![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 2, 2020, 9:11 PM IST
ನವದೆಹಲಿ: ಇದೇ ಮೊದಲ ಬಾರಿಗೆ, ದೇಶದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಗಸ್ತು ನಡೆಸುವ ಸೇನಾ ಹೆಲಿಕಾಪ್ಟರ್ಗಳಲ್ಲಿ ಮಿನಿ ಆಸ್ಪತ್ರೆಯಂಥ ಸೌಲಭ್ಯಗಳನ್ನು ಕಲ್ಪಿಸಲು (ಏರ್ ಆ್ಯಂಬುಲೆನ್ಸ್ ಮಾದರಿಯಲ್ಲಿ) ನಿರ್ಧರಿಸಲಾಗಿದೆ. ಈ ಮೂಲಕ, ನಕ್ಸಲ್ ದಾಳಿಗಳಲ್ಲಿ ಗಾಯಗೊಂಡವರಿಗೆ, ಕಾರ್ಯಾಚರಣೆ ವೇಳೆ ಅಸ್ವಸ್ಥರಾದವರಿಗೆ, ತಕ್ಷಣದ ಚಿಕಿತ್ಸೆ ನೀಡಲು ಇದು ಸಹಾಯವಾಗಲಿದೆ.
ಇಂಥ ಏರ್ ಆ್ಯಂಬುಲೆನ್ಸ್ ಮಾದರಿಯ ಹೆಲಿಕಾಪ್ಟರ್ಗಳ ನಿರ್ವಹಣೆಗಾಗಿ ವಿಶೇಷ ವೈದ್ಯರು ಹಾಗೂ ಸಹಾಯಕರ ತಂಡವನ್ನು ನೇಮಿಸಲಾಗಿದ್ದು, ಇವರಿಗೆ ಛತ್ತೀಸ್ಗಡದ ಜಗದಲ್ಪುರದ ಸಿಆರ್ಪಿಎಫ್ ಶಿಬಿರದಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
“”ಅಗತ್ಯ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆ ಹಾಗೂ ತ್ವರಿತವಾಗಿ ಆಸ್ಪತ್ರೆಗೆ ರವಾನೆಯಂಥ ಸೇವೆಗಳು ಈ ಏರ್ ಆ್ಯಂಬುಲೆನ್ಸ್ಗಳಿಂದ ಸಿಗುವುದರಿಂದ ಯೋಧರಿಗೆ ಹೆಚ್ಚು ಅನುಕೂಲವಾಗುತ್ತದೆ” ಎಂದು ಸಿಆರ್ಪಿಎಫ್ ಮುಖ್ಯಸ್ಥರಾದ ಎ.ಪಿ. ಮಹೇಶ್ವರಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.