![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 30, 2017, 11:12 AM IST
ಚಂಡೀಗಢ: ಹಲವು ಪಕ್ಷಗಳು ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಬಗ್ಗೆ ಎತ್ತಿರುವ ತಕರಾರು ಹಾಗೂ ಅಪನಂಬಿಕೆ ನಿವಾರಣೆಗೆ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆಯುವುದಾಗಿ ಚುನಾವಣಾ ಆಯೋಗದ ಮುಖ್ಯಸ್ಥ ನಸೀಂ ಜೈದಿ ಹೇಳಿದ್ದಾರೆ.
ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ ಎಂಬುದನ್ನು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿಕೊಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಪಾರದರ್ಶಕತೆ ಮತ್ತು ಮತದಾರರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ವಿವಿ ಪ್ಯಾಟ್ ಯಂತ್ರ ಬಳಸಲು ನಿರ್ಧರಿಸಲಾಗಿದೆ. ರಾಜಕೀಯ ಪಕ್ಷಗಳು ಇವಿಎಂಗಳ ಮೇಲೆ ಅನುಮಾನ ಪಡಬೇಕಿಲ್ಲ. ನಾವು ಸಾಕಷ್ಟು ಕಾಲಾವಕಾಶ ಕೊಡುತ್ತೇವೆ, ಆರೋಪಿಸುವ ವರು ಇದನ್ನು ತಿರುಚಿ ತೋರಿಸಲಿ ಎಂದು ಮತ್ತೂಮ್ಮೆ ಸವಾಲು ಹಾಕಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಗೆ ಯಾವುದೇ ತೊಂದರೆಯಾಗದಂತೆ 15 ಲಕ್ಷ ವಿವಿಪ್ಯಾಟ್ ಯಂತ್ರ ಖರೀದಿಗೆ ಆದೇಶಿಸಿದ್ದೇವೆ. ಅವು ಸಕಾಲಕ್ಕೆ ನಮ್ಮ ಕೈಸೇರಲಿವೆ ಎಂದಿದ್ದಾರೆ ಜೈದಿ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.