![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 13, 2021, 4:48 PM IST
ಪಣಜಿ: “ಸರ್ಕಾರ ತುಮಚಾ ದಾರಿ” ಇದು ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಜನತೆಗೆ ಮಾಹಿತಿ ನೀಡುವ ಬದಲಾಗಿ ಈ ಕಾರ್ಯಕ್ರಮದ ಭಾಷಣದಲ್ಲಿ ವಿರೋಧಿಗಳ ಬಗ್ಗೆ ಠೀಕೆ ಮಾಡಲಾಗುತ್ತಿದೆ. ಇದರಿಂದಾಗಿ ಈ ಸರ್ಕಾರಿ ಕಾರ್ಯಕ್ರಮವು “ರಾಜಕಾರಣ ತುಮಚಾ ದಾರಿ” ಎಂದು ಹೆಸರಿಡುವಂತಾಗಿದೆ. ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಇದುವರೆಗೂ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ ಸರ್ಕಾರವು ಈ ಕಾರ್ಯಕ್ರಮಗಳಿಗೆ ಬೇಕಾಬಿಟ್ಟಿ ಖರ್ಚು ಮಾಡುತ್ತಿದೆ ಎಂದು ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ರಾಜ್ಯ ಸರ್ಕಾರದ ವಿರುದ್ಧ ಠೀಕಾ ಪ್ರಹಾರ ನಡೆಸಿದರು.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಅಕ್ಟೋಬರ್ 18 ಮತ್ತು 19 ರಂದು ಎರಡು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಈ ಎರಡು ದಿನಗಳಲ್ಲಿ ಜನರ ಸಮಸ್ಯೆಯನ್ನು ಮಂಡಿಸಲು ಎಷ್ಟು ಸಮಯ ಸಿಗಲಿದೆ. ಸರ್ಕಾರವು ಹೀಗೆ ಕಡಿಮೆ ದಿನಗಳ ಅಧಿವೇಶನ ಆಯೋಜಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇದು ಪ್ರಸಕ್ತ ಸರ್ಕಾರದ ಕೊನೆಯ ಅಧಿವೇಶನವಾಗಿದ್ದು ನಂತರ ಚುನಾವಣೆಯ ನಂತರ ಹೊಸ ಸರ್ಕಾರ ಸ್ಥಾಪನೆಯಾದ ನಂತರ ಅಧಿವೇಶನ ನಡೆಯಲಿದೆ ಎಂದು ಧವಳೀಕರ್ ನುಡಿದರು.
ಕಳೆದ 22 ವರ್ಷ ನಾನು ರಾಜಕಾರಣದಲ್ಲಿ ಹಾಗೂ ಎಂಜಿಪಿ ಪಕ್ಷದಲ್ಲಿ ಏಕನಿಷ್ಠನಾಗಿದ್ದೇನೆ. ಹೆಸರು ಹಾಳು ಮಾಡಲು ಕೆಲ ಸುಳ್ಳು ಸುದ್ಧಿಯನ್ನು ಹರಡಿಸಲಾಗುತ್ತಿದೆ ಎಂದು ಧವಳೀಕರ್ ನುಡಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.