ಮಿಡಲ್‌ ಕ್ಲಾಸ್‌ಗೆ ಮೆಡಲ್‌


Team Udayavani, Jul 6, 2019, 3:08 AM IST

lakshmi

ಮಧ್ಯಂತರ ಬಜೆಟ್‌ನಲ್ಲಿ ಪ್ರಸ್ತಾಪಿಸಿದ 5 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಬಜೆಟ್‌ನಲ್ಲಿ ಜಾರಿಗೊಳಿಸಿದ್ದಾರೆ. 5 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರು ಶೇ. 100 ತೆರಿಗೆ ರಿಯಾಯಿತಿ ಪಡೆಯಲಿದ್ದಾರೆ.

ಆದರೆ ಇಲ್ಲಿ ಸರ್ಕಾರಕ್ಕೆ ಉಂಟಾಗುವ ನಷ್ಟವನ್ನು ಸರಿದೂಗಿಸಿಕೊಳ್ಳಲು 2 ಕೋಟಿ ರೂ.ಗಿಂತ ಹೆಚ್ಚಿನ ಆದಾಯ ಹೊಂದಿರುವವರು ಹೆಚ್ಚುವರಿ ಸರ್ಚಾರ್ಜ್‌ ತೆರಬೇಕಾಗುತ್ತದೆ. 2-5 ಕೋಟಿ ರೂ. ವಹಿವಾಟು ಹೊಂದಿರುವವರು ಶೇ. 25 ರಷ್ಟು ಸರ್ಚಾರ್ಜ್‌ ಪಾವತಿ ಮಾಡಬೇಕಾಗುತ್ತದೆ.

ಈ ಹಿಂದೆ ಇದು ಶೇ. 15 ರಷ್ಟಿತ್ತು. ಇದರಿಂದಾಗಿ ಇವರು ಹೆಚ್ಚುವರಿ ಶೇ. 3 ತೆರಿಗೆ ಪಾವತಿ ಮಾಡಿದಂತಾಗುತ್ತದೆ. ಇದೇ ರೀತಿ 5 ಕೋಟಿ ರೂ.ಗಿಂತ ಹೆಚ್ಚು ಆದಾಯ ಹೊಂದಿರುವವರು ಶೇ. 37 ರಷ್ಟು ಸರ್ಚಾರ್ಜ್‌ ಪಾವತಿ ಮಾಡಬೇಕು. ಮೂಲ ತೆರಿಗೆ ವಿನಾಯಿತಿಯನ್ನು 2 ಲಕ್ಷ ರೂ. ಇಂದ 2.5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ.

ಹಿರಿಯ ನಾಗರಿಕರಿಗೆ ಇದನ್ನು 2.5 ಲಕ್ಷ ರೂ. ಇಂದ 3 ಲಕ್ಷ ರೂ.ಗೆ ಏರಿಸಲಾಗಿದೆ. ಅಂದರೆ 2.5 ಲಕ್ಷ ರೂ. ಆದಾಯ ಹೊಂದಿರುವ 60 ಕ್ಕಿಂತ ಕಡಿಮೆ ವಯಸ್ಸಿನವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಿಲ್ಲ. 2.5 ಲಕ್ಷ ರೂ. ಇಂದ 5 ಲಕ್ಷ ರೂ.ವರೆಗೆ ಆದಾಯ ಹೊಂದಿರುವವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕು.

ಇವರಿಗೆ ತೆರಿಗೆ ರಿಯಾಯಿತಿ ಇದ್ದರೂ ರಿಟರ್ನ್ಸ್ ಸಲ್ಲಿಕೆ ಮಾಡಬೇಕಾಗುತ್ತದೆ. ಅದೇ ರೀತಿ, 5 ಲಕ್ಷಕ್ಕಿಂತ ಹೆಚ್ಚು ಆದಾಯ ಇದ್ದವರು 2.5 ಲಕ್ಷ ರೂ. ಇಂದ 5 ಲಕ್ಷ ರೂ.ವರೆಗಿನ ಆದಾಯದ ಮೇಲೆ ಶೇ. 5 ರ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಇದು ಈ ಹಿಂದೆ ಶೇ. 10 ಇತ್ತು.

ಸ್ಟಾಂಡರ್ಡ್‌ ಡಿಡಕ್ಷನ್‌ 50 ಸಾವಿರಕ್ಕೆ: ನೌಕರ ವರ್ಗದವರು ಹಾಗೂ ಪಿಂಚಣಿದಾರರಿಗೆ ಒದಗಿಸಲಾಗುತ್ತಿರುವ ಸ್ಟಾಂಡರ್ಡ್‌ ಡಿಡಕ್ಷನ್‌ ಅನ್ನು 40 ಸಾವಿರ ರೂ. ಇಂದ 50 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ.

ತೆರಿಗೆ ಫೈಲಿಂಗ್‌ಗೆ ಪ್ಯಾನ್‌ ಬೇಕಿಲ್ಲ: ಆದಾಯ ತೆರಿಗೆ ಪಾವತಿ ಮಾಡಲು ಈವರೆಗೆ ಪ್ಯಾನ್‌ ಕಡ್ಡಾಯವಾಗಿತ್ತು. ಆದರೆ ಈ ನಿಯಮವನ್ನು ಈ ಬಾರಿಯ ಬಜೆಟ್‌ನಲ್ಲಿ ತೆಗೆದುಹಾಕಲಾಗಿದೆ. ಬದಲಿಗೆ ಆಧಾರ್‌ ಇದ್ದರೂ ಸಾಕು ಎಂಬ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಪ್ಯಾನ್‌ ಮತ್ತು ಆಧಾರ್‌ ಲಿಂಕ್‌ ಮಾಡಲಾಗಿದ್ದು, ಆಧಾರ್‌ ಬಳಸಿಯೂ ಆದಾಯ ತೆರಿಗೆ ಪಾವತಿಸಬಹುದು.
ಆದರೆ ಪ್ಯಾನ್‌ಗೆ ಆಧಾರ್‌ ಲಿಂಕ್‌ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗಲಿದೆ. ಸದ್ಯ ಪ್ಯಾನ್‌ ಹಾಗೂ ಆಧಾರ್‌ ಲಿಂಕ್‌ ಮಾಡಿಲ್ಲದಿದ್ದರೆ, ಪ್ಯಾನ್‌ ಕಾರ್ಡ್‌ ಅನ್ನು ಅಮಾನ್ಯಗೊಳಿಸಲಾಗುತ್ತಿದೆ. ಆದರೆ ಈಗಾಗಲೇ ಪ್ಯಾನ್‌ ಕಾರ್ಡ್‌ ಬಳಸಿ ಮಾಡಿದ ವಹಿವಾಟುಗಳನ್ನು ರಕ್ಷಿಸುವ ದೃಷ್ಟಿಯಿಂದ, ಪ್ಯಾನ್‌ ಕಾರ್ಡ್‌ ಅನ್ನು ನಿಷ್ಕ್ರಿಯಗೊಳಿಸಲು ನಿರ್ಧರಿಸಲಾಗಿದೆ.

ರಿಟರ್ನ್ ಫೈಲಿಂಗ್‌ ಕಡ್ಡಾಯ: ಒಂದು ವಿತ್ತ ವರ್ಷದಲ್ಲಿ ಒಂದು ಕೋಟಿ ರೂಪಾಯಿಗೂ ಹೆಚ್ಚು ಡೆಪಾಸಿಟ್‌ ಮಾಡಿದ ಎಲ್ಲ ವ್ಯಕ್ತಿಗಳೂ ರಿಟರ್ನ್ ಫೈಲಿಂಗ್‌ ಮಾಡುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲ, ವಿದೇಶ ಪ್ರಯಾಣದಲ್ಲಿ 2 ಲಕ್ಷ ರೂ. ವೆಚ್ಚ ಮಾಡಿದರೆ ಅಥವಾ 1 ಲಕ್ಷ ರೂ. ವಿದ್ಯುತ್‌ ಬಿಲ್‌ ಪಾವತಿ ಮಾಡಿದರೆ ಕೂಡ ರಿಟರ್ನ್ ಫೈಲ್‌ ಮಾಡುವುದು ಕಡ್ಡಾಯವಾಗಿರುತ್ತದೆ.

ಎಲೆಕ್ಟ್ರಿಕ್‌ ವಾಹನ ಖರೀದಿಗೆ ಪ್ರೋತ್ಸಾಹ: ಎಲೆಕ್ಟ್ರಿಕ್‌ ವಾಹನಗಳ ಬಳಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಮಹತ್ವದ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ, ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಲು ನಿರ್ಧರಿಸಿದೆ. 1.5 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಪಡೆಯಬಹುದಾಗಿದೆ. ಇದು ಸಾಲದ ಮೇಲಿನ ಬಡ್ಡಿಗೆ ಮಾತ್ರ ಅನ್ವಯಿಸಲಿದ್ದು, ಒಟ್ಟು ಸಾಲದ ಮೇಲೆ 2.5 ಲಕ್ಷ ರೂ.ವರೆಗೂ ವಿನಾಯಿತಿ ಪಡೆಯಬಹುದಾಗಿದೆ. ಇನ್ನೊಂದೆಡೆ ಬ್ಯಾಟರಿಗಳನ್ನು ಉತ್ಪಾದಿಸಲು ಪ್ರೋತ್ಸಾಹ ನೀಡಲಾಗುತ್ತಿದೆ.

ಎನ್‌ಪಿಎಸ್‌ಗೆ ಇನ್ನು ತೆರಿಗೆ ಇಲ್ಲ: ಕಳೆದ ಡಿಸೆಂಬರ್‌ನಲ್ಲಿ ಸಂಪುಟ ಸಭೆಯಲ್ಲಿ ಘೋಷಣೆಯಾದಂತೆ ಎನ್‌ಪಿಎಸ್‌ನಿಂದ ಹಣ ಹಿಂಪಡೆಯುವುದರ ಮೇಲೆ ಈ ಹಿಂದೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಸದ್ಯ ಎನ್‌ಪಿಎಸ್‌ನಿಂದ ಹಣ ಹಿಂಪಡೆಯುವಾಗ ಶೇ. 40 ರಷ್ಟು ಮೊತ್ತದ ಮೇಲೆ ಆದಾಯ ತೆರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಈಗ ಇದನ್ನು ಶೇ. 100 ಕ್ಕೆ ಏರಿಸಲಾಗಿದ್ದು, ಎನ್‌ಪಿಎಸ್‌ನಿಂದ ಹಣ ಹಿಂಪಡೆದರೆ ಯಾವುದೇ ಆದಾಯ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ.

ಕಾರ್ಪೊರೇಟ್‌ ವಲಯಕ್ಕೆ ನಿರಾಳ: ಉದ್ಯಮ ವಲಯದ ನಿರೀಕ್ಷೆಯಂತೆ ಕಾರ್ಪೊರೇಟ್‌ ತೆರಿಗೆಯನ್ನು ಶೇ. 30 ರಿಂದ ಶೇ. 25ಕ್ಕೆ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. 400ಕೋಟಿ ರೂ. ವಾರ್ಷಿಕ ವಹಿವಾಟು ಹೊಂದಿರುವ ಕಾರ್ಪೊರೇಟ್‌ ಕಂಪನಿಗಳಿಗೆ ಇದು ಅನ್ವಯವಾಗುತ್ತದೆ. ಕಳೆದ ವರ್ಷ 250 ಕೋಟಿ ರೂ. ವಹಿವಾಟು ಹೊಂದಿರುವ ಕಾರ್ಪೊರೇಟ್‌ ಕಂಪನಿಗಳಿಗೆ ಆದಾಯ ತೆರಿಗೆಯನ್ನು ಶೇ. 25 ಕ್ಕೆ ಇಳಿಕೆ ಮಾಡಲಾಗಿತ್ತು. ಸಣ್ಣ ಉದ್ಯಮಗಳಿಗೆ ಪೂರಕ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಖಾಸಗಿ ಮತ್ತು ಸರ್ಕಾರಿ ಕಂಪನಿಗಳೆರಡೂ ನಿವ್ವಳ ಆದಾಯದ ಮೇಲೆ ತೆರಿಗೆ ಪಾವತಿ ಮಾಡಬೇಕಿದೆ. ಈ ಹಿಂದೆ 500 ಕೋಟಿ ರೂ.ವರೆಗೆ ಆದಾಯ ಹೊಂದಿರುವ ಕಂಪನಿಗಳು ಶೇ. 30ರ ತೆರಿಗೆ ಪಾವತಿ ಮಾಡಬೇಕಿತ್ತು. ಈಗ 400 ಕೋಟಿ ರೂ.ವರೆಗೆ ಆದಾಯ ಹೊಂದಿರುವ ಕಂಪನಿಗಳು ಶೇ. 25 ಹಾಗೂ 500 ಕೋಟಿ ರೂ. ವಹಿವಾಟು ಹೊಂದಿರುವ ಕಂಪನಿಗಳು ಶೇ. 30 ಆದಾಯ ತೆರಿಗೆ ಪಾವತಿ ಮಾಡಬೇಕಿದೆ.

ಹೆಚ್ಚು ಕ್ಯಾಶ್‌ಗೆ 2% ತೆರಿಗೆ: ದೇಶದಲ್ಲಿ ಡಿಜಿಟಲ್‌ ವಹಿವಾಟಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಕ್ಕಾಗಿ, 1 ಕೋಟಿ ರೂ.ಗಿಂತ ಹೆಚ್ಚು ನಗದು ಹಿಂಪಡೆಯುವ ವ್ಯಕ್ತಿಗೆ ಶೇ. 2 ಟಿಡಿಎಸ್‌ ವಿಧಿಸಲು ನಿರ್ಧರಿಸಲಾಗಿದೆ. ಆದರೆ ಕೆಲವು ಉದ್ಯಮಗಳಿಗೆ ಹೆಚ್ಚಿನ ಪ್ರಮಾಣದ ನಗದು ವಹಿವಾಟು ನಡೆಸುವುದು ಅಗತ್ಯವಾಗಿದ್ದು, ಇವುಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಯಾವ ಉದ್ಯಮಗಳಿಗೆ ಇದರಿಂದ ವಿನಾಯಿತಿ ನೀಡಲಾಗುತ್ತದೆ ಎಂಬುದನ್ನು ಆರ್‌ಬಿಐ ಸಲಹೆ ಪಡೆದು ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಪ್ರಕಟಣೆ ಹೊರಡಿಸಲಿದೆ. ಡಿಜಿಟಲ್‌ ವಹಿವಾಟು ಹೆಚ್ಚಳಕ್ಕೆ ನರೇಂದ್ರ ಮೋದಿ ಸರ್ಕಾರ ಕಳೆದ ಐದು ವರ್ಷದಿಂದಲೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಈ ಕ್ರಮ ಈ ನಿಟ್ಟಿನಲ್ಲಿ ಮತ್ತೂಂದು ಮಹತ್ವದ ಹೆಜ್ಜೆಯಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.