi complex-Shahi Idgah Masjid maidan here today. pic.twitter.com/LvDK1uy8UJ
— ANI UP/Uttarakhand (@ANINewsUP) December 6, 2022
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.